ಅನ್ನಭಾಗ್ಯ ಯೋಜನೆ : ಮುಖ್ಯಮಂತ್ರಿಗಳಿಗೆ ಜಮೀರ್ ಪತ್ರ
Recommended Video
ಬೆಂಗಳೂರು, ಜುಲೈ 11 : ಅನ್ನಭಾಗ್ಯ ಯೋಜನೆಯಲ್ಲಿ ನೀಡುವ ಅಕ್ಕಿಯನ್ನು ಕಡಿತಗೊಳಿಸಿರುವುದಕ್ಕೆ ವಿರೋಧ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಖಾನ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಈ ಕುರಿತು ಪತ್ರ ಬರೆದಿದ್ದಾರೆ.
ಬುಧವಾರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹಮದ್ ಖಾನ್ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ನೀಡುವ ಘೋಷಣೆಯನ್ನು ಪುನಃ ಪರಿಶೀಲಿಸಿ ಎಂದು ಮನವಿ ಮಾಡಿದ್ದಾರೆ.
ಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಆಯವ್ಯಯದ Highlights
ಜುಲೈ 5ರಂದು ಎಚ್.ಡಿ.ಕುಮಾರಸ್ವಾಮಿ ಅವರು 2018-19ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದರು. ಅನ್ನಭಾಗ್ಯ ಯೋಜನೆಯಡಿ ನೀಡುವ 7 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಲಾಗುತ್ತದೆ ಎಂದು ಘೋಷಣೆ ಮಾಡಿದ್ದರು.
ಅನ್ನಭಾಗ್ಯ ಯೋಜನೆಯಲ್ಲಿ ಕೆಲವು ಬದಲಾವಣೆ
ಅನ್ನಭಾಗ್ಯ ಯೋಜನೆಯಡಿ ನೀಡುವ ಅಕ್ಕಿಯನ್ನು ಕಡಿತ ಮಾಡಿದ್ದಕ್ಕೆ ಹಲವು ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಸದನದಲ್ಲಿಯೂ ಈ ಬಗ್ಗೆ ಚರ್ಚೆ ನಡೆದಿತ್ತು. ಈಗ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿಗಳಿಗೆ ಈ ಕುರಿತು ಪತ್ರ ಬರೆದಿದ್ದಾರೆ.
ಅನ್ನಭಾಗ್ಯ ಅಕ್ಕಿ ಕಡಿತಕ್ಕೆ ಸಂಸದ ಡಿ.ಕೆ.ಸುರೇಶ್ ಅಸಮಾಧಾನ
ಬಜೆಟ್ನಲ್ಲಿ ಮಾಡಿದ ಘೋಷಣೆ ಏನು? :
* ಅನ್ನಭಾಗ್ಯ ಯೋಜನೆಯ ಮೌಲ್ಯವರ್ಧನೆ ಮಾಡುವುದಾಗಿ ಕುಮಾರಸ್ವಾಮಿ ಘೋಷಣೆ ಮಾಡಿದ್ದರು.
* ಪ್ರತಿ ಫಲಾನುಭವಿಗೆ 5 ಕೆ.ಜಿ ಉಚಿತ ಅಕ್ಕಿ ನೀಡಲಾಗುತ್ತದೆ ಎಂದು ಹೇಳಿದ್ದರು
* ರಿಯಾಯಿತಿ ದರದಲ್ಲಿ ಅರ್ಧ ಕೆ.ಜಿ. ತೊಗರಿಬೇಳೆ ಹಾಗೂ ಪ್ರತಿ ಬಿಪಿಎಲ್ ಪಡಿತರ ಚೀಟಿಗೆ 1 ಕೆ.ಜಿ. ಪಾಮ್ ಎಣ್ಣೆ, 1 ಕೆ.ಜಿ. ಅಯೋಡಿನ್ ಮತ್ತು ಕಬ್ಬಿಣಾಂಶಯುಕ್ತ ಉಪ್ಪು ಹಾಗೂ 1 ಕೆ.ಜಿ. ಸಕ್ಕರೆ ವಿತರಣೆ ಮಾಡುವುದಾಗಿ ಘೋಷಿಸಿದ್ದರು.