ಸಂಪುಟ, ಖಾತೆ ಹಂಚಿಕೆ ಬಳಿಕ ಯಡಿಯೂರಪ್ಪ ಮುಂದೆ ಮತ್ತೊಂದು ಸವಾಲು
Recommended Video
ಬೆಂಗಳೂರು, ಆಗಸ್ಟ್ 29: ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಬಳಿಕ ಪಕ್ಷದಲ್ಲಿ ಎದ್ದಿರುವ ಅಸಮಾಧಾನದಿಂದ ಈಗಾಗಲೇ ಹೈರಾಣಾಗಿರುವ ಯಡಿಯೂರಪ್ಪ ಅವರಿಗೆ ಮತ್ತೊಂದು ದೊಡ್ಡ ಸವಾಲು ಎದುರಾಗಿದೆ.
ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಬಳಿಕ ಈಗ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡುವ ಸವಾಲು ಯಡಿಯೂರಪ್ಪ ಅವರ ಮುಂದಿದ್ದು, ಅದರಿಂದ ಉದ್ಭವವಾಗಬಹುದಾದ ಅಸಮಾಧಾನವನ್ನು ಎದುರಿಸಲು ಯಡಿಯೂರಪ್ಪ ಸಿದ್ಧವಾಗಬೇಕಿದೆ.
ಎಲ್ಲ ಜಿಲ್ಲೆಗಳಿಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಯಡಿಯೂರಪ್ಪ ನೇಮಿಸಬೇಕಿದೆ. ಸರ್ಕಾರದ ಅನುದಾನದ ಹಂಚಿಕೆ, ಪಕ್ಷ ಸಂಘಟನೆ ಎರಡೂ ದೃಷ್ಟಿಯಿಂದ ಜಿಲ್ಲಾ ಉಸ್ತುವಾರಿ ನೇಮಕ ಮಹತ್ವದ್ದಾಗಿದ್ದು, ಜಿಲ್ಲಾ ಉಸ್ತುವಾರಿ ನೇಮಕದ ಹಿಂದೆ ರಾಜಕೀಯ ಲೆಕ್ಕಾಚಾರಗಳೂ ಹೆಚ್ಚಿಗೆ ಇವೆ.

ಪ್ರಮುಖ ಜಿಲ್ಲೆಗಳಿಗೆ ಬೇಡಿಕೆ ಹೆಚ್ಚಿದೆ
ಬೆಂಗಳೂರು, ಮೈಸೂರು, ಬಳ್ಳಾರಿ, ಬೆಳಗಾವಿ ಸೇರಿದಂತೆ ಪ್ರಮುಖ ಜಿಲ್ಲೆಗಳ ಹೊಣೆಗಾರಿಕೆಯನ್ನು ಯಾರಿಗೆ ನೀಡುವುದು ಎಂಬುದು ಯಡಿಯೂರಪ್ಪ ಅವರಿಗೆ ತಲೆನೋವಾಗಿದೆ. ಬೆಂಗಳೂರು ಉಸ್ತುವಾರಿ ಸ್ಥಾನಕ್ಕೆ ಈಗಾಗಲೇ ಪ್ರಮುಖ ಮುಖಂಡರೇ ಬೇಡಿಕೆ ಇಟ್ಟಿದ್ದಾರೆ.

ಹಲವು ಲೆಕ್ಕಾಚಾರಗಳು ಉಸ್ತುವಾರಿ ನೇಮಕದಲ್ಲಿ ಇದೆ
ಬೆಳಗಾವಿ, ಬಳ್ಳಾರಿ ಜಿಲ್ಲೆಗಳ ಉಸ್ತುವಾರಿ ಸ್ಥಾನಕ್ಕೂ ಬೇಡಿಕೆ ಹೆಚ್ಚಿದೆ. ಜಿಲ್ಲಾ ಉಸ್ತುವಾರಿ ನೇಮಕದಲ್ಲಿ ಜಾತಿ ಲೆಕ್ಕಾಚಾರ, ಪ್ರಾದೇಶಿಕತೆ ಲೆಕ್ಕಾಚಾರವೂ ಮಿಳಿತವಾಗಿರುವುದರಿಂದ ಯಡಿಯೂರಪ್ಪ ಅವರಿಗೆ ಇದು ಸವಾಲೆನಿಸಿದೆ.

ಸಂಪುಟ ವಿಸ್ತರ, ಖಾತೆ ಹಂಚಿಕೆಯಿಂದ ಬಿಜೆಪಿಯಲ್ಲಿ ಅಸಮಾಧಾನ
ಈಗಾಗಲೇ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆಯಿಂದ ಬಿಜೆಪಿಯಲ್ಲಿ ಅಸಮಾಧಾನ ಎದ್ದಿದ್ದು, ಅದರ ಬೇಗುದಿಯೇ ಇನ್ನೂ ಆರಿಲ್ಲ. ಇಂತಹಾ ಸಮಯದಲ್ಲಿ ಜಿಲ್ಲಾ ಉಸ್ತುವಾರಿಗಳ ನೇಮಕ ಇನ್ನಷ್ಟು ಅಸಮಾಧಾನಕ್ಕೆ ಕಾರಣ ಆಗಬಹುದು ಎಂಬ ಆತಂಕ ಇದೆ. ಹಾಗಾಗಿ ಜಿಲ್ಲಾ ಉಸ್ತುವಾರಿಗಳ ನೇಮಕವನ್ನು ತಡ ಮಾಡುವ ಸಾಧ್ಯತೆಯೂ ಇದೆ.

ಅಸಮಾಧಾನದ ಕಿಚ್ಚು ಹೊತ್ತಿಸಿದ್ದ ಉಸ್ತುವಾರಿ ಸಚಿವ ಸ್ಥಾನ
ಮೈತ್ರಿ ಸರ್ಕಾರದ ಅವಧಿಯಲ್ಲಿ ಇದೇ ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಿಂದಲೇ ಆರಂಭವಾದ ಅಸಮಾಧಾನದ ಕಿಡಿ ಸರ್ಕಾರವನ್ನು ಉರುಳಿಸುವವರೆಗೂ ಮುಂದುವರೆದಿತ್ತು. ಡಿ.ಕೆ.ಶಿವಕುಮಾರ್ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಿಸಿದ್ದನ್ನು ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ ವಿರೋಧಿಸಿದ್ದರು. ಇಲ್ಲಿ ಹೊತ್ತಿಕೊಂಡ ಬೆಂಕಿ ಸರ್ಕಾರದ ಅವಸಾನದಲ್ಲಿ ಕೊನೆಯಾಯಿತು.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications