Annamalai: ಟಿಪ್ಪು ಸುಲ್ತಾನ್ ಬಗ್ಗೆ ಅಣ್ಣಾಮಲೈ ಬಾಯಿತುಂಬಾ ಹೊಗಳಿದ್ದರು...
ಟಿಪ್ಪು ಸುಲ್ತಾನ್ ಬಗ್ಗೆ ಪದೇ ಪದೇ ಚರ್ಚೆ ನಡೆಯುತ್ತದೆ, ಅದರಲ್ಲೂ ಬಿಜೆಪಿ ನಾಯಕರು ಟಿಪ್ಪು ಸುಲ್ತಾನ್ ವಿಚಾರ ಹಿಡಿದು ಸಾಕಷ್ಟು ಚರ್ಚೆ ಮಾಡುತ್ತಾರೆ. ಸಿದ್ದರಾಮಯ್ಯ ಅವರ ಸರ್ಕಾರದ ವಿರುದ್ಧ ಕರ್ನಾಟಕ ಮಾತ್ರವಲ್ಲ ಕೇಂದ್ರ ಬಿಜೆಪಿ ನಾಯಕರಿಗೂ ಟಿಪ್ಪು ಸುಲ್ತಾನ್ ವಿಚಾರ ದೊಡ್ಡ ಅಸ್ತ್ರವಾಗಿದೆ. ಆದರೆ ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಯಾಗಿದ್ದ ಈಗಿನ ಬಿಜೆಪಿ ನಾಯಕರಾದ ಕೆ. ಅಣ್ಣಾಮಲೈ ಅವರು 'ಟಿಪ್ಪು ಸುಲ್ತಾನ್' ಬಗ್ಗೆ ಏನು ಹೇಳಿದ್ದರು ಅಂದ್ರೆ...
ಕೆ. ಅಣ್ಣಾಮಲೈ ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುವ ವೇಳೆ, ಸಾಕಷ್ಟು ದೊಡ್ಡ ಹೆಸರು ಮಾಡಿದ್ದರು. ಅದರಲ್ಲೂ ಸಿಗಂ ಎಂಬ ಬಿರುದು ಕೂಡ ಪಡೆದು ರಾಷ್ಟ್ರ ಮಟ್ಟದಲ್ಲಿ ಕೆ. ಅಣ್ಣಾಮಲೈ ಅವರು ಮಿಂಚಿದ್ದರು. ಯಾವುದೇ ಪಕ್ಷದ ಸರ್ಕಾರವೇ ಇದ್ದರೂ ಕೆ. ಅಣ್ಣಾಮಲೈ ಅವರು ಕೆಲಸದ ವಿಚಾರದಲ್ಲಿ ರಾಜಿ ಆಗುತ್ತಿರಲಿಲ್ಲ. ಬಿಜೆಪಿ & ಕಾಂಗ್ರೆಸ್ ಎರಡೂ ಪಕ್ಷದ ನಾಯಕರು & ಮುಖಂಡರಿಗೂ ಬೆವರು ಇಳಿಸುತ್ತಿದ್ದರು. ಹೀಗೆಲ್ಲಾ ಕೆ. ಅಣ್ಣಾಮಲೈ ಕೆಲಸಕ್ಕೆ ಸರ್ಕಾರ ಕೂಡ ಗುಡ್ ಗುಡ್ ಅಂದಿತ್ತು. ಅಲ್ಲದೆ ಕೋಮು ಸಂಘರ್ಷ ನಡೆದು, ರಕ್ತಪಾತವೇ ಆಗುತ್ತಿದ್ದ ಜಿಲ್ಲೆಗಳಲ್ಲಿ ಶಾಂತಿ ಮೂಡಿಸಲು ಇದೇ ಕೆ. ಅಣ್ಣಾಮಲೈ ಅವರು ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಿದ್ದರು.

ಟಿಪ್ಪು ಸುಲ್ತಾನ್ ಬಗ್ಗೆ ಅಣ್ಣಾಮಲೈ ಮಾತು!
ಕೆ. ಅಣ್ಣಾಮಲೈ ಹಿಂದೆ ಪೊಲೀಸ್ ಅಧಿಕಾರಿಯಾಗಿದ್ದ ಸಮಯದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ಮಾತನಾಡಿದ್ದರು. ಹೀಗೆ ಮಾತನಾಡುವಾಗ, ಟಿಪ್ಪು ಸುಲ್ತಾನ್ ಹೇಗೆಲ್ಲಾ ಕರ್ನಾಟಕದ ದೇಗುಲ & ಮಠಗಳಿಗೆ ಗೌರವ ನೀಡುತ್ತಿದ್ದರು ಎಂಬುದರ ಕುರಿತು ಹೇಳಿದ್ದರು. ಅಲ್ಲದೆ ಟಿಪ್ಪು ಸುಲ್ತಾನ್ ಹಿಂದೂ ದೇಗುಲಗಳಿಗೆ ಎಷ್ಟೆಲ್ಲಾ ರಕ್ಷಣೆಯನ್ನ ನೀಡಿದ್ದರು ಎಂಬುದನ್ನ ಪ್ರಸ್ತಾಪ ಮಾಡಿದ್ದರು. ಕೆ. ಅಣ್ಣಾಮಲೈ ಬಿಜೆಪಿ ಸೇರುವ ಮೊದಲು ಅಂದ್ರೆ ಪೊಲೀಸ್ ಅಧಿಕಾರಿ ಆಗಿದ್ದ ಸಮಯದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ಮಾಡಿದ್ದ ಭಾಷಣ ಇದೀಗ ಮತ್ತೆ ವೈರಲ್ ಆಗುತ್ತಿದೆ!
ಕೆ. ಅಣ್ಣಾಮಲೈ ಹೇಳಿದ್ದು ಏನು?
ಕಾರ್ಯಕ್ರಮ ಒಂದರಲ್ಲಿ ಕೆ. ಅಣ್ಣಾಮಲೈ ಈ ಹಿಂದೆ ಮಾತನಾಡುತ್ತಾ, ಟಿಪ್ಪು ಸುಲ್ತಾನ್ ಯಾವ ರೀತಿ ಜಾತ್ಯಾತೀತ ವಾದಿ ಆಗಿದ್ದರು? ಅನ್ನೋದನ್ನ ಪ್ರಸ್ತಾಪ ಮಾಡಿದ್ದಾರೆ. ಅಲ್ಲದೆ ಅದೇ ರೀತಿ ಶೃಂಗೇರಿ ದೇಗುಲ ಹಾಗೂ ಕೊಲ್ಲೂರು ದೇಗುಲದ ವಿಚಾರ ಕೂಡ ಪ್ರಸ್ತಾಪಿಸಿ, ಟಿಪ್ಪು ಸುಲ್ತಾನ್ ಆಗ ಮಾಡಿದ್ದ ಸಹಾಯದ ಬಗ್ಗೆ ಕೂಡ ಮಾತನಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದ್ದು, ಸೆಕ್ಯುಲರ್ ಆಗಿದ್ದ ಕೆ. ಅಣ್ಣಾಮಲೈ ದಿಢೀರ್ ಬದಲಾವಣೆ ಆದ್ರಾ? ಅನ್ನೋ ಪ್ರಶ್ನೆಯನ್ನ ಇದೀಗ ಸೋಷಿಯಲ್ ಮೀಡಿಯಾ ಬಳಕೆದಾರರು ಕೇಳುತ್ತಿದ್ದಾರೆ. ಈ ಮೂಲಕ ಕೆ. ಅಣ್ಣಾಮಲೈ ವಿಡಿಯೋ ಭರ್ಜರಿ ಸದ್ದು ಮಾಡುತ್ತಿದ್ದು, ಕಾಂಗ್ರೆಸ್ ನಾಯಕರು ಇದನ್ನೇ ಮುಂದಿಟ್ಟುಕೊಂಡು ಕರ್ನಾಟಕ ಬಿಜೆಪಿ ನಾಯಕರಿಗೆ ಪ್ರಶ್ನೆ ಹಾಕುತ್ತಿದ್ದಾರೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications