D.Roopa: ಐಜಿಪಿ ಡಿ.ರೂಪಾ ವಿರುದ್ಧ ಮತ್ತೊಂದು ಗಂಭೀರ ಆರೋಪ: ದೂರು ದಾಖಲು
D.Roopa: ಕರ್ನಾಟಕದ ಐಜಿಪಿ ಡಿ.ರೂಪಾ ಅವರು ಒಂದಲ್ಲ ಒಂದು ವಿವಾದದ ವಿಚಾರದಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ. ಕಳೆದ ಕೆಲವು ತಿಂಗಳುಗಳಿಂದ ಸೈಲಂಟ್ ಆಗಿದ್ದ ಅವರು ಇದೀಗ ಮತ್ತೆ ಗಂಭೀರ ಆರೋಪದ ಸುಳಿಯೊಂದಲ್ಲಿ ಸಿಲುಕಿಕೊಂಡಿದ್ದಾರೆ. ಹಾಗಾದ್ರೆ ಏನದು ಪ್ರಕರಣ ಹಾಗೂ ಆರೋಪ ಮಾಡಿದವರು ಯಾರು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಐಜಿಪಿ ರೂಪಾ ಡಿ ಮೌದ್ಗಿಲ್ ಅವರ ವಿರುದ್ಧ ಆರೋಪ ಮಾಡಿರುವುದು ಬೇರೆ ಯಾರು ಅಲ್ಲ. ಅವರ ಮೇಲೆ ಕಿರಿಯ ಐಪಿಎಸ್ ಅಧಿಕಾರಿಗಳ ಹೊಸ ಜಗಳದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಹಿಂದೆ 20223ರಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರೊಂದಿಗೆ ಇವರ ಜಗಳವಾಗಿತ್ತು.

ಇದೀಗ ಕೆಳಹಂತದ ಸಿಬ್ಬಂದಿಯನ್ನು ಬಳಸಿಕೊಂಡು ನನ್ನ ಕೊಠಡಿಯಲ್ಲಿ ದಾಖಲೆಗಳನ್ನು ಇರಿಸಿದ್ದಾರೆ ಎಂದು ಆರೋಪಿಸಿ ಐಜಿಪಿ ಡಿ.ರೂಪ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಐಎಸ್ಡಿ ಡಿಜಿಐ ವರ್ತಿಕಾ ಕಟಿಯಾರ್ ದೂರು ನೀಡಿದ್ದಾರೆ.
ಹೆಡ್ ಕಾನ್ಸ್ಟೇಬಲ್ ಟಿ.ಎಸ್.ಮಂಜುನಾಥ್, ಗೃಹರಕ್ಷಕ ದಳದ ಸಿಬ್ಬಂದಿ ಮಲ್ಲಿಕಾರ್ಜುನ್ ಅವರು ನಿಯಂತ್ರಣ ಕೊಠಡಿಯಿಂದ ಕೀ ತೆಗೆದುಕೊಂಡು ತೆಗೆದಿದ್ದಾರೆ. ಅಷ್ಟೇ ಅಲ್ಲದೆ, ಮಲ್ಲಿಕಾರ್ಜುನ್ ಕೆಲವೊಂದು ಕಡತಗಳನ್ನು ನನ್ನ ಕಚೇರಿಯಲ್ಲಿ ಇರಿಸಿ, ಕಚೇರಿಯ ಫೋಟೋಗಳನ್ನು ತೆಗೆದು ಐಜಿಪಿ ಡಿ.ರೂಪಾ ಅವರಿಗೆ ವಾಟ್ಸಾಪ್ ಮೂಲಕ ಕಳುಹಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಅದಕ್ಕೂ ಮೊದಲು ನನ್ನ ಆಪ್ತ ಸಹಾಯಕ ಕಿರಣ್ ಕುಮಾರ್ ಅವರು ಮಂಜುನಾಥ್ ಅವರಿಗೆ ಡಿಐಜಿ ಅವರ ಅನುಮತಿಯಿಲ್ಲದೆ, ಕಚೇರಿ ಬಾಗಿಲು ತೆರೆಯುವಂತಿಲ್ಲ ಎಂದು ಹೇಳಿದ್ದಾರೆ. ಆದರೂ, ಕಡತಗಳನ್ನು ಇರಿಸಿ ಫೋಟೋ ಕಳುಹಿಸಿದ್ದಾರೆ ಎಂದಿ ವರ್ತಿಕಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ವಿಚಾರ ನನಗೆ ಗೊತ್ತಾದ ತಕ್ಷಣವೇ ಕಚೇರಿ ಆಪ್ತ ಸಹಾಯಕ ಕಿರಣ್ ಕುಮಾರ್, ಮಂಜುನಾಥ್, ಮಲ್ಲಿಕಾರ್ಜುನ್ ಅವರನ್ನು ಕರೆಸಿ ವಿಚಾರಣೆ ಮಾಡಿದಾಗ, ಡಿ.ರೂಪ ಅವರ ಸೂಚನೆ ಮೇರೆಗೆ ಬಾಗಿಲು ತೆರೆದು, ಕಡತ ಇರಿಸಿದ್ದೇವೆ ಎಂದು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಪೊಲೀಸ್ ಮಹಾನಿರ್ದೇಶಕ ಮತ್ತು ಐಎಸ್ಡಿ ಡಿಜಿಪಿಗೂ ವರ್ತಿಕಾ ಅವರು ದೂರು ನೀಡಿದ್ಧಾರೆ ಎಂದು ತಿಳಿದುಬಂದಿದೆ.
ಡಿ.ರೂಪ ಅವರು ಐಎಎಸ್ ಮೊದಲು ರೋಹಿಣಿ ಸಿಂಧೂರಿ ಅವರ ಜೊತೆ ಜಗಳವಾಡಿಕೊಂಡು ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಕಿರಿಯ ಐಪಿಎಸ್ ಅಧಿಕಾರಿಗಳು ಕೂಡ ತಮ್ಮ ಮೇಲೆ ದೂರು ದಾಖಲಿಸುವ ಹಂತಕ್ಕೆ ಇಳಿದಿದ್ದಾರೆ ಎಂದು ತಿಳಿದುಬಂದಿದೆ. ಹಾಗಾದ್ರೆ ಡಿ.ರೂಪ ಅವರು ನಿಜವಾಗ್ಲೂ ಕಡತಗಳನ್ನು ಕೆಳಹಂತದ ಸಿಬ್ಬಂದಿ ಬಳಸಿಕೊಂಡು ವರ್ತಿಕಾ ಅವರ ಕಡತಗಳನ್ನು ಹಾಕಿಸಿಕೊಂಡ್ರಾ ಎನ್ನುವುದು ತನಿಖೆಯಿಂದ ತಿಳಿದುಬರಬೇಕಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications