ಪುಸ್ತಕ ಪ್ರೇಮಿಗಳೇ, ಮಂಡ್ಯದಲ್ಲಿ ಒಂದುವಾರ ಸರ್ವಜ್ಞನ ಪುಸ್ತಕ ಮೇಳ
ಮಂಡ್ಯ,ಏಪ್ರಿಲ್,01: 'ರಸಿಕನಾಡಿದ ಮಾತು ಶಶಿಯುದಿಸಿ ಬಂದಂತೆ, ರಸಿಕನಲ್ಲದವನ ಬರಿಮಾತು ಕಿವಿಯೊಳ್ಕೂರ್ದಸಿಯು ಬಡಿದಂತೆ... ಮಾತು ಬಲ್ಲಾಂತಗೆ ಮಾತೊಂದು ಮಾಣಿಕವು, ಮಾತ ತಾನರಿಯದ ಅಧಮಗೆ ಮಾಣಿಕವು ತೂತು ಬಿದ್ದಂತೆ'...ಈ ಸಾಲುಗಳು ಯಾರದು ಎಂದು ನೆನಪಾಗಿರಬೇಕಲ್ವಾ? ನಿಜ ಇವು ಸರ್ವಜ್ಞನ ವಚನದ ಸಾಲು
ಪುಸ್ತಕ ಪ್ರೇಮಿ ಅಂಕೇಗೌಡ ಅವರು ತ್ರಿಪದಿಗಳ ಬ್ರಹ್ಮ ಸರ್ವಜ್ಞ ಅವರ ಜಯಂತಿ ಅಂಗವಾಗಿ ಮಂಡ್ಯದ ಪಾಂಡವಪುರದ ವಿಶ್ವೇಶ್ವರನಗರ ಬಡಾವಣೆಯಲ್ಲಿರುವ ತಮ್ಮ ಪುಸ್ತಕದ ಮನೆಯಲ್ಲಿ ಸರ್ವಜ್ಞರ ಕೃತಿಗಳ ಪ್ರದರ್ಶನ ಏರ್ಪಡಿಸಿದ್ದು, ಇಂದಿನಿಂದ ಒಂದು ವಾರ ಕಾಲ ಪುಸ್ತಕಗಳು ಲಭ್ಯವಾಗಲಿವೆ.[2014 ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ]

ಅಂಕೇಗೌಡರು ಪುಸ್ತಕದ ಮೇಲೆ ಅಪಾರ ಪ್ರೀತಿಯುಳ್ಳವರು. ಜನರಿಗೂ ಜ್ಞಾನ ಭಂಡಾರ ನೀಡಬೇಕೆಂಬ ಹಂಬಲದವರಾದ ಇವರು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪುಸ್ತಕ ಪ್ರದರ್ಶನ ಏರ್ಪಡಿಸಿ ಶ್ಲಾಘನೆಗೆ ಒಳಗಾಗಿದ್ದಾರೆ.
ಯಾವ ಯಾವ ಪುಸ್ತಕಗಳು ಲಭ್ಯವಾಗಲಿವೆ?
ವಚನಕಾರ ಸರ್ವಜ್ಞನ ಜೀವನ ಚರಿತ್ರೆ, ಸರ್ವಜ್ಞ ಅವರ ವಚನಗಳು, ಸರ್ವಜ್ಞ ಸಂಪದ, ಸಮಾಜ ಸುಧಾರಣೆ ಸರ್ವಜ್ಞ, ಬಸವ ವಚನ ಸಂಗ್ರಹ, ಸರ್ವಜ್ಞ ಕವಿ, ಸರ್ವಜ್ಞನ ಸಮಾಜ ದರ್ಶನ ಹಾಗೂ ಸಾಹಿತ್ಯ ಸತ್ವ, ಸರ್ವಜ್ಞ ವಚನಾಮೃತ, ಸರ್ವರ ಸರ್ವಜ್ಞ, ಸರ್ವಜ್ಞ ವಚನಗಳನ್ನು ತಮಿಳಿಗೆ ಅನುವಾದ ಮಾಡಿರುವ ಪುಸ್ತಕಗಳು, ಸರ್ವಜ್ಞನ ದೃಷ್ಠಿಯಲ್ಲಿ ಹೆಣ್ಣು ಎಂಬ ಪುಸ್ತಕಗಳು ಸೇರಿದಂತೆ ವಿವಿಧ ಮಾದರಿಯಲ್ಲಿ ಅನೇಕ ಲೇಖಕರು ಬರೆದಿರುವ ನೂರಾರು ಪುಸ್ತಕಗಳು ಪ್ರದರ್ಶನದಲ್ಲಿವೆ.[ಭಗವದ್ಗೀತೆಯಲ್ಲಿನ ತಾರತಮ್ಯದ ರೋಗದ ಗಡ್ಡೆ ಬಿಸಾಕಬೇಕಿದೆ: ದೇವನೂರು]

ಸರ್ವಜ್ಞನ ವಚನದ ಬಗ್ಗೆ ತಿಳಿಯದವರೇ ವಿರಳ. ಆದರೆ ಸರ್ವಜ್ಞ ಯಾರು ಆತನ ಹುಟ್ಟೂರು, ಇನ್ನಿತರೆ ವಿಷಯದ ಬಗ್ಗೆ ಗೊಂದಲವಿದೆ. ಸರ್ವಜ್ಞರ ಕುರಿತಂತೆ ಅನೇಕ ಕೃತಿಗಳು ಹೊರಬಂದಿದ್ದು, ಆ ಬಗ್ಗೆ ಸುಮಾರು 150ಕ್ಕೂ ಹೆಚ್ಚಿನ ಪುಸ್ತಕಗಳು ಪ್ರದರ್ಶನದಲ್ಲಿಡಲಾಗಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications