Get Updates
Get notified of breaking news, exclusive insights, and must-see stories!

ಮಾನಸ ಸರೋವರ ಯಾತ್ರೆಯ ಸಹಾಯಧನಕ್ಕೆ ಅರ್ಜಿ ಹಾಕಿ

ಬೆಂಗಳೂರು, ಜೂನ್ 02 : ಕರ್ನಾಟಕ ಸರ್ಕಾರ ಇದೇ ಮೊದಲ ಬಾರಿಗೆ ಮಾನಸ ಸರೋವರ ಯಾತ್ರಿಕರಿಗೆ ಸಹಾಯ ಧನ ನೀಡಲು ಮುಂದಾಗಿದೆ. ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಬಹುದು.

2016-17ನೇ ಸಾಲಿನಿಂದ ಕರ್ನಾಟಕ ಸರ್ಕಾರ ಮಾನಸ ಸರೋವರ ಯಾತ್ರೆ ಕೈಗೊಂಡ ಯಾತ್ರಿಕರಿಗೆ ಪ್ರೋತ್ಸಾಹ ಧನ ನೀಡಲಿದೆ. ರಾಜ್ಯದ ಖಾಯಂ ನಿವಾಸಿಗಳು ಮಾರ್ಗಸೂಚಿಗಳ ಷರತ್ತುಗಳಿಗೆ ಒಳಪಟ್ಟವರು ಮಾತ್ರ ಧನಸಹಾಯ ಪಡೆಯಲು ಅರ್ಹರು. [ಬೆಂಗಳೂರು ಯಾತ್ರಾರ್ಥಿಗೆ ನೆರವಿನ ಹಸ್ತ ಚಾಚಿದ ಅನಂತ್ ಕುಮಾರ್]

manasa sarovara

ಸಹಾಯಧನವನ್ನು ನೀಡಲು ಪಾಸ್‍ಪೋರ್ಟ್‍ನಲ್ಲಿ ಇರುವ ಕರ್ನಾಟಕ ರಾಜ್ಯದ ವಿಳಾಸವನ್ನು ಪರಿಗಣಿಸಲಾಗುತ್ತದೆ. ಈಗಾಗಲೇ ಮಾನಸ ಸರೋವರ ಯಾತ್ರೆ ಕೈಗೊಂಡು ಸರ್ಕಾರದಿಂದ ಧನಸಹಾಯ ಪಡೆದ ಯಾತ್ರಿಕರು, ಇದೇ ಉದ್ದೇಶಕ್ಕಾಗಿ ಎರಡನೇ ಬಾರಿಗೆ ಈ ಧನಸಹಾಯ ಪಡೆಯಲು ಅರ್ಹರಾಗುವುದಿಲ್ಲ. [ಮಾನಸ ಸರೋವರ ಯಾತ್ರಿಕರಿಗೆ ಸುಷ್ಮಾ ಶುಭ ಹಾರೈಕೆ]

ಸರ್ಕಾರದ ಮಾರ್ಗಸೂಚಿಗಳಿಗೆ ಒಳಪಟ್ಟು ಧನಸಹಾಯ ಪಡೆಯಲು ಇಚ್ಚಿಸುವ ಯಾತ್ರಿಕರು ತಾವು ಯಾತ್ರೆ ಮುಗಿಸಿದ್ದಕ್ಕೆ ಪಡೆಯುವ ಪ್ರಮಾಣ ಪತ್ರದ ದಿನಾಂಕದಿಂದ 4 ತಿಂಗಳ ಒಳಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಕಚೇರಿಯಲ್ಲಿ ಖುದ್ದಾಗಿ ಪಡೆದು ಸಲ್ಲಿಸಬೇಕು. [ಯಾತ್ರಿಗಳ ಗಮನಕ್ಕೆ : ಮಾನಸ ಸರೋವರಕ್ಕೆ ಹಾದಿ ಸುಗುಮ!]

ನಿಗದಿತ ಅವಧಿ ಮೀರಿ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ವಿವರಗಳಿಗಾಗಿ 080-26709689 ದೂರವಾಣಿ ಸಂಖ್ಯೆಗೆ ಕರೆ ಮಾಡಿ.

ಅರ್ಜಿ ಪಡೆಯಲು ಮತ್ತು ಸಲ್ಲಿಸಲು ವಿಳಾಸ : ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, 4ನೇ ಮಹಡಿ, ಶ್ರೀ ಮಿಂಟೋ ಶ್ರೀ ಆಂಜನೇಯ ವಾರ್ತಾ ಭವನ, ಆಲೂರು ವೆಂಕಟರಾವ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು -18.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+