ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾನಸ ಸರೋವರ ಯಾತ್ರೆಯ ಸಹಾಯಧನಕ್ಕೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಜೂನ್ 02 : ಕರ್ನಾಟಕ ಸರ್ಕಾರ ಇದೇ ಮೊದಲ ಬಾರಿಗೆ ಮಾನಸ ಸರೋವರ ಯಾತ್ರಿಕರಿಗೆ ಸಹಾಯ ಧನ ನೀಡಲು ಮುಂದಾಗಿದೆ. ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಬಹುದು.

2016-17ನೇ ಸಾಲಿನಿಂದ ಕರ್ನಾಟಕ ಸರ್ಕಾರ ಮಾನಸ ಸರೋವರ ಯಾತ್ರೆ ಕೈಗೊಂಡ ಯಾತ್ರಿಕರಿಗೆ ಪ್ರೋತ್ಸಾಹ ಧನ ನೀಡಲಿದೆ. ರಾಜ್ಯದ ಖಾಯಂ ನಿವಾಸಿಗಳು ಮಾರ್ಗಸೂಚಿಗಳ ಷರತ್ತುಗಳಿಗೆ ಒಳಪಟ್ಟವರು ಮಾತ್ರ ಧನಸಹಾಯ ಪಡೆಯಲು ಅರ್ಹರು. [ಬೆಂಗಳೂರು ಯಾತ್ರಾರ್ಥಿಗೆ ನೆರವಿನ ಹಸ್ತ ಚಾಚಿದ ಅನಂತ್ ಕುಮಾರ್]

manasa sarovara

ಸಹಾಯಧನವನ್ನು ನೀಡಲು ಪಾಸ್‍ಪೋರ್ಟ್‍ನಲ್ಲಿ ಇರುವ ಕರ್ನಾಟಕ ರಾಜ್ಯದ ವಿಳಾಸವನ್ನು ಪರಿಗಣಿಸಲಾಗುತ್ತದೆ. ಈಗಾಗಲೇ ಮಾನಸ ಸರೋವರ ಯಾತ್ರೆ ಕೈಗೊಂಡು ಸರ್ಕಾರದಿಂದ ಧನಸಹಾಯ ಪಡೆದ ಯಾತ್ರಿಕರು, ಇದೇ ಉದ್ದೇಶಕ್ಕಾಗಿ ಎರಡನೇ ಬಾರಿಗೆ ಈ ಧನಸಹಾಯ ಪಡೆಯಲು ಅರ್ಹರಾಗುವುದಿಲ್ಲ. [ಮಾನಸ ಸರೋವರ ಯಾತ್ರಿಕರಿಗೆ ಸುಷ್ಮಾ ಶುಭ ಹಾರೈಕೆ]

ಸರ್ಕಾರದ ಮಾರ್ಗಸೂಚಿಗಳಿಗೆ ಒಳಪಟ್ಟು ಧನಸಹಾಯ ಪಡೆಯಲು ಇಚ್ಚಿಸುವ ಯಾತ್ರಿಕರು ತಾವು ಯಾತ್ರೆ ಮುಗಿಸಿದ್ದಕ್ಕೆ ಪಡೆಯುವ ಪ್ರಮಾಣ ಪತ್ರದ ದಿನಾಂಕದಿಂದ 4 ತಿಂಗಳ ಒಳಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಕಚೇರಿಯಲ್ಲಿ ಖುದ್ದಾಗಿ ಪಡೆದು ಸಲ್ಲಿಸಬೇಕು. [ಯಾತ್ರಿಗಳ ಗಮನಕ್ಕೆ : ಮಾನಸ ಸರೋವರಕ್ಕೆ ಹಾದಿ ಸುಗುಮ!]

ನಿಗದಿತ ಅವಧಿ ಮೀರಿ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ವಿವರಗಳಿಗಾಗಿ 080-26709689 ದೂರವಾಣಿ ಸಂಖ್ಯೆಗೆ ಕರೆ ಮಾಡಿ.

ಅರ್ಜಿ ಪಡೆಯಲು ಮತ್ತು ಸಲ್ಲಿಸಲು ವಿಳಾಸ : ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, 4ನೇ ಮಹಡಿ, ಶ್ರೀ ಮಿಂಟೋ ಶ್ರೀ ಆಂಜನೇಯ ವಾರ್ತಾ ಭವನ, ಆಲೂರು ವೆಂಕಟರಾವ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು -18.

English summary
Karnataka government has proposed to give financial assistance to the pilgrims from the State, who visit Kailasa Manasa Sarovara for the first time. The permanent residents of Karnataka are eligible to get the benefit of this scheme.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X