ಎಚ್.ಡಿ.ದೇವೇಗೌಡರ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಕೇವಲ 1 ರೂಪಾಯಿಗೆ ಊಟ

ಬೆಂಗಳೂರು: ದೇಶದ ಮಾಜಿ ಪ್ರಧಾನ ಮಂತ್ರಿಗಳು ಹಾಗೂ ಜೆಡಿಎಸ್‌ ವರಿಷ್ಠರಾದ ಎಚ್‌.ಡಿ.ದೇವೇಗೌಡ ಅವರ ಜನ್ಮದಿನದ ಅಂಗವಾಗಿ ರಾಜಧಾನಿ ಬೆಂಗಳೂರಿನಲ್ಲಿ ವಿಶಿಷ್ಟ ಕಾರ್ಯಕ್ರಮವೊಂದು ಜರುಗಿದೆ. ದೇವೇಗೌಡರ ಅಭಿಮಾನಿ ಹಾಗೂ ವಿಧಾನ ಪರಿಷತ್‌ ಶಾಸಕರೂ ಆಗಿರುವ ಜೆಡಿಎಸ್‌ ಹಿರಿಯ ನಾಯಕ ಟಿ.ಎ.ಶರವಣ ಅವರು ಬಡವರ ಹಸಿವು ನೀಗಿಸುವ ಮೂಲಕ ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.

ಸೋಮವಾರ, ದೇವೇಗೌಡರ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ಬಸವನಗುಡಿ ವ್ಯಾಪ್ತಿಯ ಹನುಮಂತ ನಗರದ 50 ಅಡಿ ರಸ್ತೆಯಲ್ಲಿರುವ 'ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್‌'ನಲ್ಲಿ ಸಾರ್ವಜನಿಕರಿಗೆ ಕೇವಲ 1 ರೂಪಾಯಿಗೆ ಉಪಹಾರ ಹಾಗೂ ಮುದ್ದೆ ಊಟವನ್ನು ವಿತರಿಸಲಾಯಿತು.

Appaji Canteen

ಬೆಳಗ್ಗೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಸಾರ್ವಜನಿಕರು, ಬಡವರು, ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು 1 ರೂಪಾಯಿಗೆ ಸ್ವಾದಿಷ್ಟವಾದ ಊಟ ಸವಿದು ಹರ್ಷ ವ್ಯಕ್ತಪಡಿಸಿದರು. ರಾಜಕೀಯ ನಾಯಕರ ಹುಟ್ಟುಹಬ್ಬವನ್ನು ಕೇವಲ ಕಟೌಟ್, ಹಾರ-ತುರಾಯಿಗಳ ಮೂಲಕ ಅದ್ದೂರಿಯಾಗಿ ಆಚರಿಸುವ ಬದಲು, ಈ ರೀತಿ ಅನ್ನದಾನದ ಮೂಲಕ ಆಚರಿಸಿರುವುದು ಸಾರ್ವಜನಿಕರ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ಬಟ್ಟೆ ವಿತರಣೆ

ಕೇವಲ 1 ರೂ.ಗೆ ಊಟ ಮಾತ್ರವಲ್ಲದೆ, ಈ ಸಂದರ್ಭದಲ್ಲಿ ಪೌರ ಕಾರ್ಮಿಕರು ಹಾಗೂ ದಿನದ 24 ಗಂಟೆಯೂ ಸೇವೆ ಸಲ್ಲಿಸುವ ಆಟೋ ಚಾಲಕರಿಗೆ ಉಚಿತವಾಗಿ ಬಟ್ಟೆಗಳನ್ನು ವಿತರಿಸಲಾಯಿತು. ಈ ವಿಶೇಷ ಸೇವಾ ಕಾರ್ಯಕ್ರಮಕ್ಕೆ ಕನ್ನಡದ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್ ಸೀಸನ್ - 12'ರ ವಿನ್ನರ್ ಗಿಲ್ಲಿ ನಟ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದು ಕಾರ್ಯಕ್ರಮದ ಮೆರಗನ್ನು ಇನ್ನಷ್ಟು ಹೆಚ್ಚಿಸಿತು. ಗಿಲ್ಲಿ ನಟ ಅವರನ್ನು ಹತ್ತಿರದಿಂದ ನೋಡಲು ಹಾಗೂ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಯುವಕರು ಹಾಗೂ ಅಭಿಮಾನಿಗಳು ಜಮಾಯಿಸಿದ್ದರು. ಇವರಲ್ಲದೆ, ಹಲವು ರಾಜಕೀಯ ಗಣ್ಯರು ಹಾಗೂ ಜೆಡಿಎಸ್ ಮುಖಂಡರು ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

9 ವರ್ಷಗಳ ನಿರಂತರ ಸೇವೆ

ಹಸಿದವರಿಗೆ, ದಿನಗೂಲಿ ನೌಕರರಿಗೆ ಹಾಗೂ ಬಡವರಿಗೆ ಅತಿ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಊಟ, ಉಪಹಾರ ಒದಗಿಸುವ ಉದ್ದೇಶದಿಂದ ಆರಂಭವಾದ 'ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್‌' ಇದೀಗ ಯಶಸ್ವಿ 9 ವರ್ಷಗಳನ್ನು ಪೂರೈಸಿದೆ. ವಿಧಾನ ಪರಿಷತ್‌ ಶಾಸಕ ಟಿ.ಎ.ಶರವಣ ಅವರು ಯಾವುದೇ ಸರ್ಕಾರಿ ಅನುದಾನವಿಲ್ಲದೆ, ಸಂಪೂರ್ಣವಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಕಳೆದ 9 ವರ್ಷಗಳಿಂದ ಈ ಕ್ಯಾಂಟೀನ್ ಅನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ.

ಬಸವನಗುಡಿ ವಿಧಾನಸಭಾ ಕ್ಷೇತ್ರದ ಹನುಮಂತ ನಗರದಲ್ಲಿರುವ ಈ ಕ್ಯಾಂಟೀನ್‌, ಪ್ರತಿದಿನ ಸಾವಿರಾರು ಜನರಿಗೆ ಶುಚಿ ಹಾಗೂ ರುಚಿಯಾದ ಊಟ, ಉಪಹಾರಗಳನ್ನು ಅತ್ಯಂತ ಕೈಗೆಟುಕುವ ದರದಲ್ಲಿ ನೀಡುತ್ತಾ ಅನ್ನದಾತನಾಗಿ ರೂಪುಗೊಂಡಿದೆ. ವಿಶೇಷವಾಗಿ, ಕೊರೊನಾ ಸಾಂಕ್ರಾಮಿಕದ (Covid-19) ಸಂಕಷ್ಟದ ಸಮಯದಲ್ಲಿ ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡು ಪರದಾಡುತ್ತಿದ್ದ ಲಕ್ಷಾಂತರ ಜನರಿಗೆ ಈ ಕ್ಯಾಂಟೀನ್‌ ಆಸರೆಯಾಗಿತ್ತು.

"ರಾಜ್ಯದಲ್ಲಿ ಯಾರೊಬ್ಬರೂ ಹಸಿವಿನಿಂದ ಮಲಗಬಾರದು, ಹಸಿದವರಿಗೆ ಅನ್ನ ಕೊಡಬೇಕು ಎಂಬುದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಬಹುದೊಡ್ಡ ಕನಸಾಗಿದೆ. ಆ ಕನಸನ್ನು ನನಸಾಗಿಸಲು ಹಾಗೂ ಅವರ ಆದರ್ಶಗಳನ್ನು ಪಾಲಿಸಲು ಅಭಿಮಾನಿಯಾಗಿ ನಾನು ನಿರಂತರವಾಗಿ ಶ್ರಮಿಸುತ್ತಿದ್ದೇನೆ" ಎಂದು ಶಾಸಕ ಟಿ.ಎ.ಶರವಣ ಈ ಸಂದರ್ಭದಲ್ಲಿ ತಿಳಿಸಿದರು. ಒಟ್ಟಾರೆಯಾಗಿ, ಶರವಣ ಅವರ ಈ ಜನಪರ ಕಾಳಜಿ ಎಲ್ಲರ ಪ್ರಶಂಸೆಗೆ ಒಳಪಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+