'ಪರಮೇಶ್ವರ ನಾಯ್ಕರೇ ನಿಮ್ಮ ರಾಜೀನಾಮೆ ಯಾವಾಗ?'
ಬೆಂಗಳೂರು, ಜೂನ್ 07 : ಕೂಡ್ಲಗಿ ಡಿವೈಎಸ್ಪಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅನುಪಮಾ ಶೆಣೈ ಅವರು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದರು. ಈಗ ಅವರು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಹೋರಾಟ ಆರಂಭಿಸಿದ್ದಾರೆ, ಫೇಸ್ಬುಕ್ನಲ್ಲಿ ಸಚಿವರಿಗೆ ಪ್ರಶ್ನೆ ಕೇಳಿದ್ದಾರೆ.
'ಪಿ ಟಿ ಪರಮೇಶ್ವರ ನಾಯ್ಕರೇ ನಾನು ರಾಜಿನಾಮೆ ನೀಡಿದ್ದೇನೆ. ನೀವು ಯಾವಾಗ ರಾಜಿನಾಮೆ ನೀಡುತ್ತೀರಾ?' ಎಂದು ಅನುಪಮಾ ಶೆಣೈ ಅವರು ಕಾರ್ಮಿಕ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ ನಾಯಕ್ ಅವರನ್ನು ಪ್ರಶ್ನಿಸಿದ್ದಾರೆ. [ಅನ್ಯಾಯವೇ ಕಾನೂನಾದಾಗ...ಅನುಪಮಾ ಏನಂದ್ರು?]

ಶನಿವಾರ ಕೂಡ್ಲಗಿ ಡಿವೈಎಸ್ಪಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಫೇಸ್ಬುಕ್ನಲ್ಲಿ ಸರಣಿ ಪೋಸ್ಟ್ಗಳನ್ನು ಹಾಕುವ ಮೂಲಕ ಅನುಪಮಾ ಶೆಣೈ ಅವರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. 6 ಗಂಟೆಗಳ ಹಿಂದೆ ಅನುಪಮಾ ಅವರು ಸಚಿವರು ವಿರುದ್ಧ ಪೋಸ್ಟ್ ಹಾಕಿದ್ದಾರೆ. [ಅನುಪಮಾ ಶೆಣೈ ದಿಢೀರ್ ರಾಜೀನಾಮೆ]
ಸಂಜೆ ದೂರವಾಣಿ ಸಂಭಾಷಣೆ ಬಿಡುಗಡೆ? : ಬಳ್ಳಾರಿಯಲ್ಲಿನ ಲಿಕ್ಕರ್ ಮಾಫಿಯಾದಿಂದ ಬೇಸತ್ತು ಅನುಪಮಾ ಅವರು ರಾಜೀನಾಮೆ ನೀಡಿದ್ದಾರೆ ಎಂಬುದು ಸದ್ಯದ ಸುದ್ದಿ. ಜಿಲ್ಲಾ ಉಸ್ತುವಾರಿ ಸಚಿವರ ಬೆಂಬಲಿಗರು ಈ ದಂಧೆಯಲ್ಲಿ ತೊಡಗಿದ್ದರು ಎಂಬ ಆರೋಪವಿದೆ.[ಅನುಪಮಾ ಶೆಣೈಗೆ ನ್ಯಾಯ ಸಿಗಬೇಕಿದೆ? ಸರ್ಕಾರಕ್ಕೆ ಜನತೆ ಸವಾಲ್!]
ಈ ಮಾಫಿಯಾ ಬಗ್ಗೆ ಅನುಪಮಾ ಶೆಣೈ ಮತ್ತು ಪರಮೇಶ್ವರ್ ನಾಯಕ್ ಅವರ ನಡುವೆ ದೂರವಾಣಿ ಸಂಭಾಷಣೆ ನಡೆದಿತ್ತು. ಈ ಸಂಭಾಷಣೆಯ ತುಣುಕುಗಳು ಇಂದು ಸಂಜೆ ಬಹಿರಂಗವಾಗುವ ಸಾಧ್ಯತೆ ಇದೆ. ಅನುಪಮಾ ಅವರ ರಾಜೀನಾಮೆ ಬಗ್ಗೆ ಸಚಿವರು ಇನ್ನೂ ಪ್ರತಿಕ್ರಿಯೆ ಕೊಟ್ಟಿಲ್ಲ.

2016ರ ಜನವರಿಯಲ್ಲಿ ಅನುಪಮಾ ಶೆಣೈ ಅವರನ್ನು ವಿಜಯಪುರದ ಇಂಡಿಯ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ನಾಯಕ್ ಅವರ ಫೋನ್ ಕರೆ ಸ್ವೀಕರಿಸದ ಕಾರಣ ವರ್ಗಾವಣೆ ಮಾಡಲಾಗಿದೆ ಎಂಬ ವಿವಾದ ಎದ್ದಿತ್ತು. ಈಗ ಪುನಃ ಅನುಪಮಾ ಅವರು ಸಚಿವರ ವಿರುದ್ಧ ಹೋರಾಟ ಆರಂಭಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications