ಸಂಪುಟ, ಖಾತೆ ಹಂಚಿಕೆ ಬಳಿಕ ಯಡಿಯೂರಪ್ಪ ಮುಂದೆ ಮತ್ತೊಂದು ಸವಾಲು
Recommended Video
ಬೆಂಗಳೂರು, ಆಗಸ್ಟ್ 29: ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಬಳಿಕ ಪಕ್ಷದಲ್ಲಿ ಎದ್ದಿರುವ ಅಸಮಾಧಾನದಿಂದ ಈಗಾಗಲೇ ಹೈರಾಣಾಗಿರುವ ಯಡಿಯೂರಪ್ಪ ಅವರಿಗೆ ಮತ್ತೊಂದು ದೊಡ್ಡ ಸವಾಲು ಎದುರಾಗಿದೆ.
ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಬಳಿಕ ಈಗ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡುವ ಸವಾಲು ಯಡಿಯೂರಪ್ಪ ಅವರ ಮುಂದಿದ್ದು, ಅದರಿಂದ ಉದ್ಭವವಾಗಬಹುದಾದ ಅಸಮಾಧಾನವನ್ನು ಎದುರಿಸಲು ಯಡಿಯೂರಪ್ಪ ಸಿದ್ಧವಾಗಬೇಕಿದೆ.
ಎಲ್ಲ ಜಿಲ್ಲೆಗಳಿಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಯಡಿಯೂರಪ್ಪ ನೇಮಿಸಬೇಕಿದೆ. ಸರ್ಕಾರದ ಅನುದಾನದ ಹಂಚಿಕೆ, ಪಕ್ಷ ಸಂಘಟನೆ ಎರಡೂ ದೃಷ್ಟಿಯಿಂದ ಜಿಲ್ಲಾ ಉಸ್ತುವಾರಿ ನೇಮಕ ಮಹತ್ವದ್ದಾಗಿದ್ದು, ಜಿಲ್ಲಾ ಉಸ್ತುವಾರಿ ನೇಮಕದ ಹಿಂದೆ ರಾಜಕೀಯ ಲೆಕ್ಕಾಚಾರಗಳೂ ಹೆಚ್ಚಿಗೆ ಇವೆ.

ಪ್ರಮುಖ ಜಿಲ್ಲೆಗಳಿಗೆ ಬೇಡಿಕೆ ಹೆಚ್ಚಿದೆ
ಬೆಂಗಳೂರು, ಮೈಸೂರು, ಬಳ್ಳಾರಿ, ಬೆಳಗಾವಿ ಸೇರಿದಂತೆ ಪ್ರಮುಖ ಜಿಲ್ಲೆಗಳ ಹೊಣೆಗಾರಿಕೆಯನ್ನು ಯಾರಿಗೆ ನೀಡುವುದು ಎಂಬುದು ಯಡಿಯೂರಪ್ಪ ಅವರಿಗೆ ತಲೆನೋವಾಗಿದೆ. ಬೆಂಗಳೂರು ಉಸ್ತುವಾರಿ ಸ್ಥಾನಕ್ಕೆ ಈಗಾಗಲೇ ಪ್ರಮುಖ ಮುಖಂಡರೇ ಬೇಡಿಕೆ ಇಟ್ಟಿದ್ದಾರೆ.

ಹಲವು ಲೆಕ್ಕಾಚಾರಗಳು ಉಸ್ತುವಾರಿ ನೇಮಕದಲ್ಲಿ ಇದೆ
ಬೆಳಗಾವಿ, ಬಳ್ಳಾರಿ ಜಿಲ್ಲೆಗಳ ಉಸ್ತುವಾರಿ ಸ್ಥಾನಕ್ಕೂ ಬೇಡಿಕೆ ಹೆಚ್ಚಿದೆ. ಜಿಲ್ಲಾ ಉಸ್ತುವಾರಿ ನೇಮಕದಲ್ಲಿ ಜಾತಿ ಲೆಕ್ಕಾಚಾರ, ಪ್ರಾದೇಶಿಕತೆ ಲೆಕ್ಕಾಚಾರವೂ ಮಿಳಿತವಾಗಿರುವುದರಿಂದ ಯಡಿಯೂರಪ್ಪ ಅವರಿಗೆ ಇದು ಸವಾಲೆನಿಸಿದೆ.

ಸಂಪುಟ ವಿಸ್ತರ, ಖಾತೆ ಹಂಚಿಕೆಯಿಂದ ಬಿಜೆಪಿಯಲ್ಲಿ ಅಸಮಾಧಾನ
ಈಗಾಗಲೇ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆಯಿಂದ ಬಿಜೆಪಿಯಲ್ಲಿ ಅಸಮಾಧಾನ ಎದ್ದಿದ್ದು, ಅದರ ಬೇಗುದಿಯೇ ಇನ್ನೂ ಆರಿಲ್ಲ. ಇಂತಹಾ ಸಮಯದಲ್ಲಿ ಜಿಲ್ಲಾ ಉಸ್ತುವಾರಿಗಳ ನೇಮಕ ಇನ್ನಷ್ಟು ಅಸಮಾಧಾನಕ್ಕೆ ಕಾರಣ ಆಗಬಹುದು ಎಂಬ ಆತಂಕ ಇದೆ. ಹಾಗಾಗಿ ಜಿಲ್ಲಾ ಉಸ್ತುವಾರಿಗಳ ನೇಮಕವನ್ನು ತಡ ಮಾಡುವ ಸಾಧ್ಯತೆಯೂ ಇದೆ.

ಅಸಮಾಧಾನದ ಕಿಚ್ಚು ಹೊತ್ತಿಸಿದ್ದ ಉಸ್ತುವಾರಿ ಸಚಿವ ಸ್ಥಾನ
ಮೈತ್ರಿ ಸರ್ಕಾರದ ಅವಧಿಯಲ್ಲಿ ಇದೇ ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಿಂದಲೇ ಆರಂಭವಾದ ಅಸಮಾಧಾನದ ಕಿಡಿ ಸರ್ಕಾರವನ್ನು ಉರುಳಿಸುವವರೆಗೂ ಮುಂದುವರೆದಿತ್ತು. ಡಿ.ಕೆ.ಶಿವಕುಮಾರ್ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಿಸಿದ್ದನ್ನು ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ ವಿರೋಧಿಸಿದ್ದರು. ಇಲ್ಲಿ ಹೊತ್ತಿಕೊಂಡ ಬೆಂಕಿ ಸರ್ಕಾರದ ಅವಸಾನದಲ್ಲಿ ಕೊನೆಯಾಯಿತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications