'ಕೊಲೆ ಬೆದರಿಕೆ ಹಾಕ್ತೀರಾ? ದೆವ್ವವಾಗಿ ಬಂದು ಕಾಡ್ತೀನಿ'
ಬೆಂಗಳೂರು, ಜೂನ್ 08 : ಕೂಡ್ಲಿಗಿ ಉಪವಿಭಾಗದ ಡಿವೈಎಸ್ಪಿ ಅನುಪಮಾ ಶೆಣೈ ರಾಜೀನಾಮೆ ನೀಡಿದ್ದು ಏಕೆ? ಎಂಬುದು ಇನ್ನೂ ಬಹಿರಂಗವಾಗಿಲ್ಲ. ಅನುಪಮಾ ಅವರು ಫೇಸ್ಬುಕ್ನಲ್ಲಿ ಸಚಿವ ಪರಮೇಶ್ವರ ನಾಯಕ್ ಅವರ ವಿರುದ್ಧ ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ. ಸರಣಿ ಸ್ಟೇಟಸ್ಗಳನ್ನು ಹಾಕುತ್ತಿದ್ದಾರೆ.
ಬುಧವಾರ ಬೆಳಗ್ಗೆ ಅನುಪಮಾ ಅವರು, 'CD ಬಿಡುಗಡೆ ಮಾಡ್ತೀನಿ ಅಂದ್ರೆ ಕೊಲೆ ಬೆದರಿಕೆ ಹಾಕ್ತೀರಾ?! ದೆವ್ವವಾಗಿ ಬಂದು ಕಾಡ್ತೀನಿ' ಎಂದು ಸ್ಟೇಟಸ್ ಹಾಕಿದ್ದಾರೆ. ಈ ಸ್ಟೇಟಸ್ ಅನುಪಮಾ ಅವರಿಗೆ ಕೊಲೆ ಬೆದರಿಕೆ ಹಾಕಿದ್ದು ಯಾರು? ಎಂಬ ಪ್ರಶ್ನೆ ಹುಟ್ಟು ಹಾಕಿದೆ. ಬೆದರಿಕೆ ಹಾಕಿದವರು ಯಾರು? ಎಂದು ಅನುಪಮಾ ಅವರು ಹೇಳಿಲ್ಲ. [ಈಸಬೇಕು ಇದ್ದು ಜಯಿಸಬೇಕು ಅನುಪಮಾ ಶೆಣೈ ಮೇಡಂ]

ಜೂನ್ 4ರ ಶನಿವಾರ ಡಿವೈಎಸ್ಪಿ ಅನುಪಮಾ ಶೆಣೈ ಅವರು ರಾಜೀನಾಮೆ ನೀಡಿದ್ದಾರೆ. ನಂತರ ಅವರು ಬಹಿರಂಗವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ಯಾವ ಮಾಧ್ಯಮಗಳ ಜೊತೆಯೂ ಮಾತನಾಡಿಲ್ಲ. ಆದರೆ, ಫೇಸ್ಬುಕ್ನಲ್ಲಿ ಸರ್ಕಾರ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೋಸ್ಟ್ಗಳನ್ನು ಹಾಕುತ್ತಿದ್ದಾರೆ. ['ಪರಮೇಶ್ವರ ನಾಯ್ಕರೇ ನಿಮ್ಮ ರಾಜೀನಾಮೆ ಯಾವಾಗ?']
ಈ ನಡುವೆ ಅನುಪಮಾ ಶೆಣೈ ಅವರ ಮನವೊಲಿಸಲು ಗೃಹ ಇಲಾಖೆ ಮುಂದಾಗಿದೆ. ಅನುಪಮಾ ಅವರ ರಾಜೀನಾಮೆಯನ್ನು ಅಂಗೀಕರಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಜಿಪಿಗೆ ಸೂಚಿಸಿದ್ದಾರೆ. ಡಿಜಿಪಿ ಓಂಪ್ರಕಾಶ್ ಅವರು ಬಳ್ಳಾರಿ ಎಸ್ಪಿ ಮೂಲಕ ಅನುಪಮಾ ಅವರ ಮನವೊಲಿಕೆಗೆ ಮುಂದಾಗಿದ್ದಾರೆ. [ಪರಮೇಶಿಪ್ರೇಮ ಪ್ರಸಂಗ... ಸಿಡಿ ಬೇಕೆ, ಆಡಿಯೋ ಬೇಕೆ?]
ಅನುಪಮಾ ಅವರ ಸ್ಟೇಟಸ್
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಓಂಪ್ರಕಾಶ್ ಅವರು, ' ಅನುಪಮಾ ಅವರ ರಾಜೀನಾಮೆ ಅರ್ಜಿಯನ್ನು ಪರಿಶೀಲಿಸಿದ್ದೇನೆ. ಅವರ ಜತೆ ಮಾತುಕತೆ ನಡೆಸಿ, ರಾಜೀನಾಮೆ ವಾಪಸ್ ಪಡೆಯುವಂತೆ ಮನವೊಲಿಸಲು ಬಳ್ಳಾರಿ ಎಸ್ಪಿ ಆರ್.ಚೇತನ್ ಅವರಿಗೆ ನಿರ್ದೇಶಿಸಿದ್ದೇನೆ' ಎಂದು ಹೇಳಿದ್ದಾರೆ. [ಅನುಪಮಾ ಶೆಣೈಗೆ ನ್ಯಾಯ ಸಿಗಬೇಕಿದೆ? ಸರ್ಕಾರಕ್ಕೆ ಜನತೆ ಸವಾಲ್!]
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications