ದೇವಸ್ಥಾನಗಳ ಅರ್ಚಕರಿಂದ ಯಡಿಯೂರಪ್ಪಗೆ ಮನವಿ
ಬೆಂಗಳೂರು, ಏಪ್ರಿಲ್ 1: ಭಾರತ ಲಾಕ್ಡೌನ್ ಆಗಿರುವುದರಿಂದ ಎಲ್ಲಾ ದೇವಸ್ಥಾನಗಳು ಬಂದ್ ಆಗಿವೆ, ಇದರಿಂದ ಸುಮಾರು 1 ಲಕ್ಷ ಅರ್ಚಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅರ್ಚಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿ ಅಳಲು ತೋಡಿಕೊಂಡಿದ್ದಾರೆ.
ಎಲ್ಲವೂ ಸಹಜ ಸ್ಥಿತಿಗೆ ಬರುವವರೆಗೆ ತಾತ್ಕಾಲಿಕ ಪರಿಹಾರ ನೀಡಬೇಕು ಎಂದು ಅರ್ಚಕರ, ಆಗಮೀಕರ ಒಕ್ಕೂಟ ಮುಖ್ಯಮಂತ್ರಿಗೆ ಮನವಿ ಮಾಡಿದೆ.
ಲಾಕ್ಡೌನ್ ಕೊನೆಗೊಂಡು ದೇವಸ್ಥಾನಗಳು ಮತ್ತೆ ಎಂದಿನಂತೆ ಕಾರ್ಯಾಚರಣೆಗೊಳ್ಳುವವರೆಗೆ ತಾತ್ಕಾಲಿಕ ಪರಿಹಾರ ನೀಡಬೇಕು ಎಂದು ಅವರು ಕೇಳಿಕೊಂಡಿದ್ದಾರೆ.

ಕೊರೊನಾ ಭೀತಿಯಿಂದಾಗಿ ಮುಜರಾಯಿ ಇಲಾಖೆಗೆ ಒಳಪಟ್ಟ ಸಿ ದರ್ಜೆಯ 35 ಸಾವಿರ ದೇವಸ್ಥಾಗಳ ಬಾಗಿಲು ಮುಚ್ಚಲಾಗಿದೆ. ಇಲ್ಲಿ 1 ಲಕ್ಷ ಅರ್ಚಕರು ಕೆಲಸ ಮಾಡುತ್ತಿದ್ದು, ಅವರು ಜೀವನ ನಡೆಸುವುದೇ ಕಷ್ಟವಾಗಿದೆ.
ಅರ್ಚಕರು ಹಾಗೂ ಅವರ ಕುಟುಂಬದ ಜೀವನ ನಿರ್ವಹಣೆಗೆ ಸರ್ಕಾರ ನೆರವು ನೀಡಬೇಕು ಎಂದು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ-ಆಗಮೀಕರ ಮತ್ತು ಉಪಾಧಿವಂತ ಒಕ್ಕೂಟ ಪ್ರಧಾನ ಕಾರ್ಯದರ್ಶಿ ಕೆಎಸ್ಎನ್ ದೀಕ್ಷಿತ್ ಮನವಿ ಸಲ್ಲಿಸಿದ್ದಾರೆ.












Click it and Unblock the Notifications