ವಾಟ್ಸಾಪ್ ಚಾಟ್ಬಾಟ್ ಬಳಸಿ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ, ಇಲ್ಲಿದೆ ವಿವರಗಳು
ಬೆಂಗಳೂರು, ಆಗಸ್ಟ್. 05: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹೊರಗಡೆ ಸುತ್ತಿ ಬೇಸರವಾಗಿದೆಯೇ? ಹಾಗಿದ್ದರೇ ಇಲ್ಲಿದೆ ಸುಲಭ ಉಪಾಯ. ಹೊರಗಿನ ಯಾವುದೇ ತೊಂದರೆಗಳಿಲ್ಲದೆ ಅರ್ಜಿ ಸಲ್ಲಿಸಲು ಕರ್ನಾಟಕ ಸರ್ಕಾರವು ರಾಜ್ಯದ ಜನರಿಗೆ ವಾಟ್ಸಾಪ್ ಚಾಟ್ಬಾಟ್ ಅನ್ನು ಪರಿಚಯಿಸಿದೆ. ಇದರ ಮೂಲಕ ನೀವು ಅರ್ಜಿ ಸಲ್ಲಿಸಬಹುದು.
ಭೌತಿಕ ಅರ್ಜಿಗಳನ್ನು ಸ್ವೀಕರಿಸುವ ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಹೆಚ್ಚಿನ ಜನರಿದ್ದು, ಜನಜಂಗುಳಿಯಿಂದ ಕೂಡಿವೆ. ದಟ್ಟಣೆಯನ್ನು ಕಡಿಮೆ ಮಾಡುವ ಪ್ರಯತ್ನದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಚಾಟ್ಬಾಟ್ನೊಂದಿಗೆ ಪ್ರಯೋಗ ಮಾಡಲು ಮುಂದಾಗಿದೆ.

ಏನಿದು ಗೃಹ ಲಕ್ಷ್ಮಿ ಯೋಜನೆ..?
ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ, ಕಾಂಗ್ರೆಸ್ ಪಕ್ಷವು ಈ ಯೋಜನೆಯನ್ನು ತನ್ನ ಐದು ಚುನಾವಣಾ ಗ್ಯಾರೆಂಟಿಗಳಲ್ಲಿ ಒಂದಾಗಿ ಘೋಷಿಸಿತು. ಈ ಯೋಜನೆಯು ರಾಜ್ಯದ ಮಹಿಳಾ ಕುಟುಂಬದ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂಪಾಯಿಯ ನಗದು ಸಹಾಯವನ್ನು ಒದಗಿಸುತ್ತದೆ. ಸುಮಾರು 1.5 ಕೋಟಿ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗುವ ನಿರೀಕ್ಷೆಯಿದೆ. ಈ ಯೋಜನೆಯ ನೋಂದಣಿ ಜುಲೈ 19 ರಂದು ಪ್ರಾರಂಭವಾಗಿದೆ.
ಅರ್ಜಿ ಸಲ್ಲಿಸಲು ವಾಟ್ಸಾಪ್ ಚಾಟ್ಬಾಟ್ ಬಳಸುವುದು ಹೇಗೆ?
ಚಾಟ್ಬಾಟ್ ಲಿಂಕ್ ಆಗಿರುವ ವಾಟ್ಸಾಪ್ ಸಂಖ್ಯೆ 8147500500 ಅನ್ನು ಸರ್ಕಾರ ಒದಗಿಸಿದೆ. ಬಳಕೆದಾರರು ತಮ್ಮ ವಿವರಗಳನ್ನು ವಾಟ್ಸಾಪ್ ಸಂಖ್ಯೆಗೆ ಕಳುಹಿಸಿದ ನಂತರ, ಚಾಟ್ಬಾಟ್ ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಬಳಕೆದಾರರಿಗೆ ಸಹಾಯ ಮಾಡುತ್ತದೆ ಮತ್ತು ಮಾರ್ಗದರ್ಶನ ನೀಡುತ್ತದೆ.

ಚಾಟ್ಬಾಟ್ ನಂತರ ಅಪ್ಲಿಕೇಶನ್ಗಳನ್ನು ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕಚೇರಿಗಳಿಗೆ ವರ್ಗಾಯಿಸುತ್ತದೆ. ಅಲ್ಲಿ ಅವುಗಳನ್ನು ಪರಿಶೀಲಿಸಲಾಗುತ್ತದೆ. ಮಾಧ್ಯಮ ವರದಿಗಳ ಪ್ರಕಾರ, ವಾಟ್ಸಾಪ್ ಚಾಟ್ಬಾಟ್ ಸೇವೆಗಳಿಂದ ಈಗಾಗಲೇ ಏಳು ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಗಿದೆ.
ಅರ್ಜಿದಾರರು ತಮ್ಮ ಆಧಾರ್ ಕಾರ್ಡ್ ಜೊತೆಗೆ ತಮ್ಮ ಪಡಿತರ ಚೀಟಿ, ಬಡತನ ರೇಖೆಗಿಂತ ಕೆಳಗಿನ ಕಾರ್ಡ್ (BPL), ಬಡತನ ರೇಖೆಗಿಂತ ಮೇಲಿನ ಕಾರ್ಡ್ (APL), ಅಥವಾ ಅಂತ್ಯೋದಯ ಕಾರ್ಡ್ ಅನ್ನು ಒದಗಿಸಬೇಕಾಗುತ್ತದೆ. ಯಾರಾದರೂ ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ನೊಂದಿಗೆ ಲಿಂಕ್ ಮಾಡದಿದ್ದರೆ, ಅವರು ಪಾಸ್ಬುಕ್ ಅನ್ನು ನೀಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಕ್ತಿ ಯೋಜನೆಯಲ್ಲಿಯೂ ಚಾಟ್ಬಾಟ್ ಸೇವೆಗಳನ್ನು ಜಾರಿಗೆ ತರಲು ಸರ್ಕಾರ ಯೋಜಿಸುತ್ತಿದೆ ಎಂದು ವರದಿಗಳು ತಿಳಿಸಿವೆ. ಉಚಿತ ಬಸ್ ಪ್ರಯಾಣಕ್ಕಾಗಿ ಶಕ್ತಿ ಸ್ಮಾರ್ಟ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಮಹಿಳಾ ಪ್ರಯಾಣಿಕರಿಗೆ ಸರ್ಕಾರವು ಈಗಾಗಲೇ ತಿಳಿಸಿದೆ. ಈ ಯೋಜನೆಗಾಗಿ ಶೀಘ್ರದಲ್ಲೇ ವಾಟ್ಸಾಪ್ ಚಾಟ್ಬಾಟ್ ಅನ್ನು ಪರಿಚಯಿಸುವ ಸಾಧ್ಯತೆಯಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ












Click it and Unblock the Notifications