ಪಿಎಸ್ಐ ನೇಮಕಾತಿ ಲೇಟಾದ್ರೂ ಪಾರದರ್ಶಕವಾಗಿ ನಡೆದಿದೆ: ಬೆನ್ನುತಟ್ಟಿಕೊಂಡ ಸಚಿವ
ಬಹುನಿರೀಕ್ಷಿತ ಪಿಎಸ್ಐ ಮರುಪರೀಕ್ಷೆ ನಂತರ ಅಭ್ಯರ್ಥಿಗಳ ಆಯ್ಕೆ ಪಟ್ಟಿಯು ನಿನ್ನೆ ಬಿಡುಗಡೆಯಾಗಿದೆ. ಹಲವು ವರ್ಷಗಳ ಹೋರಾಟದಲ್ಲಿ ಪಿಎಸ್ಐ ಅಭ್ಯರ್ಥಿಗಳು ಕೊನೆಗೂ ನಿನ್ನೆ ಜಯ ಸಾಧಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಸಚಿವ ಮಾತನಾಡಿ, ತಮ್ಮ ಸರ್ಕಾರದ ಕಾರ್ಯವೈಖರಿ ಬಗ್ಗೆ ಬೆನ್ನುತಟ್ಟಿಕೊಂಡಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟ ವ್ಯವಸ್ಥೆಯಿಂದಾಗಿ ಪ್ರತಿಭಾವಂತ ಪಿಎಸ್ಐ ಅಭ್ಯರ್ಥಿಗಳು ಕಟ್ಟಿಕೊಂಡಿದ್ದ ಕನಸು ಕಮರಿಹೋಗಿತ್ತು, ಪಿಎಸ್ಐ ನೇಮಕಾತಿಯ ಬೃಹತ್ ಹಗರಣವನ್ನು ಬಯಲಿಗೆಳೆಯುವ ನನ್ನ ಮೊದಲ ಹೆಜ್ಜೆಯಿಂದಲೇ ಪ್ರತಿಭಾವಂತರಿಗೆ ನ್ಯಾಯ ದೊರೆಯುವ ವಿಶ್ವಾಸವಿತ್ತು, ನಮ್ಮ ಹೋರಾಟದಲ್ಲಿ ಬದ್ಧತೆಯೂ ಇತ್ತು.

ನಾವು ಈ ಹಗರಣವನ್ನು ಬಿಚ್ಚಿಟ್ಟಾಗ ಅಂದಿನ ಬಿಜೆಪಿ ಸರ್ಕಾರದ ಗೃಹ ಸಚಿವರೂ ಸೇರಿ ಎಲ್ಲ ಬಿಜೆಪಿ ನಾಯಕರು ಸದನದಲ್ಲೇ ಹಗರಣ ನಡೆದೇ ಇಲ್ಲ ಎನ್ನುವ ಶತಮಾನದ ಹಸಿ ಸುಳ್ಳನ್ನು ಸತ್ಯದ ತಲೆಯ ಮೇಲೆ ಸುತ್ತಿಗೆಯಲ್ಲಿ ಹೊಡೆದಂತೆ ಹೇಳಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.
ಇಷ್ಟೂ ಸಾಲದೆಂಬಂತೆ, ನನ್ನ ಬಾಯಿ ಮುಚ್ಚಿಸಲು ಬಿಜೆಪಿಗರು ನಡೆಸಿದ ಕಸರತ್ತು ಒಂದೆರಡಲ್ಲ, ನನಗೆ ಸಿಐಡಿ ಪೊಲೀಸರ ಮೂಲಕ ಎರಡೆರಡು ಬಾರಿ ನೋಟಿಸ್ ನೀಡಿದ್ದರು. ಹಗರಣದ ಪ್ರಮುಖ ಆರೋಪಿ ಆರ್.ಡಿ ಪಾಟೀಲನೊಂದಿಗೆ ನನ್ನ ಹೆಸರು ತಳುಕು ಹಾಕಲು ಯತ್ನಿಸಿದ್ದರು ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ನನ್ನ ವಿರುದ್ಧ ಬಿಜೆಪಿ ನಾಯಕರು ಸಾಲುಗಟ್ಟಿ ನಿಂತು ತಮ್ಮ ಕೊಳಕು ನಾಲಿಗೆಯ ಮೂಲಕ ಯುದ್ಧ ಸಾರಿದ್ದರು. ಕಾನ್ವೆಂಟ್ ದಲಿತ್ ಎಂಬ ಬಿರುದನ್ನೂ ನನಗೆ ಕೊಟ್ಟಿದ್ದರು. ನೀರಿಗಿಳಿದ ಮೇಲೆ ಚಳಿಯ ಚಿಂತೆಯೇಕೆ ಎನ್ನುವಂತೆ ನ್ಯಾಯದ ಹೋರಾಟಕ್ಕೆ ಇಳಿದ ಮೇಲೆ ಬಿಜೆಪಿಗರ ದಾಳಿಗಳನ್ನು ಲೆಕ್ಕಿಸಲಿಲ್ಲ, ಲೆಕ್ಕಿಸುವ ಜಾಯಮಾನವೂ ನನ್ನದಲ್ಲ ಎಂದು ಕೌಂಟರ್ ಕೊಟ್ಟಿದ್ದಾರೆ.
ಇಂದು ನಮ್ಮ ಸರ್ಕಾರ ನಡೆಸಿದ 545 ಪಿಎಸ್ಐ ಹುದ್ದೆಗಳ ಪ್ರಾಮಾಣಿಕ ನೇಮಕಾತಿಯೇ ಬಿಜೆಪಿಗರಿಗೆ ನಾನು ಕೊಡಬಹುದಾದ ಅತ್ಯುತ್ತಮ ಉತ್ತರ ಎಂದು ಭಾವಿಸಿದ್ದೇನೆ. ಇಂದು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಹಾಗೂ ಪಾರದರ್ಶಕವಾಗಿ ಮರುಪರೀಕ್ಷೆ ನಡೆಸಿ, ಅಂದು ಬಿಜೆಪಿ ಸರ್ಕಾರ ಲೂಟಿಗೆ ಬಳಸಿಕೊಂಡಿದ್ದ ಅದೇ 545 ಪಿಎಸ್ಐ ಹುದ್ದೆಗಳಿಗೆ ಪ್ರತಿಭಾವಂತ ಅಭ್ಯರ್ಥಿಗಳನ್ನು ನಿಯಮಾನುಸಾರ, ನ್ಯಾಯಸಮ್ಮತವಾಗಿ ಆಯ್ಕೆ ಮಾಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಆಯ್ಕೆ ಪ್ರಕ್ರಿಯೆ ವಿಳಂಬವಾದರೂ ಪಾರದರ್ಶಕವಾಗಿರಬೇಕು ಎನ್ನುವುದು ನಮ್ಮ ಉದ್ದೇಶವಾಗಿತ್ತು. ಆಯ್ಕೆಯಾದ ಅಭ್ಯರ್ಥಿಗಳೆಲ್ಲರಿಗೂ ಅಭಿನಂದನೆಗಳು ಎಂದು ಪ್ರಿಯಾಂಕ್ ಖರ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ವಿಫಲರಾದ ಅಭ್ಯರ್ಥಿಗಳು ನಿರಾಸೆಗೊಳ್ಳದೆ ತಮ್ಮ ಪ್ರಯತ್ನವನ್ನು ಮುಂದುವರಿಸಬೇಕು, ಪ್ರತಿಭೆಗೆ ತಕ್ಕ ಫಲ ಪಡೆಯುವ ವಿಫುಲ ಅವಕಾಶಗಳನ್ನು ಸರ್ಕಾರ ಮಾಡಿಕೊಡಲಿದೆ ಎಂದು ಅಭಯ ನೀಡಿದ್ದಾರೆ.
ಚುನಾವಣೆಯ ಪೂರ್ವದಲ್ಲಿ ನಾವು ನೀಡಿದ್ದ ಭರವಸೆಯಂತೆಯೇ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಈಗಾಗಲೇ ಚಾಲನೆ ಕೊಡಲಾಗಿದೆ, ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿದೆ. ಕಾಂಗ್ರೆಸ್ ಸರ್ಕಾರ ಯುವ ಸಮುದಾಯದ ಜೊತೆಗಿದೆ. ನೊಂದವರಿಗೆ ನ್ಯಾಯ ನೀಡುವುದು, ಯುವಜನರಿಗೆ ಸುಭದ್ರ ಬದುಕು ರೂಪಿಸುವುದು ನಮ್ಮ ಆದ್ಯತೆ ಹಾಗೂ ಬದ್ಧತೆಯಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications