ದಸರಾ ಹಬ್ಬಕ್ಕೆ ರಾಜ್ಯ ಸರ್ಕಾರ ಗಿಫ್ಟ್: 39 ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ಇಲ್ಲಿದೆ ಪಟ್ಟಿ
ಬೆಂಗಳೂರು, ಸೆಪ್ಟೆಂಬರ್ 25: ಹಲವು ತಿಂಗಳಿನಿಂದ ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗೆ ಕೊನೆಗೂ ನೇಮಕವಾಗಿದೆ. ದಸರಾ ಹಬ್ಬದ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶಾಸಕರಿಗೆ ಹಾಗೂ ಕಾರ್ಯಕರ್ತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. 39 ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರ ಹೈಕಮಾಂಡ್ ಮುದ್ರೆ ಹಾಕಿ ಇಂದು (ಸೆಪ್ಟೆಂಬರ್ 24) ರಾಜ್ಯಕ್ಕೆ ರವಾನೆ ಮಾಡಿದೆ.
ಇನ್ನು ಜೈಲಿನಲ್ಲಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಅವರಿಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಪಿ ರಘು ಅವರನ್ನು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗಕ್ಕೆ ಮತ್ತು ಮಾಜಿ ಶಾಸಕ ಎಸ್ಜಿ ನಂಜಯ್ಯನಮಠ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಿಸಲಾಗಿದೆ. ಹಾಗಾದ್ರೆ, ಯಾರಿಗೆ ಯಾವ ನಿಗಮ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎನ್ನುವ ಪಟ್ಟಿ ಈ ಕೆಳಗಿನಂತಿದೆ.

ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ಪಟ್ಟಿ!
ಪಿ.ರಘು - ಸಫಾಯಿ ಕರ್ಮಚಾರಿ ಆಯೋಗ
ಅರುಣ್ ಪಾಟೀಲ್ - ಎನ್ಡಬ್ಲ್ಯೂಕೆಎಸ್ಆರ್ಟಿಸಿ
ಶಿವಲೀಲಾ ವಿನಯ್ ಕುಲಕರ್ಣಿ - ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ವಡ್ನಾಳ್ ಜಗದೀಶ್ - ಜೀವವೈವಿಧ್ಯ ಮಂಡಳಿ
ಮುರಳಿ ಅಶೋಕ್ - ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
ಡಾ.ಮೂರ್ತಿ - ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ
ಮಲ್ಲಿಕಾರ್ಜುನ್ - ಮಾಜಿ ಸೈನಿಕರ ಕಲ್ಯಾಣ ಮಂಡಳಿ
ಡಾ.ಬಿ.ಸಿ.ಮುದ್ದುಗಂಗಾಧರ್ - ಮಾವು ಅಭಿವೃದ್ಧಿ ನಿಗಮ
ಶರ್ಲೆಟ್ ಪಿಂಟೋ - ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ
ಮರಿಯೋಜಿ ರಾವ್ - ಮರಾಠ ಅಭಿವೃದ್ಧಿ ನಿಗಮ
ಎಂ.ಎ.ಗಫೂರ್ - ಕರಾವಳಿ ಅಭಿವೃದ್ಧಿ ಪ್ರಾಧಿಕಾರ
ಕೆ. ಹರೀಶ್ ಕುಮಾರ್ - ಮೆಸ್ಕಾಂ
ಎನ್. ಸಂಪಂಗಿ - ಕರ್ನಾಟಕ ವೇರ್ಹೌಸಿಂಗ್ ಕಾರ್ಪೊರೇಷನ್
ವೈ. ಸಯೀದ್ ಅಹ್ಮದ್ -ದೇವರಾಜ ಅರಸು ಟ್ರಕ್ ಟರ್ಮಿನಲ್
ಮಹೇಶ್ - ಕಾಡುಗೊಲ್ಲಅಭಿವೃದ್ಧಿ ನಿಗಮ
ಮಂಜಪ್ಪ - ಬಯಲುಸೀಮೆ ಅಭಿವೃದ್ಧಿ ಮಂಡಳಿ, ಚಿತ್ರದುರ್ಗ
ಧರ್ಮಣ್ಣ ಉಪ್ಪಾರ - ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ
ಅಗಾ ಸುಲ್ತಾನ್ - ಕೇಂದ್ರ ಪರಿಹಾರ ಸಮಿತಿ
ಎಸ್.ಜಿ. ನಂಜಯ್ಯನಮಠ - ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ
ಆಂಜನಪ್ಪ - ಬೀಜ ಅಭಿವೃದ್ಧಿ ನಿಗಮ ನಿಯಮಿತ
ನೀಲಕಂಠ ಮುಳ್ಗೆ - ಕಲ್ಯಾಣ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ
ಬಾಬು ಹೊನ್ನಾ ನಾಯ್ಕ್ - ಕಾಡಾ, ಭೀಮರಾಯನಗುಡಿ, ಕಲಬುರಗಿ
ಯುವರಾಜ್ ಕದಂ - ಮಲಪ್ರಭಾ ಮತ್ತು ಘಟಪ್ರಭಾ ಯೋಜನೆ ಕಾಡಾ, ಬೆಳಗಾವಿ
ಅನಿಲ್ ಕುಮಾರ್ ಜಾಮಬಾರ್ - ತೊಗರಿಬೇಳೆ ಅಭಿವೃದ್ಧಿ ನಿಗಮ, ಕಲಬುರಗಿ
ಪ್ರವೀಣ್ ಹರ್ವಾಲ್ - ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ)
ಮಂಜುನಾಥ ಪೂಜಾರಿ - ನಾರಾಯಣ ಗುರು ಅಭಿವೃದ್ಧಿ ನಿಗಮ
ಸೈಯದ್ ಮೊಹಮೂದ್ ಚಿಸ್ಟಿ - ಬೇಳೆಕಾಳುಗಳ ಅಭಿವೃದ್ಧಿ ಮಂಡಳಿ ನಿಯಮಿತ, ಕಲಬುರಗಿ
ಎಂ.ಎಸ್. ಮುತ್ತುರಾಜ್ - ಸವಿತಾ ಸಮಾಜ ಅಭಿವೃದ್ಧಿ ನಿಗಮ
ನಂಜಪ್ಪ - ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
ವಿಶ್ವಾಸ್ ದಾಸ್ - ಗಾಣಿಗ ಅಭಿವೃದ್ಧಿ ನಿಗಮ
ಆರ್.ಎಸ್. ಸತ್ಯನಾರಾಯಣ - ರಾಜ್ಯ ಮದ್ಯಪಾನ ಸಂಯಮ ಮಂಡಳಿ
ಗಂಗಾಧರ್ - ರೇಷ್ಮೆ ಮಾರುಕಟ್ಟೆ ಮಂಡಳಿ ಲಿಮಿಟೆಡ್
ಶಿವಪ್ಪ -ಹಾಸನ ನಗರಾಭಿವೃದ್ಧಿ ಪ್ರಾಧಿಕಾರ
ಬಿ.ಎಸ್. ಕವಲಗಿ -ನಿಂಬೆ ಅಭಿವೃದ್ಧಿ ಮಂಡಳಿ
ಡಾ. ಶ್ರೀನಿವಾಸ ವೇಲು - ಕುಂಬಾರ ಅಭಿವೃದ್ಧಿ ನಿಗಮ
ಟಿ.ಎಂ. ಶಹೀದ್ ಥೆಕ್ಕಿಲ್ - ರಾಜ್ಯ ಕನಿಷ್ಠ ವೇತನ ಮಂಡಳಿ
ಚೇತನ್ ಕೆ. ಗೌಡ - ಕೈಮಗ್ಗ ಅಭಿವೃದ್ಧಿ (ಪವರ್ಲೂಮ್) ಮಂಡಳಿ
ಶರಣಪ್ಪ ಸಲಾದ್ಪುರ್ -ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ಅಭಿವೃದ್ಧಿ ಮಂಡಳಿ
ಲಾವಣ್ಯ ಬಲ್ಲಾಳ್ ಜೈನ್ -ರಾಜ್ಯ ಬೀಜ ಮತ್ತು ಸಾವಯವ ದೃಢೀಕರಣ ಸಂಸ್ಥೆ












Click it and Unblock the Notifications