ಯುಎಪಿಎ ಅಡಿ ಯಾವುದೇ ವಕ್ತಿಯನ್ನು ವಿಚಾರಣೆಗೊಳಪಡಿಸಬಹುದು-ಹೈಕೋರ್ಟ್ ಆದೇಶ
ಬೆಂಗಳೂರು,ಜು.5. ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರನ್ನು ಮಾತ್ರ ವಿಚಾರಣೆ ನಡೆಸಬೇಕೆಂದಿಲ್ಲ, ಇತರೆ ವ್ಯಕ್ತಿಗಳನ್ನೂ ಸಹ ವಿಚಾರಣೆಗೊಳಪಡಿಸಬಹುದು ಎಂದು ಹೈಕೋರ್ಟ್ ಮತಹ್ವದ ಆದೇಶ ನೀಡಿದೆ.
ಅಲ್ಲದೆ, ರುದ್ರೇಶ್ ಕೊಲೆ ಪ್ರಕರಣದಲ್ಲಿ ಆರೋಪಿಗಳಿಬ್ಬರಿಗೆ ಜಾಮೀನು ನೀರಾಕರಿಸಿದ್ದ ವಿಶೇಷ ಕೋರ್ಟ್ ಆದೇಶ ರದ್ದುಪಡಿಸಲು ಯಾವುದೇ ಕಾರಣಗಳಿಲ್ಲ ಎಂದು ಅಭಿಪ್ರಾಯಪಟ್ಟು ಮೇಲ್ಮನವಿ ವಜಾಗೊಳಿಸಿದೆ. ಜತೆಗೆ, ಪ್ರಕರಣದ ವಿಚಾರಣೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶಿಸಿದೆ.
ಎನ್ಐಎ ವಿಶೇಷ ಕೋರ್ಟ್ ಆದೇಶ ಪ್ರಶ್ನಿಸಿ ಆರೋಪಿಗಳಾದ ರ್ಇಾನ್ ಪಾಷಾ ಹಾಗೂ ಮೊಹಮ್ಮದ್ ಮುಜೀಬ್ ಉಲ್ಲಾ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರಿದ್ದ ಪೀಠ ಈ ಆದೇಶ ನೀಡಿದೆ.

ನ್ಯಾಯಾಲಯದ ಆದೇಶವೇನು?
"ಯುಎಪಿಎ ಸೆಕ್ಷನ್ 15ರಲ್ಲಿ ವ್ಯಾಖ್ಯಾನಿಸಲಾಗಿರುವ ಭಯೋತ್ಪಾದಕ ಕೃತ್ಯಗಳಲ್ಲಿ ಯಾವುದೇ ವ್ಯಕ್ತಿ ತೊಡಗಿಸಿಕೊಂಡಿದ್ದರೆ, ಅವರನ್ನೂ ವಿಚಾರಣೆ ನಡೆಸಬಹುದು. ಆ ವ್ಯಕ್ತಿ ನಿಷೇಧಿತ ಉಗ್ರಗಾಮಿ ಸಂಘಟನೆಯ ಸದಸ್ಯನೇ ಆಗಿರಬೇಕೆಂದಿಲ್ಲ'' ಎಂದು ಅಭಿಪ್ರಾಯಪಟ್ಟು ಮೇಲ್ಮನವಿ ವಜಾಗೊಳಿಸಿದೆ.
"ಯುಎಪಿಎ ಪ್ರಕರಣದಲ್ಲಿ ಕೇವಲ ನಿಷೇಧಿತ ಉಗ್ರಗಾಮಿ ಸಂಘಟನೆಗಳ ಸದಸ್ಯರನ್ನಷ್ಟೇ ವಿಚಾರಣೆ ನಡೆಸಬೇಕೆಂದಿಲ್ಲ. ಮೇಲಾಗಿ, ಪ್ರಕರಣದ ಆರೋಪಿಗಳು ಹಾಗೂ ಹತ್ಯೆಗೀಡಾದ ರುದ್ರೇಶ್ ನಡುವೆ ಯಾವುದೇ ಹಗೆತನವಿರಲಿಲ್ಲ. ಆರ್ಎಸ್ಎಸ್ ಸದಸ್ಯರಲ್ಲಿ ಭಯ ಮೂಡಿಸುವ ಉದ್ದೇಶದಿಂದಲೇ ಕೊಲೆ ಮಾಡಲಾಗಿದೆ ಎಂದು ಪ್ರಾಸಿಕ್ಯೂಷನ್ ವಾದವಾಗಿದೆ. ಪ್ರಕರಣದ ದೋಷಾರೋಪ ಪಟ್ಟಿಯಲ್ಲಿರುವ ಅಂಶಗಳನ್ನು ಪರಿಗಣಿಸಿ, ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿದ್ದಾರೆಂಬ ವಿಚಾರ ಮೇಲ್ನೋಟಕ್ಕೆ ಕಂಡುಬಂದಿರುವ ಹಿನ್ನೆಲೆಯಲ್ಲಿಯೇ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ಎನ್ಐಎ ವಾದವೇನು?
ಮೇಲ್ಮನವಿಗೆ ಆಕ್ಷೇಪಿಸಿದ್ದ ಎನ್ಐಎ ಪರ ವಕೀಲರು, ಯುಎಪಿಎ ಸೆಕ್ಷನ್ 15ರಲ್ಲಿ ವ್ಯಾಖ್ಯಾನಿಸಲಾಗಿರುವ ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಿಸಿಕೊಂಡವರಿಗೆ ಜಾಮೀನು ನೀಡಲು ಕಾಯ್ದೆಯ ಸೆಕ್ಷನ್ 43-ಡಿ ಅಡಿಯಲ್ಲಿ ನಿರ್ಬಂಧವಿದೆ. ಜತೆಗೆ, ಭಯೋತ್ಪಾದಕ ಕೃತ್ಯವೆಸಗಿದವರಿಗೆ ಶಿಕ್ಷೆ ವಿಧಿಸಲು ಕಾಯ್ದೆಯ ಸೆಕ್ಷನ್ 16ರ ಅಡಿಯಲ್ಲಿ ಅವಕಾಶವಿದೆ. ಅದರ ಪ್ರಕಾರ ಭಯೋತ್ಪಾದಕ ಕೃತ್ಯವೆಸಗಿದ 'ಯಾವುದೇ ವ್ಯಕ್ತಿ'ಯನ್ನು ವಿಚಾರಣೆಗೆ ಒಳಪಡಿಸಬಹುದಾಗಿದ್ದು, ಆ ವ್ಯಕ್ತಿಗಳು ನಿಷೇಧಿತ ಉಗ್ರಗಾಮಿ ಸಂಘಟನೆಗಳ ಸದಸ್ಯರೇ ಆಗಿರಬೇಕೆಂದಿಲ್ಲ ಎಂದು ಹೇಳಿದ್ದರು.
ಅರ್ಜಿದಾರರ ವಾದ:
ಅರ್ಜಿದಾರರು, ತಾವು ಪಿಎಫ್ಐ ಹಾಗೂ ಎಸ್ಡಿಪಿಐ ಸದಸ್ಯರಾಗಿದ್ದು ಇವು ನಿಷೇಧಿತ ಸಂಘಟನೆಗಳಲ್ಲ. ಆದ್ದರಿಂದ, ತಮ್ಮ ವಿರುದ್ಧದ ಪ್ರಕರಣದಲ್ಲಿ ಯುಎಪಿಎ ಸೆಕ್ಷನ್ಗಳನ್ನು ಅನ್ವಯಿಸಲು ಅವಕಾಶವಿಲ್ಲ. ಯುಎಪಿಎ ಪ್ರಕರಣವೆಂಬ ಕಾರಣ ನೀಡಿ, ವಿಶೇಷ ಕೋರ್ಟ್ ಜಾಮೀನು ನಿರಾಕರಿಸಿರುವ ಆದೇಶ ರದ್ದುಪಡಿಸಬೇಕೆಂದು ಕೋರಿದ್ದರು.
ಪ್ರಕರಣದ ಹಿನ್ನೆಲೆ:
2016ರ ಅ.16ರಂದು ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆಯಾಗಿತ್ತು. ಆರ್ಎಸ್ಎಸ್ ಸದಸ್ಯರ ಮನದಲ್ಲಿ ಭಯ ಮೂಡಿಸುವ ಉದ್ದೇಶದಿಂದಲೇ ರುದ್ರೇಶ್ ಹತ್ಯೆ ಮಾಡಲಾಗಿದೆ ಎಂಬ ಆರೋಪದಲ್ಲಿ ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಪ್ರಕರಣದ ಆರೋಪಿಗಳ ವಿರುದ್ಧ ಐಪಿಸಿ, ಶಸಾಸ್ತ ಕಾಯ್ದೆ ಹಾಗೂ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications