ಅಣ್ಣಾ ಕ್ಯಾಂಟೀನ್ : 5 ರೂ.ಗೆ ಐದು ಇಡ್ಲಿ, ಉಪ್ಪಿಟ್ಟು, ಚಿತ್ರಾನ್ನ!
ಬೆಂಗಳೂರು, ಫೆ.4 : ಹಟ್ಟಿ ಭಾಗ್ಯ, ಅಣ್ಣ ಇಡ್ಲಿ, ಅಣ್ಣ ತಾರುಣ್ಯ ಆರೋಗ್ಯ ಯೋಜನೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಂತೆ ರಾಜ್ಯ ಯೋಜನಾ ಮಂಡಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡಲು ಮುಂದಾಗಿದೆ.
ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷರಾದ ಸಿ.ಎಂ. ಇಬ್ರಾಹಿಂ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಮಂಗಳವಾರ ನಡೆದ ರಾಜ್ಯ ಯೋಜನಾ ಮಂಡಳಿಯ ಸಭೆಯ ಬಳಿಕ ಮಾತನಾಡಿದ ಅವರು, ಸರ್ಕಾರವು ಜನಪರವಾದ ಅಭಿವೃದ್ಧಿ ಹಾಗೂ ಕಲ್ಯಾಣ ಕಾರ್ಯಕ್ರಮಗಳ ಕುರಿತಂತೆ ಕೈಗೊಳ್ಳಬಹುದಾದ ಹೊಸ ಯೋಜನೆಗಳ ಬಗ್ಗೆ ಶಿಫಾರಸು ಮಾಡಲು ತೀರ್ಮಾನಿಸಿದೆ ಎಂದರು. [ರಾಜ್ಯದ ಜನರಿಗೆ 10 ರೂ.ಲಾಟರಿ ಭಾಗ್ಯ?]

ಅಣ್ಣ ಇಡ್ಲಿ : ಈ ಯೋಜನೆಯಡಿ 5 ರೂ.ಗೆ 5 ಇಡ್ಲಿ, ಉಪ್ಪಿಟ್ಟು , ಚಿತ್ರಾನ್ನ, ಪುಳಿಯೊಗರೆ, ಮೊಸರನ್ನ ನೀಡುವ ಪ್ರಾಯೋಗಿಕವಾಗಿ ಯೋಜನೆಯನ್ನು ಜಾರಿಗೊಳಿಸಬಹುದಾಗಿದೆ. ಮೊದಲು ಬೆಂಗಳೂರಿನಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿ ನಂತರ ಮೈಸೂರು, ಹುಬ್ಬಳ್ಳಿ, ಧಾರವಾಡ, ಮಂಗಳೂರು ಹಾಗೂ ಕಲಬುರಗಿ ನಗರಗಳಿಗೆ ವಿಸ್ತರಿಸಲಾಗುವುದು ಎಂದರು. ['ಅಮ್ಮಾ ಇಡ್ಲಿ' ಮೇಲೆ ಸಿ.ಎಂ.ಇಬ್ರಾಹಿಂ ಕಣ್ಣು]
ಹಟ್ಟಿ ಭಾಗ್ಯ : ಬುಡಕಟ್ಟು ಜನರ ಆರ್ಥಿಕ ಅಭಿವೃದ್ಧಿ ಮಹಿಳಾ ಸಬಲೀಕರಣ ಹಾಗೂ ಸಾಲದ ಮೇಲಿನ ಸಹಾಯಧನ, ಬಡ್ಡಿ ನೀಡುವ ಸಲುವಾಗಿ ಹಟ್ಟಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸುವಂತೆ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು. ಈ ಯೋಜನೆಯಿಂದಾಗಿ 8 ರಿಂದ 9 ಲಕ್ಷ ಜನರಿಗೆ ಉಪಯೋಗವಾಗಲಿದೆ ಎಂದು ತಿಳಿಸಿದರು.
ಎಪಿಎಲ್ ಕಾರ್ಡ್ ಕೊಡುಗೆ : ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಜನರಿಗೆ 'ಅನ್ನಭಾಗ್ಯ' ಯೋಜನೆ ಜಾರಿಯಲ್ಲಿದೆ. ಅದರಂತೆ, ಎಪಿಎಲ್ ಕಾರ್ಡುದಾರರಿಗೆ ತಿಂಗಳಿಗೆ 15 ಕೆಜಿ ಅಕ್ಕಿ, ಎಣ್ಣೆ, ಬೆಳೆ, ಐಯೋಡೈಸ್ಡ್ ಉಪ್ಪನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತದೆ ಎಂದು ಇಬ್ರಾಹಿಂ ಹೇಳಿದರು.
ಅಣ್ಣ ತಾರುಣ್ಯ ಆರೋಗ್ಯ ಯೋಜನೆ : ದೀರ್ಘಕಾಲೀನ ಮಾರಕ ರೋಗಗಳಿಂದ ಬಳಲುತ್ತಿರುವ ಮಧ್ಯಮ ವರ್ಗ ಹಾಗೂ ಬಡ ರೋಗಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರಕಿಸಿಕೊಡಲು ಸಂಪನ್ಮೂಲ ಕ್ರೋಢೀಕರಣ ಮಾಡುವ ಉದ್ದೇಶದಿಂದ ಲಾಟರಿಯನ್ನು ಪುನಃ ಆರಂಭಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಈ ಯೋಜನೆಗೆ 'ಅಣ್ಣ ತಾರುಣ್ಯ ಆರೋಗ್ಯ ಯೋಜನೆ' ಎಂದು ನಾಮಕರಣ ಮಾಡಲಾಗುತ್ತದೆ ಎಂದರು.
-
ನೈರುತ್ಯ ರೈಲ್ವೆ: 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ











Click it and Unblock the Notifications