Nikhil Kumaraswamy: ನಿಖಿಲ್ ಕುಮಾರಸ್ವಾಮಿ ಸೋಲು: ಭಾವನಾತ್ಮಕ ಪೋಸ್ಟ್ ಮಾಡಿದ ಅನಿತಾ ಕುಮಾರಸ್ವಾಮಿ
ಬೆಂಗಳೂರು, ನವೆಂಬರ್ 25: ನನ್ನ ಮಗ ಮೂರನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ, ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ ಎಂದು ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಫಲಿತಾಂಶದ ನಂತರ ಇದೇ ಮೊದಲ ಬಾರಿಗೆ ಎಕ್ಸ್ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿರುವ ಅವರು; ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ.
ಅನಿತಾ ಕುಮಾರಸ್ವಾಮಿ ಅವರ ಪೋಸ್ಟ್ ಹೀಗಿದೆ
ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಪರಾಜಯ ಹೊಂದಿದ್ದಾನೆ, ಒಪ್ಪುತ್ತೇನೆ. ಚುನಾವಣೆ ವ್ಯವಸ್ಥೆಯಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ ಹಾಗೂ ಒಬ್ಬರು ಗೆಲ್ಲಬೇಕಾದರೆ ಇನ್ನೊಬ್ಬರು ಸೋಲಲೇಬೇಕಾಗುತ್ತದೆ. ಆದರೆ, ಸೋಲಿಗೆ ಅನೇಕ ಕಾರಣಗಳಿರುತ್ತವೆ. ಹಾಗೆಂದು ನಿಖಿಲ್ ಸೋಲಿನ ಕಾರಣಗಳ ಬಗ್ಗೆ ಚರ್ಚಿಸುವುದು ನನ್ನ ಉದ್ದೇಶವಲ್ಲ.

ರಾಜಕಾರಣದಲ್ಲಿ ನನಗಾಗಲಿ, ನನ್ನ ಪತಿಗಾಗಲಿ ಅಥವಾ ನನ್ನ ಪೂಜ್ಯ ಮಾವನವರಿಗೇ ಆಗಲಿ ಗೆಲುವು, ಸೋಲು ಹೊಸದೇನಲ್ಲ. ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದೇವೆ. ಗೆದ್ದಾಗ ಬೀಗಿಲ್ಲ, ಸೋತಾಗ ಕುಗ್ಗಿಲ್ಲ. ಸೋತ ಹತಾಶೆಯಲ್ಲಿ ಅನ್ಯರನ್ನು ಹೀಗಳೆದಿಲ್ಲ. ನನ್ನ ಮಗನಿಗೂ ಇದೇ ಅನ್ವಯ ಆಗುತ್ತದೆ.
ನನ್ನ ಮಗನ ಬಗ್ಗೆ ರಾಜ್ಯದ ಜನತೆಗೆ ಹೆಚ್ಚೇನೂ ಹೇಳುವ ಅಗತ್ಯವಿಲ್ಲ. ಅವನು ಒಳ್ಳೆಯ ಮಗ, ಒಳ್ಳೆಯ ಪತಿ, ಒಳ್ಳೆಯ ತಂದೆ. ರಾಜಕಾರಣಕ್ಕೆ ಬರುವ ಮುನ್ನ ಒಳ್ಳೆಯ ನಾಯಕ ನಟ. ಅವನಂಥ ಒಳ್ಳೆಯ ಮಗನನ್ನು ಪಡೆದಿದ್ದಕ್ಕಾಗಿ ನಾನೂ ನನ್ನ ಪತಿ ಹೆಮ್ಮೆಪಡುತ್ತೇವೆ.

ತಾಯಿಯಾಗಿ ಅವನ ಯಶಸ್ಸನ್ನು ಸಂಭ್ರಮಿಸುತ್ತೇನೆ. ಅವನಿಗೆ ಕಷ್ಟ ಎದುರಾದಾಗ ಕಣ್ಣೀರಿಟ್ಟಿದ್ದೇನೆ. ನನ್ನ ಕರುಳಬಳ್ಳಿಯ ಮೇಲೆ ನನಗಷ್ಟು ಮಮಕಾರ ಇರುತ್ತದಲ್ಲವೇ? ನನ್ನಂತಹ ಎಲ್ಲಾ ತಾಯಂದಿರಿಗೂ ನನ್ನ ಭಾವನೆಗಳು ಅರ್ಥವಾಗುತ್ತವೆ ಎನ್ನುವ ವಿಶ್ವಾಸ ನನ್ನದು.
ನನ್ನ ಮಗ 3ನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ, ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ. ಅವನ ಮನಸ್ಸು, ಹೃದಯ ವೈಶಾಲ್ಯತೆ ಏನೆಂದು ತಾಯಿಯಾಗಿ ನನಗೆ ಚನ್ನಾಗಿ ಗೊತ್ತು ಎಂದು ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.
ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ಒಬ್ಬರು ಗೆಲ್ಲಬೇಕಾದರೆ ಇನ್ನೊಬ್ಬರು ಸೋಲಲೇಬೇಕಾಗುತ್ತದೆ. ರಾಜಕಾರಣದಲ್ಲಿ ನನಗಾಗಲಿ,ನನ್ನ ಪತಿಗಾಗಲಿ,ನನ್ನ ಪೂಜ್ಯ ಮಾವನವರಿಗೇ ಆಗಲಿ ಗೆಲುವು-ಸೋಲು ಹೊಸದಲ್ಲ. ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದೇವೆ. ಗೆದ್ದಾಗ ಬೀಗಿಲ್ಲ,ಸೋತಾಗ ಕುಗ್ಗಿಲ್ಲ.ಸೋತ ಹತಾಶೆಯಲ್ಲಿ ಅನ್ಯರನ್ನು ಹೀಗಳೆದಿಲ್ಲ.#Channapatna pic.twitter.com/w2g9ycFjA8
— ಅನಿತಾ ಕುಮಾರಸ್ವಾಮಿ | Anitha Kumaraswamy (@Anitha_JDS) November 25, 2024
ನಾನು ಸದಾ ಆ ಭಗವಂತನಲ್ಲಿ ನಂಬಿಕೆ ಇಟ್ಟಿದ್ದೇನೆ. ನನ್ನ ಮಗನ ಮೇಲೆ ಆ ದೈವದ ಕರುಣೆ, ಅನುಗ್ರಹವಿದೆ ಹಾಗೂ ಚನ್ನಪಟ್ಟಣ ಜನತೆಯ ಪ್ರೀತಿ ವಿಶ್ವಾಸವೂ ಸದಾ ಅವನ ಮೇಲಿರುತ್ತದೆ. ಇಂದಲ್ಲ, ನಾಳೆ ಜನಸೇವೆ ಮಾಡುವ ಅವಕಾಶ ಅವನಿಗೆ ಸಿಕ್ಕೇ ಸಿಗುತ್ತದೆ ಎನ್ನುವ ಅಚಲ ನಂಬಿಕೆ ನನ್ನದು ಎಂದು ಅನಿತಾ ಕುಮಾರಸ್ವಾಮಿ ಅವರು ಹೇಳಿದ್ದಾರೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications