ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷ, ಸದಸ್ಯರ ನೇಮಕ
ಬೆಂಗಳೂರು, ಆಗಸ್ಟ್ 10: ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷ ಹಾಗೂ ಸದಸ್ಯರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಆದೇಶದ ಪ್ರಕಾರ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಆದೇಶ 2013 ಅಧ್ಯಾಯ ||ರ ಸೆಕ್ಷನ್ 3(ಬಿ) ಅನ್ವಯ ಒಂದು ವರ್ಷದ ಅವಧಿಗೆ ಸುತ್ತು ಸರದಿಯ ಮೂಲಕ ಈ ಕೆಳಕಂಡವರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಸದಸ್ಯರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಲಾಗಿದೆ.

ಮುಂದುವರೆದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಆದೇಶ 2013 ಅಧ್ಯಾಯ (||) ಸೆಕ್ಷನ್ 3 ಬಿ (2)ರ ಮೇರೆಗೆ ಶ್ರೀ ಅಜಯ್ ಸಿಂಗ್, ವಿಧಾನಸಭಾ ಸದಸ್ಯರು, ಜೇವರ್ಗಿ ವಿಧಾನಸಭಾ ಕ್ಷೇತ್ರ ಇವರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ಒಂದು ವರ್ಷದ ಅವಧಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ ನೇಮಿಸಿ ಆದೇಶ ಹೊರಡಿಸಲಾಗಿದೆ.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಇತರ ಸದಸ್ಯರೆಂದರೆ ಸೈಯದ್ ನಾಜೀರ್ ಹುಸೇನ್ ರಾಜ್ಯಸಭಾ ಸದಸ್ಯರು, ಅರವಿಂದ ಅರಳಿ ಯಲಕನೂರು ಎಂಎಲ್ಸಿ ಬೀದರ್, ತಿಪ್ಪಣ್ಣಪ್ಪ ಕಮಕನೂರು ಎಂಎಲ್ಸಿ ಕಲಬುರ್ಗಿ, ಅಜಯ್ ಸಿಂಗ್ ಎಂಎಲ್ಎ ಜೇವರ್ಗಿ ವಿಧಾನಸಭಾ ಕ್ಷೇತ್ರ, ಬಿಆರ್ ಪಾಟೀಲ್ ಶಾಸಕ ಅಳಂದ ವಿಧಾನಸಭಾ ಕ್ಷೇತ್ರ, ರಾಜಾ ವೆಂಕಟಪ್ಪ ನಾಯ್ಕ್ ಶಾಸಕ ಯಾದಗಿರಿ ವಿಧಾನಸಭಾ ಕ್ಷೇತ್ರ, ಹಂಪನಗೌಡ ಬಾದರ್ಲಿ ಶಾಸಕ ಸಿಂಧನೂರು ವಿಧಾನಸಭಾ ಕ್ಷೇತ್ರ, ಬಸವರಾಯ ರಾಯರೆಡ್ಡಿ ಶಾಸಕ ಯಲಬುರ್ಗಾ ವಿಧಾನಸಭಾ ಕ್ಷೇತ್ರ, ರಾಘವೇಂದ್ರ ಇಟ್ನಾಳ್ ಶಾಸಕ ಕೊಪ್ಪಳ ವಿಧಾನಸಭಾ ಕ್ಷೇತ್ರ, ತುಕಾರಾಮ್ ಶಾಸಕ ಸಂಡೂರು ವಿಧಾನಸಭಾ ಕ್ಷೇತ್ರ, ಎಚ್ಆರ್ ಗವಿಯಪ್ಪ ಶಾಸಕ ವಿಜಯನಗರ ವಿಧಾನಸಭಾ ಕ್ಷೇತ್ರ ಇವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications