ಯಾವ ಪಕ್ಷ ಅಧಿಕಾರಕ್ಕೆರಿದರು ಹಿಂದುಗಳಿಗೆ, ಹಿಂದು ಧರ್ಮಕ್ಕೆ ಅನ್ಯಾಯವಾಗಬಾರದು: ಸುಧಾಕರ್
ಹಾಸನ, ನವೆಂಬರ್ 30: ಕಾಂಗ್ರೆಸ್ನವರಿಗೆ ಗೊತ್ತಿರುವುದು ರಾವಣ ಮಾತ್ರ. ಆದರೆ ಬಿಜೆಪಿಗೆ ಶ್ರೀರಾಮಚಂದ್ರನ ಆಡಳಿತ ತಿಳಿದಿದ್ದು, ಇಲ್ಲಿ ವ್ಯವಸ್ಥೆಗೆ ಯಾರು ಅನಿವಾರ್ಯವಲ್ಲ. ಯಾವ ಪಕ್ಷ ಅಧಿಕಾರಕ್ಕೆ ಬಂದೂ ಸಹಿತ ಹಿಂದುಗಳಿಗೆ, ಹಿಂದು ಧರ್ಮಕ್ಕೆ ಅನ್ಯಾಯವಾಗಬಾರದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಸುಧಾಕರ್, ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಶತಮಾನದ ಮಹಾತ್ಮ ಎಂದು ಕರೆಯಲಾಗುತ್ತಿದೆ. ಶ್ರೀರಾಮಚಂದ್ರ ರಾಮರಾಜ್ಯವನ್ನು ಕಟ್ಟಿದಂತೆಯೇ ಮೋದಿಯವರು ಆಡಳಿತ ನಡೆಸುತ್ತಿದ್ದಾರೆ. ಹಿಂದಿನ ಯುಪಿಎ ಸರ್ಕಾರ ಹೇಗೆ ಆಡಳಿತ ನಡೆಸಿತ್ತು, ಈಗ ಹೇಗೆ ಆಡಳಿತ ನಡೆಯುತ್ತಿದೆ ಎಂಬುದನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರೇ ತಿಳಿದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಕುಟುಕಿದರು.
ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಾತ್ವಿಕವಾಗಿ ಹಾಗೂ ಆಶಯದ ರೀತಿಯಲ್ಲಿ ಮಾತನಾಡಿದ್ದಾರೆಯೇ ಹೊರತು ನಿರ್ದಿಷ್ಟವಾಗಿ ಏನೂ ಹೇಳಿಲ್ಲ. ಹಾಗಾಗಿ ಅದರಲ್ಲಿ ಏನೂ ತಪ್ಪಿಲ್ಲ. ಬಿಜೆಪಿ ಪಕ್ಷ ರೌಡಿ ಶೀಟರ್ ಅಥವಾ ಕ್ರಿಮಿನಲ್ ಹಿನ್ನೆಲೆ ಇರುವವರನ್ನು ಪಕ್ಷಕ್ಕೆ ಸೇರಿಸುವುದಿಲ್ಲ. ಇದನ್ನು ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರೂ ಅದನ್ನು ಸ್ಪಷ್ಟಪಡಿಸಿದ್ದಾರೆ ಎಂದರು.

ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದರೆ ಅವರಿಗೆ ಮಾತ್ರ ಉಳಿಗಾಲವಾಗುತ್ತದೆ. ಆದರೆ ರಾಜ್ಯ ಸುಭಿಕ್ಷೆಯಿಂದಿದೆ. ನಾನು ಸೇರಿದಂತೆ ಯಾವುದೇ ವ್ಯಕ್ತಿ ವ್ಯವಸ್ಥೆಗೆ ಅನಿವಾರ್ಯವಲ್ಲ. ಯಾರೂ ಇಲ್ಲದಿದ್ದರೂ ವ್ಯವಸ್ಥೆ ಮುಂದುವರಿಯುತ್ತದೆ ಎಂದು ಹೇಳಿದರು.
ರಮೇಶ್ ಜಾರಕಿಹೊಳಿಗೆ ಬಿಜೆಪಿಯಲ್ಲಿ ಅವಕಾಶ
ಈ ದೇಶದಲ್ಲಿ ಬಹುಜನರು ಹಿಂದೂಗಳಾಗಿದ್ದಾರೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಹಿಂದೂಗಳಿಗೆ, ಹಿಂದೂ ಧರ್ಮಕ್ಕೆ ಅನ್ಯಾಯವಾಗಬಾರದು ಎಂಬ ಅರ್ಥದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರು ಹೇಳಿಕೆ ನೀಡಿದ್ದಾರೆ. ಹಿರಿಯ ನಾಯಕರಾದ ರಮೇಶ್ ಜಾರಕಿಹೊಳಿಯವರಿಗೆ ಬಿಜೆಪಿ ಉತ್ತಮ ಅವಕಾಶಗಳನ್ನು ನೀಡಲಿದೆ. ಬೆಳಗಾವಿ ಭಾಗದಲ್ಲಿ ಅವರು ಶ್ರಮಿಸುತ್ತಿದ್ದಾರೆ.

ಚುನಾವಣೆ ವೇಳೆ ಎಲ್ಲಾ ಯಾತ್ರೆಗಳು ಆರಂಭವಾಗುತ್ತದೆ. ಭಾರತ್ ಜೋಡೋ, ಪಂಚರತ್ನ ಕೂಡ ನಡೆಯುತ್ತಿರುವುದು ಸಹಜ. ಬಿಜೆಪಿ ಆಡಳಿತ ಮಾಡುತ್ತಿರುವುದೇ ಅಭಿವೃದ್ಧಿ ಹೆಸರಿನಲ್ಲಿ. ಧರ್ಮ, ಜಾತಿಯ ಓಲೈಕೆ ಮಾಡುವುದು ಕಾಂಗ್ರೆಸ್ ಮಾತ್ರ. ಇದು ಇತಿಹಾಸದಲ್ಲೂ ಕಂಡುಬರುತ್ತದೆ ಎಂದು ವ್ಯಂಗ್ಯವಾಡಿದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications