Angkita Dutta Case: ಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್ ಬಂಧಿಸಲು ಕರ್ನಾಟಕಕ್ಕೆ ದಾವಿಸಿದ ಅಸ್ಸಾಂ ಪೊಲೀಸರು
ಬೆಂಗಳೂರು, ಏಪ್ರಿಲ್ 23: ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಯುವ ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ಬಿವಿ ಶ್ರೀನಿವಾಸ್ ಅವರನ್ನು ಬಂಧಿಸಲು ಅಸ್ಸಾಂ ಪೊಲೀಸರು ಕರ್ನಾಟಕಕ್ಕೆ ಧಾವಿಸಿದ್ದಾರೆ.
ಅಮಾನತುಗೊಂಡಿರುವ ಅಸ್ಸಾಂ ಘಟಕದ ಯುವ ಕಾಂಗ್ರೆಸ್ ಮುಖ್ಯಸ್ಥೆ ಅಂಕಿತಾ ದತ್ತಾ ಅವರು ನೀಡಿದ ಕಿರುಕುಳದ ದೂರಿನ ಆಧಾರದ ಮೇಲೆ ಭಾರತೀಯ ಯುವ ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ ಅವರನ್ನು ಬಂಧಿಸಲು ಅಸ್ಸಾಂ ಪೊಲೀಸರ ತಂಡ ಶನಿವಾರ ಕರ್ನಾಟಕಕ್ಕೆ ತೆರಳಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶ್ರೀನಿವಾಸ್ ಬಿ.ವಿ ವಿರುದ್ಧ ದಿಸ್ಪುರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 509, 294, 341, 352, 354, 354 ಎ, ಮತ್ತು 506 ರ ಅಡಿಯಲ್ಲಿ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲಗಳ ಪ್ರಕಾರ ಶ್ರೀನಿವಾಸ್ರನ್ನು ಬಂಧಿಸಲು ಅಸ್ಸಾಂ ಪೊಲೀಸರ ನಾಲ್ವರ ತಂಡವನ್ನು ಕರ್ನಾಟಕಕ್ಕೆ ಕಳುಹಿಸಲಾಗಿದೆ.
ಅಸ್ಸಾಂ ಡಿಜಿಪಿ ಜಿ.ಪಿ. ಸಿಂಗ್ ಈ ಬೆಳವಣಿಗೆಯನ್ನು ಖಚಿತಪಡಿಸಿದ್ದಾರೆ. ಆದರೆ, ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಅವರು ನಿರಾಕರಿಸಿದರು.
ಇದಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಪರಿಸ್ಥಿತಿಯನ್ನು ಕಾಂಗ್ರೆಸ್ ನಿಭಾಯಿಸುತ್ತಿರುವುದು ನೀರಸವಾಗಿದೆ ಎಂದು ಪ್ರತಿಪಾದಿಸಿದರು. ಈ ವಿಷಯದ ಬಗ್ಗೆ ಕಾನೂನು ತನ್ನದೇ ಆದ ಶಿಸ್ತು ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.
ಅಸ್ಸಾಂ ಕಾಂಗ್ರೆಸ್ ಈ ವಿಷಯವನ್ನು ನಿಭಾಯಿಸಿದ ರೀತಿ ದುಃಖಕರವಾಗಿದೆ. ಅವರು ತನಿಖಾ ಸಮಿತಿಯನ್ನು ಸ್ಥಾಪಿಸಬೇಕಿತ್ತು. ಅದರ ತನಿಖೆಯಂತೆ ಕ್ರಮ ಕೈಗೊಳ್ಳಬೇಕಿತ್ತು ಎಂದು ಅವರು ತಿಳಿಸಿದ್ದಾರೆ.
ಅಸ್ಸಾಂನ ದಿಸ್ಪುರ್ ಪೊಲೀಸ್ ಠಾಣೆಗೆ ಬುಧವಾರ ಸಲ್ಲಿಸಿದ ಪೊಲೀಸ್ ದೂರಿನಲ್ಲಿ, ಅಂಕಿತಾ ದತ್ತಾ ಅವರು 'ಶ್ರೀನಿವಾಸ್ ಬಿವಿ ಆರು ತಿಂಗಳಿಂದ ಲೈಂಗಿಕ ಕಿರುಕುಳ ನೀಡುವ ಮೂಲಕ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಮತ್ತು ತನ್ನ ವಿರುದ್ಧ ಕಾಂಗ್ರೆಸ್ ಮುಖಂಡರಿಗೆ ದೂರು ನೀಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದಾಗಿ ಬೆದರಿಕೆ ಹಾಕಿದ್ದಾರೆ' ಎಂದು ಆರೋಪಿಸಿದ್ದಾರೆ.
'ಅವರು ನನ್ನ ತೋಳು ಹಿಡಿದು ಎಳೆದಾಡಿದರು. ಕೆಟ್ಟ ಪದಗಳನ್ನು ಬಳಸಿ ನನಗೆ ಬೆದರಿಕೆ ಹಾಕಿದರು. ನಾನು ಅವರ ವಿರುದ್ಧ ಪಕ್ಷದ ವರಿಷ್ಠರಿಗೆ ದೂರು ನೀಡಿದರೆ ಕಾಂಗ್ರೆಸ್ನಲ್ಲಿ ನನ್ನ ವೃತ್ತಿಜೀವನವನ್ನು ಹಾಳುಮಾಡುತ್ತೇನೆ' ಎಂದು ದತ್ತಾ ದೂರಿದ್ದಾರೆ.
ಕಾಂಗ್ರೆಸ್ನ ಅಸ್ಸಾಂ ಘಟಕವು ದತ್ತಾ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಅವರ ಅಸಮಾಧಾನವನ್ನು ಪರಿಹರಿಸಲಾಗಿದೆ ಎಂದು ಪಕ್ಷ ಹೇಳಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications