ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ಲಾಕ್ ಫಂಗಸ್‌ನಿಂದ ಸಾವನ್ನಪ್ಪಿದವರಿಗೆ ಪರಿಹಾರ ನೀಡಿ

|
Google Oneindia Kannada News

ಬೆಂಗಳೂರು, ಮೇ 17; "ಬ್ಲಾಕ್ ಫಂಗಸ್ಸಿಗೆ ತುತ್ತಾಗಿ ಜೀವ ಹಾಗೂ ಕಣ್ಣುಗಳನ್ನು ಕಳೆದುಕೊಂಡವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಪತ್ರವನ್ನು ಬರೆದಿದ್ದಾರೆ.

Recommended Video

Black Fungus ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಿ | Oneindia Kannada

ಸೋಮವಾರ ಸಿದ್ದರಾಮಯ್ಯ ಈ ಕುರಿತು ಪತ್ರವನ್ನು ಬರೆದಿದ್ದು, "ರಾಜ್ಯದ ಜನ ಕೊರೊನಾ ಸೋಂಕಿನಿಂದ ಸುಧಾರಿಸಿಕೊಳ್ಳುವ ಪ್ರಯತ್ನದಲ್ಲಿರುವಾಗಲೇ ಬ್ಲಾಕ್ ಫಂಗಸ್‌ಗೆ ಇನ್ನಷ್ಟು ಜೀವಗಳು ಬಲಿಯಾಗುತ್ತಿವೆ" ಎಂದು ಪತ್ರದಲ್ಲಿ ವಿಷಾದವನ್ನು ವ್ಯಕ್ತಪಡಿಸಿದ್ದಾರೆ.

ಕೋವಿಡ್ ಪರೀಕ್ಷೆ ಹೆಚ್ಚಿಸಿ; ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ ಕೋವಿಡ್ ಪರೀಕ್ಷೆ ಹೆಚ್ಚಿಸಿ; ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

"ಈ ರೋಗಕ್ಕೆ ತುತ್ತಾದವರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಕನಿಷ್ಠ 40-50 ಸಾವಿರ ಶುಲ್ಕ ವಿಧಿಸುವ ಮೂಲಕ ಬಡ ಜನರು ಆಸ್ಪತ್ರೆಯತ್ತ ಸುಳಿಯದಂತೆ ಮಾಡಿವೆ. ಇಂಥ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರ ಜನರ ನೆರವಿಗೆ ಧಾವಿಸಬೇಕಾಗುತ್ತದೆ" ಎಂದು ಸಿದ್ದರಾಮಯ್ಯ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ಕೋವಿಡ್ ನಿಯಂತ್ರಣ ಸಲಹೆ ಕೊಟ್ಟ ಸಿದ್ದರಾಮಯ್ಯಗ್ರಾಮೀಣ ಭಾಗದಲ್ಲಿ ಕೋವಿಡ್ ನಿಯಂತ್ರಣ ಸಲಹೆ ಕೊಟ್ಟ ಸಿದ್ದರಾಮಯ್ಯ

Announce Compensation Who Died Due To Black Fungus

"ಬ್ಲಾಕ್ ಫಂಗಸ್ಸಿಗೆ ತುತ್ತಾಗಿ ಜೀವ ಹಾಗೂ ಕಣ್ಣುಗಳನ್ನು ಕಳೆದುಕೊಂಡವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಈ ರೋಗಕ್ಕೆ ಇನ್ನಷ್ಟು ಅಮೂಲ್ಯ ಜೀವಗಳು ಬಲಿಯಾಗುವ ಮುನ್ನ ಸರ್ಕಾರ ಉಚಿತ ಚಿಕಿತ್ಸೆ ನೀಡಲು ಕ್ರಮ‌ಕೈಗೊಳ್ಳಬೇಕು" ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರನ್ನು ಒತ್ತಾಯಿಸಿದ್ದಾರೆ.

ಲಾಕ್ ಡೌನ್ ವಿರುದ್ಧ ಗ್ರಾಮೀಣ ಭಾಗದಲ್ಲಿ ದಂಗೆಯಾಗಲಿದೆ: ಸಿದ್ದರಾಮಯ್ಯ ಲಾಕ್ ಡೌನ್ ವಿರುದ್ಧ ಗ್ರಾಮೀಣ ಭಾಗದಲ್ಲಿ ದಂಗೆಯಾಗಲಿದೆ: ಸಿದ್ದರಾಮಯ್ಯ

ಎಸ್‌ಓಪಿ ಹೊರಡಿಸಿ; "ಚಿಕಿತ್ಸೆ ನೀಡುವ ಕುರಿತು ಮಾತ್ರವಲ್ಲ, ರೋಗ ಹರಡುತ್ತಿರುವ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ. ರೋಗ ಯಾರಲ್ಲಿ ಹರಡುತ್ತಿದೆ?, ಏಕೆ ಹರಡುತ್ತಿದೆ?, ರೋಗ ಲಕ್ಷಣಗಳು ಏನು?, ರೋಗ ಬಂದರೆ ಹೇಗೆ ಚಿಕಿತ್ಸೆ ಪಡೆಯಬೇಕು?, ರೋಗ ಬರದಂತೆ ತಡೆಯಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು? ಮುಂತಾದ ವಿಚಾರಗಳ ಬಗ್ಗೆ ಎಸ್‌ಓಪಿ ಹೊರಡಿಸಬೇಕು" ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

"ಸರ್ಕಾರ ತಡಮಾಡದೆ ಸೂಕ್ತ ಅಧಿಸೂಚನೆಗಳನ್ನು ಹೊರಡಿಸಿ ಉಚಿತ ಚಿಕಿತ್ಸೆ ನೀಡಲು ಪ್ರಾರಂಭಿಸಬೇಕು. ಈಗಾಗಲೇ ಬಹಳಷ್ಟು ಜನರು ಬ್ಲಾಕ್ ಫಂಗಸ್ಸಿಗೆ ತುತ್ತಾಗಿ ಜೀವ ಕಳೆದುಕೊಂಡಿದ್ದಾರೆ. ಕಣ್ಣುಗಳನ್ನು ಕಳೆದುಕೊಂಡಿದ್ದಾರೆ. ಅಂಥವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು" ಎಂದು ಸಿದ್ದರಾಮಯ್ಯ ಪತ್ರದಲ್ಲಿ ಹೇಳಿದ್ದಾರೆ.

English summary
In a letter to chief minister B. S. Yediyurappa opposition leader Siddaramaiah urged that announced compensation for the family members who died due to black fungus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X