ಬಿಜೆಪಿ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ: ಅವರ ಮಾಹಿತಿ ಇಲ್ಲಿದೆ....
ಬೆಂಗಳೂರು ಡಿಸೆಂಬರ್ 23: ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕವಾದ ಬಳಿಕ ಬಿ.ವೈ.ವಿಜಯೇಂದ್ರ ಪಕ್ಷದ ರಾಜ್ಯದ ಘಟಕಕ್ಕೆ ನೂತನ ಪದಾಧಿಕಾರಿಗಳು ಹಾಗೂ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ರಾಜ್ಯ ಉಪಾಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು, ಖಜಾಂಚಿ ಮತ್ತು ಏಳು ಮೋರ್ಚಾಗಳ ಅಧ್ಯಕ್ಷರ ನೇಮಕ ಮಾಡಲಾಗಿದೆ. ಜೊತೆಗೆ ಪದಾಧಿಕಾರಿಗಳ ಪಟ್ಟಿಯಲ್ಲಿ ಆರು ಶಾಸಕರು, ವಿಧಾನಪರಿಷತ್ನ ಓರ್ವ ಸದಸ್ಯ, ಹತ್ತು ಮಾಜಿ ಶಾಸಕರಿಗೆ ಅವಕಾಶ ನೀಡಲಾಗಿದೆ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಆರು ಆಪ್ತರು, ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ವಿಜಯೇಂದ್ರರ ಇಬ್ಬರು ಆಪ್ತರಿಗೆ ಸ್ಥಾನ ನೀಡಲಾಗಿದೆ. ಬಿಜೆಪಿಗೆ ಬಂದಿದ್ದ 17 ವಲಸಿಗರ ಪೈಕಿ ಭೈರತಿ ಬಸವರಾಜ್ಗೆ ಮತ್ತು ಆರು ಮಹಿಳೆಯರಿಗೆ ಸ್ಥಾನ ನೀಡಲಾಗಿದೆ.
ರಾಜ್ಯ ಉಪಾಧ್ಯಕ್ಷರು: ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ ನಾಯಕ್, ಎನ್.ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ಸಂತೋಷ್ ನಾಯಕ್, ಡಾ.ಬಸವರಾಜ ಕೇಲಗಾರ, ಮಾಳವಿಕಾ ಅವಿನಾಶ್, ಎಂ.ರಾಜೇಂದ್ರ ನೇಮಕ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು: ವಿ.ಸುನೀಲ್ ಕುಮಾರ್, ಪಿ.ರಾಜೀವ್, ಎನ್.ಎಸ್.ನಂದೀಶ ರೆಡ್ಡಿ, ಜೆ.ಪಿ.ಪ್ರೀತಮ್ ಗೌಡ ನೇಮಕ.
ಕಾರ್ಯದರ್ಶಿಗಳು: ಶೈಲೇಂದ್ರ ಬೆಲ್ದಾಳೆ, ಡಿ.ಎಸ್.ಅರುಣ್, ಬಸವರಾಜ ಮತ್ತೀಮೋಡ್, ಸಿ.ಮುನಿರಾಜು, ವಿನಯ್ ಬಿದರೆ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಶರಣು ತಳ್ಳಿಕೇರಿ, ಲಲಿತಾ ಅನಾಪುರ, ಡಾ.ಲಕ್ಷ್ಮಿ ಅಶ್ವೀನ್ ಗೌಡ, ಅಂಬಿಕಾ ಹುಲಿನಾಯ್ಕರ್,
ಬಿಜೆಪಿ ರಾಜ್ಯ ಖಜಾಂಚಿ: ಸುಬ್ಬನರಸಿಂಹ ನೇಮಕಗೊಂಡಿದ್ದಾರೆ.
ಮೋರ್ಚಾಗಳ ರಾಜ್ಯ ಅಧ್ಯಕ್ಷರು:
ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರಾಗಿ - ಸಿ.ಮಂಜುಳಾ ನೇಮಕ
ಯುವ ಮೋರ್ಚಾ ರಾಜ್ಯಾಧ್ಯಕ್ಷರಾಗಿ- ಧೀರಜ್ ಮುನಿರಾಜು
ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷರಾಗಿ -ಬಂಗಾರು ಹನುಮಂತು
ಬಿಜೆಪಿ ಎಸ್ಸಿ ಮೋರ್ಚಾ-ಎಸ್.ಮಂಜುನಾಥ್(ಸಿಮೆಂಟ್ ಮಂಜು)
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ-ರಘು ಕೌಟಿಲ್ಯ
ಬಿಜೆಪಿ ರೈತ ಮೋರ್ಚಾ-ಎ.ಎಸ್.ಪಾಟೀಲ್ ನಡಹಳ್ಳಿ
ಬಿಜೆಪಿ ಅಲ್ಪಸಂಖ್ಯಾ ಮೋರ್ಚಾ-ಅನಿಲ್ ಥಾಮಸ್












Click it and Unblock the Notifications