ಡಿಎಲ್ ಪಡೆಯಲು ಇನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ
ಬೆಂಗಳೂರು, ಜ. 21 : ಇನ್ನು ಮುಂದೆ ಡ್ರೈವಿಂಗ್ ಲೈಸೆನ್ಸ್, ವಾಹನಗಳ ನೋಂದಣಿ ಮುಂತಾದವುಗಳನ್ನು ಮಾಡಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಾರಿಗೆ ಇಲಾಖೆ ಆನ್ಲೈನ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದ್ದು, ಫೆಬ್ರವರಿಯಿಂದ ಈ ಸೇವೆ 12 ಜಿಲ್ಲೆಗಳಲ್ಲಿ ಜಾರಿಗೆ ಬರಲಿದೆ.
ಒಂದಕ್ಕಿಂತ ಹೆಚ್ಚು ಪ್ರಾದೇಶಿಕ ಸಾರಿಗೆ ಕಛೇರಿಗಳಿರುವ ಜಿಲ್ಲೆಗಳಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ವಾಹನಗಳ ನೋಂದಣಿ, ಕಲಿಕೆ ಮತ್ತು ಚಾಲನಾ ಪರವಾನಿಗೆ ಪತ್ರಗಳನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಯಾವ ಜಿಲ್ಲೆಗಳು : ಆನ್ಲೈನ್ ಸೇವೆಗಳನ್ನು ರಾಜ್ಯದಲ್ಲಿ ಒಂದಕ್ಕಿಂತ ಹೆಚ್ಚು ಪ್ರಾದೇಶಿಕ/ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಗಳಿರುವ 12 ಜಿಲ್ಲೆಗಳಲ್ಲಿ ಆರಂಭಿಸಲಾಗುತ್ತದೆ. [ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯವಾಗಲಿದೆ!]
ಮೈಸೂರು, ಕೋಲಾರ, ತುಮಕೂರು, ಮಂಡ್ಯ, ಹಾಸನ, ಶಿವಮೊಗ್ಗ, ಮಂಗಳೂರು, ಬೆಳಗಾವಿ, ಬಾಗಲಕೋಟೆ, ಕಾರವಾರ, ಬಳ್ಳಾರಿ, ಬೀದರ್ ಜಿಲ್ಲೆಗಳಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ. ಫೆಬ್ರವರಿ 15ರಿಂದ ಕಡ್ಡಾಯವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಜ.15ರಿಂದ ಈ ವ್ಯವಸ್ಥೆ ಪ್ರಾಯೋಗಿಕವಾಗಿ 12 ಜಿಲ್ಲೆಗಳಲ್ಲಿ ಜಾರಿಗೆ ಬರಲಿದ್ದು, ಈ ಜಿಲ್ಲೆಗಳಲ್ಲಿನ ಜನರು ತಮ್ಮ ಜಿಲ್ಲೆಯ ಯಾವುದೇ ಪ್ರಾದೇಶಿಕ / ಸಹಾಯಕ ಪ್ರಾದೇಶಿಕ ಸಾರಿಗೆ ಕಛೇರಿಗಳಲ್ಲಿ ಕಲಿಕಾ ಪರವಾನಗಿ, ಹೊಸ ಚಾಲನಾ ಪರವಾನಗಿ ಮತ್ತು ಹೊಸ ವಾಹನ ನೋಂದಣಿಗಾಗಿ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ರಾಜ್ಯದ ಉಳಿದ ಜಿಲ್ಲೆಗಳಲ್ಲಿಯೂ ಮಾರ್ಚ್ 2015ರಿಂದ ಆನ್ಲೈನ್ ಸೇವೆ ಆರಂಭಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಅದರಂತೆ ಎಲ್ಲಾ ಜಿಲ್ಲೆಗಳಲ್ಲೂ ಈ ವರ್ಷಾಂತ್ಯದಲ್ಲಿ ಈ ಯೋಜನೆ ಜಾರಿಗೆ ಬರಲಿದೆ. ಅರ್ಜಿ ಸಲ್ಲಿಸಲು ವಿಳಾಸ http://www.rto.kar.nic.in/
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ












Click it and Unblock the Notifications