ದರ್ಶನವಿತ್ತಳು ಕಾವೇರಿ ತೀರ್ಥರೂಪಿಣಿಯಾಗಿ....
ಮಡಿಕೇರಿ, ಅ.18: ಕರ್ನಾಟಕದ ಜೀವನದಿ, ಕೊಡವರ ಕುಲದೇವಿ ಕಾವೇರಿ ಮಾತೆ ಉಗಮಸ್ಥಾನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಶನಿವಾರ ಮಧ್ಯರಾತ್ರಿ 12.16ಕ್ಕೆ ಸಲ್ಲುವ ಶುಭ ಮಿಥುನ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಆವಿರ್ಭವಿಸುವುದರೊಂದಿಗೆ ನೆರೆದ ಸಹಸ್ರಾರು ಭಕ್ತರನ್ನು ಪುನೀತಗೊಳಿಸಿದಳು.
ತೀರ್ಥೋದ್ಭವದ ಭವ್ಯ ಕ್ಷಣಕ್ಕಾಗಿ ಕಾತರದಿಂದ ಬ್ರಹ್ಮಕುಂಡಿಕೆ ಬಳಿ ಕಾದು ನಿಂತಿದ್ದ ಭಕ್ತರು ಕಾವೇರಮ್ಮನ ಪಾದಾರವಿಂದಗಳಿಗೆ ಗೋವಿಂದ ಎಂದು ಘೋಷಣೆ ಕೂಗುತ್ತಿದ್ದರೆ, ಅರ್ಚಕರು ಮಂತ್ರ ಪಠಿಸುತ್ತಾ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. [ಕಾವೇರಿ ತೀರ್ಥೋದ್ಭವದ ಪೌರಾಣಿಕ ಹಿನ್ನೆಲೆ]
ಇದಕ್ಕೂ ಮೊದಲು ಭಾಗಮಂಡಲದಿಂದ ಭಂಡಾರನ್ನು ತಂದು ಕಾವೇರಿ ಮಾತೆಗೆ ಆಭರಣಗಳನ್ನು ತೊಡಿಸಿ ಮಹಾಪೂಜೆಯನ್ನು ನೆರವೇರಿಸಲಾಯಿತು.
ಬಳಿಕ ಅರ್ಚಕರು ತೀರ್ಥಕುಂಡಿಕೆ ಬಳಿ ಮಂತ್ರ ಪಠಿಸುತ್ತಾ ಕುಂಡಿಕೆಗೆ ಕುಂಕುಮ, ಪುಷ್ಪಾರ್ಚನೆಯನ್ನು ನೆರವೇರಿಸಿದರು. ಮೊದಲೇ ನಿಗದಿ ಮಾಡಿದ್ದ ಸಮಯಕ್ಕೆ ಸರಿಯಾಗಿ ಕುಂಡಿಕೆಯಲ್ಲಿ ಕಾವೇರಿ ಉದ್ಭವಿಸತೊಡಗಿ 12.16ಕ್ಕೆ ತೀರ್ಥರೂಪಿಣಿಯಾಗಿ ಉಕ್ಕಿ ಹರಿಯತೊಡಗಿದಳು.
ಈ ಸಂದರ್ಭದಲ್ಲಿ ನೆರೆದಿದ್ದ ಅರ್ಚಕರು ತೀರ್ಥ ಉಕ್ಕಿ ಹೊರ ಹೋಗದಂತೆ ಕುಂಡಿಕೆಯಿಂದ ತೀರ್ಥವನ್ನು ತೆಗೆದು ಭಕ್ತರ ಮೇಲೆ ಪ್ರೋಕ್ಷಣೆ ಮಾಡಿದರು. ಭಾವಪರವಶಗೊಂಡ ಭಕ್ತರು ಸ್ನಾನಕೊಳಕ್ಕೆ ಧುಮುಕಿ ತೀರ್ಥಕ್ಕೆ ಮುಗಿ ಬಿದ್ದರು.
ಆಗ ನೂಕಾಟ, ತಳ್ಳಾಟ ನಡೆಯಿತ್ತಾದರೂ, ಸನ್ನಿಧಿಯಲ್ಲಿ ನೆರದಿದ್ದ ಅರ್ಚಕರು ಹಾಗೂ ಪೊಲೀಸ್ ಸಿಬ್ಬಂದಿ ತೀರ್ಥವನ್ನು ಎಲ್ಲಾ ಭಕ್ತರಿಗೆ ತಲುಪಿಸುವಲ್ಲಿ ಯಶಸ್ವಿಯಾದರು. ಭಕ್ತರು ಬಕೆಟ್, ಬಿಂದಿಗೆ, ಖಾಲಿ ಬಾಟಲಿಗಳಲ್ಲಿ ತೀರ್ಥವನ್ನು ತಮ್ಮ ತಮ್ಮ ಮನೆಗೆ ಕೊಂಡೊಯ್ದರು.

ಭಕ್ತರಿಂದ ತ್ರಿವೇಣಿ ಸಂಗಮದಲ್ಲಿ ಸ್ನಾನ
ಶನಿವಾರ ಸಂಜೆಯೇ ದೂರದ ಊರುಗಳಿಂದ ಭಾಗಮಂಡಲಕ್ಕೆ ಆಗಮಿಸಿದ ಭಕ್ತರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿಕೊಂಡು ತಲಕಾವೇರಿಗೆ ಆಗಮಿಸಿದ್ದರು. ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಿಲ್ಲಾಡಳಿತದ ವತಿಯಿಂದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ತೀರ್ಥೋದ್ಭವದ ಬಳಿಕ
ತೀರ್ಥೋದ್ಭವದ ಬಳಿಕ ತೀರ್ಥಗಳನ್ನು ತಮ್ಮ ತಮ್ಮ ಮನೆಗಳಿಗೆ ಕೊಂಡೊಯ್ದು ದೇವರ ಮನೆಯಲ್ಲಿಟ್ಟು ಕುಟುಂಬದವರೆಲ್ಲ ತೀರ್ಥ ಪೂಜೆ ನೆರವೇರಿಸಿ ಬಳಿಕ ಬಂಧು ಬಾಂಧವರಿಗೆ ವಿತರಿಸಿದರು. ಸಂಪ್ರದಾಯದಂತೆ ದೋಸೆ ಮಾಡಿ ಗದ್ದೆಯಲ್ಲಿ ಹಾಕಲಾಗಿದ್ದ ಬೆಚ್ಚುವಿನಲ್ಲಿಟ್ಟು ಭೂಮಿ ತಾಯಿಗೆ ಪೂಜೆ ನೆರವೇರಿಸಲಾಯಿತು.

ಹಿರಿಯರಿಗೆ ಪಿತೃಕರ್ಮ (ಪಿಂಡ)
ಜಿಲ್ಲೆಯಾದ್ಯಂತ ಭಕ್ತರು ಭಾಗಮಂಡಲಕ್ಕೆ ತೆರಳಿ ತ್ರಿವೇಣಿ ಸಂಗಮದಲ್ಲಿ ತೀರ್ಥಸ್ನಾನ ಮಾಡಿ ಹಿರಿಯರಿಗೆ ಪಿತೃಕರ್ಮ (ಪಿಂಡ) ನೆರವೇರಿಸಿ ಬಳಿಕ ಭಗಂಡೇಶ್ವರನಿಗೆ ಪೂಜೆ ಸಲ್ಲಿಸಿ ತಲಕಾವೇರಿಗೆ ತೆರಳುತ್ತಿರುವ ದೃಶ್ಯ ಕಂಡು ಬರುತ್ತಿದೆ.

ಬೆಳ್ಳಿ ಕವಚಕ್ಕೆ ಸ್ವಲ್ಪ ಹಾನಿಯಾಗಿದೆ
ಕಾವೇರಿ ಕುಂಡಿಕೆ ಬಳಿ ತೀರ್ಥಕ್ಕಾಗಿ ನೂಕು ನುಗ್ಗಲು ಉಂಟಾದ ಹಿನ್ನಲೆಯಲ್ಲಿ ಕುಂಡಿಕೆಯ ಬೆಳ್ಳಿ ಕವಚಕ್ಕೆ ಸ್ವಲ್ಪ ಹಾನಿಯಾಗಿದೆ. ಇದರ ಹೊರತು ಪಡಿಸಿದಂತೆ ಇನ್ಯಾವುದೇ ತೊಂದರೆ ಉಂಟಾಗಲಿಲ್ಲ. ಈ ಪವಿತ್ರ ಕ್ಷಣಕ್ಕೆ ಸಂಸದ ಪ್ರತಾಪ್ ಸಿಂಹ ಸಾಕ್ಷಿಯಾದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications