ಆಸ್ತಿದಾರರಿಗೆ ಮತ್ತೊಂದು ಶಾಕ್: ಇ ಸ್ವತ್ತು ಪಡೆಯಲು ಹೊಸ ಪ್ರಮಾಣಪತ್ರ ಕಡ್ಡಾಯ!
ಕರ್ನಾಟಕ ಸರ್ಕಾರವು ಆಸ್ತಿಗೆ ಸಂಬಂಧಿಸಿದಂತೆ ರೂಪಿಸುತ್ತಿರುವ ಕಾನೂನು ಹಲವು ತೊಡಕುಗಳನ್ನು ಸೃಷ್ಟಿ ಮಾಡಿದೆ. ರಾಜ್ಯ ಸರ್ಕಾರವು ಇ ಖಾತಾ, ಬಿ ಖಾತಾ ಹಾಗೂ ಇ ಸ್ವತ್ತುಗಳಿಗೆ ಸಂಬಂಧಿಸಿದಂತೆ ಹೊಸ ಕಾನೂನುಗಳನ್ನು ರೂಪಿಸುತ್ತಿದೆ. ಇದು ಭಾರೀ ಸಂಕಷ್ಟಕ್ಕೆ ಕಾರಣವಾಗಿದೆ. ಇ ಸ್ವತ್ತು ವಿಚಾರದಲ್ಲಿ ಹೊಸ ಬದಲಾವಣೆಗಳನ್ನು ತಂದಿರುವುದು ಆಸ್ತಿದಾರರಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ. ಇದೀಗ ಬಿ ಖಾತಾ ಅವಧಿಯನ್ನು ವಿಸ್ತರಿಸಿದೆಯಾದರೂ ಅದರಕ್ಕೂ ತೊಡಕು ಎದುರಾಗಿದೆ. ಇದೀಗ ಇ ಸ್ವತ್ತು ಪಡೆಯುವುದಕ್ಕೆ ಮತ್ತೊಂದು ಪ್ರಮಾಣಪತ್ರವನ್ನು ಕಡ್ಡಾಯ ಮಾಡಲಾಗಿದೆ. ಇದರಿಂದ ಇ ಸ್ವತ್ತು ಪಡೆಯಲು ಸಮಸ್ಯೆ ಆಗುತ್ತಿದೆ.
ಇ-ಸ್ವತ್ತು ಮಾಡಲು- ಎನ್ಕಂಬರೆನ್ಸ್ (ENCUMBRANCE) ಪ್ರಮಾಣ ಪತ್ರ ಕಡ್ಡಾಯ ಮಾಡಲಾಗಿದೆ. ಆದರೆ ಇದರಿಂದ ಭಾರೀ ಸಮಸ್ಯೆ ಆಗುತ್ತಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕದ ವಿವಿಧ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇದನ್ನು ಕಡ್ಡಾಯ ಮಾಡಲಾಗಿದೆ. ಇದೀಗ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯಲ್ಲಿ ಇ-ಸ್ವತ್ತು ಮಾಡಲು ಇಲ್ಲ ಸಲ್ಲದ ದಾಖಲೆಗಳನ್ನು ಕೇಳುತ್ತಿದ್ದಾರೆ. ಈಗ ಋಣಭಾರ ಪ್ರಮಾಣ ಪತ್ರ ಬೇಕು ಎನ್ನುತ್ತಿದ್ದಾರೆ. ಇದನ್ನು ಕೂಡಲೆ ರದ್ದು ಮಾಡಲು ಮಹಾನಗರ ಪಾಲಿಕೆಗೆ ಹಾಗೂ ಸರಕಾರಕ್ಕೆ ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಮಾಜಿ ಅಧ್ಯಕ್ಷ ಸುರೇಶ ಎಂ ಕಿರೇಸೂರ ಒತ್ತಾಯಿಸಿದ್ದಾರೆ.

ಇ-ಸ್ವತ್ತು ಮಾಡಲು ಮಹಾನಗರ ಪಾಲಿಕೆಯು ದಿನಕ್ಕೊಂದು ದಾಖಲೆ ಕೇಳುತ್ತಿದ್ದಾರೆ ಜನರು ಇ- ಸ್ವತ್ತು ಮಾಡಲು ಅಲೆದಾಡುತ್ತಿದ್ದಾರೆ. ಒಂದು ಎನ್ಕಂಬರೆನ್ಸ್ ಪ್ರಮಾಣ ಪತ್ರ ಪಡೆಯಲು ಸುಮಾರು 4-5 ದಿನಗಳು ಬೇಕು ಅಲ್ಲದೇ 500 ರಿಂದ 1000 ರೂಪಾಯಿ ಹಣ ಖರ್ಚು ಆಗುತ್ತದೆ. ಇದು ಜನರಿಗೆ ಹೊರೆಯಾಗುತ್ತದೆ.
ಇ-ಸ್ವತ್ತನ್ನು ಮಾಡಲು ಹಾಗೂ ಋಣಭಾರ ಪತ್ರಕ್ಕೆ ಏನು ಸಂಬಂಧ ತಿಳಿಯತ್ತಿಲ್ಲ. ಈ ಎನ್ಕಂಬರೆನ್ಸ್ ಪ್ರಮಾಣ ಪತ್ರ ಖರೀದಿ ಮಾಡಲು ಹಾಗೂ ಮಾರಾಟ ಮಾಡಲು ಮಾತ್ರ ಅವಶ್ಯವಿದೆ ಅಥವಾ ಬ್ಯಾಂಕ ಸಾಲಕ್ಕೆ ಬೇಕಾಗುತ್ತದೆ ಎಂದು ಉಲ್ಲೇಖಿಸಿದ್ದಾರೆ.
ಪ್ರತಿ ಸಲ ಒಂದೊಂದು ದಾಖಲೆ ಬೇಕು, ಎಂದು ಜನರನ್ನು ಅಲೆದಾಡಿಸುತ್ತಿದ್ದಾರೆ ಈ ಹಿಂದೆ ಈ ಪ್ರಮಾಣ ಪತ್ರ ಕೇಳುತ್ತಿದ್ದಿಲ್ಲ, ಈಗ ಏಕೆ ಎಂದು ಅವರು ಪ್ರಶ್ನೆ ಮಾಡಿರುವ ಅವರು, ಇ-ಸ್ವತ್ತು ಮಾಡಲು ಎನ್ಕಂಬರೆನ್ಸ್ ಪ್ರಮಾಣ ಪತ್ರ ಕಡ್ಡಾಯ ರದ್ದತಿ ಮಾಡಬೇಕೆಂದು ಮಹಾನಗರ ಪಾಲಿಕೆ ಒತ್ತಾಯಿಸಿದ್ದಾರೆ.
ಇ - ಸ್ವತ್ತು: ಇನ್ನು ಗ್ರಾಮೀಣ ಪ್ರದೇಶದಲ್ಲಿನ ಆಸ್ತಿಗಳಿಗೆ ಇ-ಸ್ವತ್ತು ನೀಡುವುದಕ್ಕೆ ಕರಡು ನಿಯಮಾವಳಿ ಮಾಡಲಾಗುತ್ತಿದೆ. ಇದು ಜುಲೈ ಒಳಗೆ ಪೂರ್ಣಗೊಳ್ಳಲಿದೆ. ಜುಲೈ ಎರಡನೆಯ ವಾರದಲ್ಲಿ ಅಂತಿಮ ನಿಯಮಾವಳಿ ಪ್ರಕಟಿಸಲಾಗುವುದು.ಇದಾದ ನಂತರ ಇ-ಸ್ವತ್ತು ವಿತರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications