ಎಪಿಎಲ್ ಕಾರ್ಡ್ ದಾರರಿಗೂ ಅನ್ನಭಾಗ್ಯ ವಿಸ್ತರಣೆ
ಬಾಗಲಕೋಟೆ, ಫೆ. 1: ಎಪಿಎಲ್ ಕಾರ್ಡ್ ದಾರರಿಗೂ ಅನ್ನಭಾಗ್ಯ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಮೂಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಾಗಕೋಟೆಯ ಜಮಖಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ರಾಜ್ಯದ ಶೇ. 26 ರಷ್ಟು ಜನ ಇನ್ನು ಹಸಿವಿನಿಂದ ನರಳುತ್ತಿದ್ದಾರೆ. ಯಾರೂ ಹಸಿದ ಹೊಟ್ಟೆಯಲ್ಲಿ ಮಲುಗಬಾರು ಎಂಬ ಉದ್ದೇಶದಿಂದ ಯೋಜನೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.[ಸೋಮವಾರದಿಂದ ವಿಧಾನಸಭೆ ಜಂಟಿ ಅಧಿವೇಶನ]
ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯನ್ನು ಆರಂಭದಲ್ಲೇ ಜಾರಿಗೆ ತಂದು ಯಶಸ್ವಿಯಾಗಿದೆ. ರಾಜ್ಯದ ಲಕ್ಷಾಂತರ ಕುಟುಂಬಗಳು ಇದರ ಲಾಭ ಪಡೆದುಕೊಳ್ಳುತ್ತಿವೆ. ಈಗ ಎಪಿಎಲ್ ಕಾರ್ಡ್ ದಾರರನ್ನು ಈ ಪಟ್ಟಿಗೆ ಸೇರಿಸಲಾಗುವುದು ಎಂದು ಮಾಹಿತಿ ನೀಡಿದರು.[ದಿಢೀರನೆ ಶಾಲೆಗೆ ಬಂದ ಸಿದ್ದು ಕಂಡು ಮಕ್ಕಳಿಗೆ ಹಿಗ್ಗೋಹಿಗ್ಗು]
ಎಪಿಎಲ್ ಕುಟುಂಬಗಳನ್ನು ಯೋಜನೆ ವ್ಯಾಪ್ತಿಗೆ ಸೇರಿಸಿದಾಗ ರಾಜ್ಯದ ಬೊಕ್ಕಸದ ಮೇಲೆ ಹೊರೆ ಬೀಳುವುದು ಸಹಜ. ಆದರೆ ಕೆಳ ಮಧ್ಯಮ ವರ್ಗದ ಕುಟುಂಬಗಳ ನೆರವಿಗೆ ಧಾವಿಸಬೇಕಾಗಿರುವುದು ನಮ್ಮ ಕರ್ತವ್ಯ ಎಂದು ಹೇಳಿದರು.