ಅಪರಾಧ ಪ್ರಕರಣ: ನಿರೀಕ್ಷಣಾ ಜಾಮೀನು ಸಲ್ಲಿಸಲು ಆರೋಪಿ ಯಾವಾಗ ಅನರ್ಹ?
ಬೆಂಗಳೂರು, ಜ.31: ''ಅಪರಾಧ ಪ್ರಕರಣಗಳಲ್ಲಿ ಆರೋಪಿಯು ಒಮ್ಮೆ ನ್ಯಾಯಾಲಯದ ಎದುರು ಖುದ್ದಾಗಿ ಅಥವಾ ವಕೀಲರ ಮೂಲಕ ಹಾಜರಾದರೆ ಆತ ಮತ್ತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಲು ಅನರ್ಹನಾಗುತ್ತಾನೆ,'' ಎಂದು ಹೈಕೋರ್ಟ್ ಆದೇಶಿಸಿದೆ.
ಗೌರಿಬಿದನೂರಿನ ರಮೇಶ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ ಸಂದೇಶ್ ಅವರಿದ್ಧ ಏಕಸದಸ್ಯಪೀಠ, ಆರೋಪಿ ಒಮ್ಮೆ ಹಾಜರಾದರೆ ನಂತರ ಅಪರಾಧ ದಂಡ ಸಂಹಿತೆ ಸೆಕ್ಷನ್ 438 ಅಡಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಲಾಗದು ಎಂದು ಆದೇಶ ನೀಡಿದೆ.
''ಆರೋಪಿ ಒಮ್ಮೆ ಖುದ್ದಾಗಿ ಅಥವಾ ವಕೀಲರ ಮೂಲಕ ನ್ಯಾಯಾಲಯದ ಮುಂದೆ ಹಾಜರಾದ ಬಳಿಕ ವಿಚಾರಣೆಗೆ ಗೈರು ಹಾಜರಾದರೆ ಆತನ ವಿರುದ್ದ ಕೋರ್ಟ್ ವಾರಂಟ್ ಹೊರಡಿಸಬಹುದು. ಆ ವೇಳೆ ಆರೋಪಿ ಸಿಆರ್ ಪಿಸಿ ಸೆಕ್ಷನ್ 438 ಅಡಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗದು,'' ಎಂದು ಕೋರ್ಟ್ ಹೇಳಿದೆ.

ಅರ್ಜಿದಾರ ಈ ಹಿಂದೆ ವಕೀಲರ ಮೂಲಕ ವಿಚಾರಣಾ ಕೋರ್ಟ್ಗೆ ಹಾಜರಾಗಿ ಸೆಕ್ಷನ್ 205ರ ಅಡಿಯಲ್ಲಿ ವಿನಾಯ್ತಿ ಪಡೆದಿದ್ದಾನೆ. ವಿಚಾರಣಾ ನ್ಯಾಯಾಲಯವು ಅದನ್ನು ಪರಿಗಣಿಸಿ ವಿನಾಯ್ತಿ ನೀಡಿದೆ. ಹೀಗಾಗಿ, ಅರ್ಜಿದಾರ ಸಿಆರ್ಪಿಸಿ ಸೆಕ್ಷನ್ 438ರ ಅಡಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಪರಿಗಣಿಸಲು ಸಾಧ್ಯವಿಲ್ಲ ಎಂದು ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದೆ.
Recommended Video
ಪ್ರಕರಣದ ವಿವರ: ಗೌರಿಬಿದನೂರು ಉಪವಲಯ ಅರಣ್ಯಾಧಿಕಾರಿ ವನ್ಯಜೀವಿ ಸಂರಕ್ಷಣೆ ಕಾಯ್ದೆ-1972ರ ಸೆಕ್ಷನ್ 55ಬಿ, 51ರ ಅಡಿ ರಮೇಶ್ ನಿವಾಸದಲ್ಲಿ 2020ರ ಜುಲೈ 8ರಂದು ಉಡ ಹಾಗೂ ಮೂರು ಪಕ್ಷಿ ವಶಪಡಿಸಿಕೊಂಡಿದ್ದಾಗಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ವಿಚಾರಣಾ ನ್ಯಾಯಾಲಯ ಆರೋಪಿಗೆ ಸಮನ್ಸ್ ಜಾರಿ ಮಾಡಿತ್ತು. ಈ ವೇಳೆ ಆರೋಪಿ ರಮೇಶ್ ವಕೀಲರ ಮೂಲಕ 2020ರ ಮೇ 5ರಂದು ಕೋರ್ಟ್ಗೆ ಹಾಜರಾಗಿ, ನ್ಯಾಯಾಲಯದ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯ್ತಿ ಕೋರಿದ್ದರು. ಕೋರ್ಟ್ ಹಾಜರಿಗೆ ವಿನಾಯ್ತಿ ನೀಡಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications