ಕರ್ನಾಟಕ ಉಪಲೋಕಾಯುಕ್ತರಾಗಿ ನ್ಯಾ. ಆನಂದ ನೇಮಕ
ಬೆಂಗಳೂರು, ಡಿಸೆಂಬರ್, 09: ಲೋಕಾಯುಕ್ತ ಭಾಸ್ಕರರಾವ್ ರಾಜೀನಾಮೆ ಸಲ್ಲಿಕೆ ಮಾಡುತ್ತಿದ್ದಂತೆ ಹುದ್ದೆಗೆ ಮುಂದೆ ಯಾರು ಎಂಬ ಪ್ರಶ್ನೆ ಸಹಜವಾಗಿಯೇ ಎದ್ದಿದೆ. ಇದರೊಂದಿಗೆ ಜಸ್ಟಿಸ್ ನಾರಾಯಣಪ್ಪ ಆನಂದ ಅವರು ಉಪಲೋಕಾಯುಕ್ತ ಹುದ್ದೆಗೆ ನೇಮಕವಾಗುವ ಎಲ್ಲ ಸಾಧ್ಯತೆಗಳು ಕಂಡುಬರುತ್ತಿವೆ. ಜತೆಗೆ ಆನಂದ ಉತ್ತಮ ಆಯ್ಕೆ ಎಂದು ವಿಶ್ಲೇಷಣೆ ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನಿವೃತ್ತಿ ಹೊಂದಿದ ಸಂದರ್ಭ ಅವರು ಮಾಡಿದ ಭಾಷಣ ನೇಮಕವಾಗುವ ಸಾಧ್ಯತೆಗೆ ಮತ್ತಷ್ಟು ಪುಷ್ಠಿ ನೀಡುತ್ತಿದೆ. ಅವರು ನೀಡಿದ ತೀರ್ಮಾನಗಳ ಇತಿಹಾಸ ಸಹ ಉಪಲೋಕಾಯುಕ್ತ ಹುದ್ದೆಗೆ ಸಮರ್ಥರು ಎಂದು ಹೇಳುತ್ತಿದೆ. ಇವರ ಆಯ್ಕೆಗೆ ಯಾವ ರಾಜಕೀಯ ಪಕ್ಷಗಳಿಂದಲೂ ವಿರೋಧ ವ್ಯಕ್ತವಾಗುವ ಸಾಧ್ಯತೆ ಕಡಿಮೆ ಇದೆ.[ಭಾಸ್ಕರರಾವ್ ರಾಜೀನಾಮೆ ನೀಡಲು ಕಾರಣವೇನು?]

ಒನ್ಇಂಡಿಯಾದೊಂದಿಗೆ ಮಾತನಾಡಿದ ಕಾನೂನು ಇಲಾಖೆಯ ಕೆಲ ಅಧಿಕಾರಿಗಳು, ಆನಂದ ಅವರು ನಾವು ಕಂಡ ನಿಷ್ಪಕ್ಷಪಾತ ತೀರ್ಮಾನ ನೀಡುವ ನ್ಯಾಯಾಧೀಶರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಸದಾ ನಗುಮೊಗದಿಂದ ಇರುವ ಅವರು ತೀರ್ಮಾನ ನೀಡುವ ವೇಳೆ ಮಾತ್ರ ಯಾವ ಪ್ರಭಾವಕ್ಕೂ ಪೂರ್ವಗ್ರಹಕ್ಕೂ ಅವರು ಒಳಗಾಗುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.[ಲೋಕಾಯುಕ್ತ ಹುದ್ದೆಗೆ ಕೇಳಿಬರಲಿವೆ ಕನಿಷ್ಠ 5 ಹೆಸರು]
ಆನಂದ ಅವರ ನಿವೃತ್ತಿ ಭಾಷಣದ ಸಾಲುಗಳನ್ನು ಕೇಳಿದರೆ ಅವರ ಭ್ರಷ್ಟಾಚಾರ ಮುಕ್ತ ಸಮಾಜದ ಕಲ್ಪನೆ ನಮ್ಮ ಎದುರಿಗೆ ಬರುತ್ತದೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ವೇಳೆಯಲ್ಲೇ ಭ್ರಷ್ಟಾಚಾರ ನಿಯಂತ್ರಣಕ್ಕೆ ಸಂಬಂಧಿಸಿದ ಕೆಲ ಕಾನೂನುಗಳು ಅನುಷ್ಠಾನಕ್ಕೆ ಬಂದವು. ನಂತರ ಅದರಲ್ಲಿ ಕೆಲ ಬದಲಾವಣೆಗಳನ್ನು ಮಾಡಿಕೊಂಡು ಮುಂದುವರಿಯಲಾಯಿತು. ಆದರೆ ಸಮಾಜದಲ್ಲಿ ಮತ್ತು ಆಡಳಿತದಲ್ಲಿ ಇಂದು ಪಾರದರ್ಶಕತೆ ತರುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದ್ದರು.
ಜಸ್ಟಿಸ್ ನಾರಾಯಣಪ್ಪ ಆನಂದ ಯಾರು?
ಜಸ್ಟಿಸ್ ನಾರಾಯಣಪ್ಪ ಆನಂದ 30-11-1977 ರಿಂದ ವಕೀಲ ವೃತ್ತಿ ಆರಂಭ ಮಾಡಿದರು. ಕೋಲಾರ ಜಿಲ್ಲಾ ಕೋರ್ಟ್ ನಲ್ಲಿ ಮೊದಲಿಗೆ ಸೇವೆ ಸಲ್ಲಿಸಿದ್ದರು. ನಂತರ ಕೆಲಸ 1987-1989 ನಡುವೆ ಬೆಂಗಳೂರಿನಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದರು. ನಂತರ ಹಾಸನ, ಚಿತ್ರದುರ್ಗ ಮತ್ತು ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ನ್ಯಾಯ ದಾನ ಮಾಡಿದ್ದರು.[ಕರ್ನಾಟಕ ಲೋಕಾಯುಕ್ತ ಹಗರಣದ Timeline]
2003ರಲ್ಲಿ ಕರ್ನಾಟಕ ಹೈ ಕೋರ್ಟ್ ರಿಜಿಸ್ಟರ್ ಜನರಲ್ ಆಗಿ ನೇಮಕಗೊಂಡರು. ನಂತರ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದುಕೊಂಡರು. 2006 ರಿಂದ 2008ರ ವರೆಗೆ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸಿ ನಿವೃತ್ತರಾದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications