Medical seat: ರಾಜ್ಯದಲ್ಲಿ ವೈದ್ಯಕೀಯ ಸೀಟು ಹೆಚ್ಚಳಕ್ಕೆ ಒಪ್ಪಿಗೆ
Medical seat: ರಾಜ್ಯದ ಖಾಸಗಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 1,600 ವೈದ್ಯಕೀಯ ಸೀಟು ಹೆಚ್ಚಳಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಒಪ್ಪಿಗ ಸೂಚಿಸಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೂ ಸೀಟು ಹೆಚ್ಚಳ ಕುರಿತಾಗಿ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಜ್ಯದ 16 ಸರ್ಕಾರಿ, 8 ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ವೈದ್ಯಕೀಯ ಸೀಟು ಹೆಚ್ಚಳಕ್ಕೆ ಸ್ಥಳೀಯ ತಪಾಸಣಾ ಸಮಿತಿಗಳಿಂದ ಶಿಫಾರಸು ಮಾಡಲಾಗಿತ್ತು. ಈ ಶಿಫಾರಸ್ಸಿನಲ್ಲಿ ರಾಮನಗರ, ಹುಣಸೂರು, ಕನಕಪುರದ ಹೊಸ ಮೆಡಿಕಲ್ ಕಾಲೇಜುಗಳು ಕೂಡ ಸೇಡಿವೆ.

ಪ್ರಸ್ತುತ ರಾಜ್ಯ ಸರ್ಕಾರಿ, ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ 11,500 ವೈದ್ಯಕೀಯ ಸೀಟುಗಳು ಲಭ್ಯವಿದ್ದು, ಇವುಗಳಿಗೆ 1,600 ಸೀಟುಗಳು ಸೇರ್ಪಡೆ ಆದಲ್ಲಿ 13,100 ಸೀಟುಗಳು ಲಭ್ಯ ಆಗುತ್ತವೆ.
ಮೂಲಸೌಕರ್ಯ ಹೆಚ್ಚಿಸುವ ಗುರಿ: ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಿದ ನಂತರ ಉತ್ತರ ಪ್ರದೇಶದ ಸಿಎಂ ಇಂದು ಪ್ರಗತಿಯನ್ನು ಹೆಚ್ಚಿಸುವ ರಾಜ್ಯ ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದರು. ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ, ಸಿಎಂ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶದ ಆರೋಗ್ಯ ಮತ್ತು ನಗರ ಮೂಲಸೌಕರ್ಯ ಹೆಚ್ಚಿಸುವ ಗುರಿಯನ್ನು ಹೊಂದಿರುವಂತಹ ನಿರ್ಧಾರಗಳನ್ನು ಬಹಿರಂಗಪಡಿಸಿದರು.
ಪಿಪಿಪಿ ಮಾದರಿಯಡಿಯಲ್ಲಿ ಹತ್ರಾಸ್, ಬಾಗ್ಪತ್ ಮತ್ತು ಕಾಸ್ಗಂಜ್ನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದು, ಸಭೆಯ ಪ್ರಮುಖ ಅಂಶ ಆಗಿದೆ. ಜೊತೆಗೆ ಉತ್ತರ ಪ್ರದೇಶದ ಯುವಕರಿಗೆ ಉಚಿತ ಸ್ಮಾರ್ಟ್ ಫೋನ್ಗಳು ಮತ್ತು ಟ್ಯಾಬ್ಲೆಟ್ಗಳನ್ನು ಒದಗಿಸುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ, ಪ್ರಯಾಗರಾಜ್, ವಾರಾಣಸಿ ಮತ್ತು ಆಗ್ರಾ ಪುರಸಭೆಯ ನಿಗಮಗಳಿಗೆ ಪುರಸಭೆಯ ಬಾಂಡ್ಗಳನ್ನು ನೀಡುವ ನಿರ್ಧಾರವನ್ನ ಹೊರಹಾಕಿದರು.
ಲಕ್ನೋ ಮತ್ತು ಗಾಜಿಯಾಬಾದ್ನಲ್ಲಿ ಬಾಂಡ್ ವಿತರಣೆಗಳು ಯಶಸ್ವಿಯಾಗಿ ನಡೆದ ನಂತರ ಇದು ಬಂದಿದೆ. ಈ ಬಾಂಡ್ಗಳು ನಗರ ಮೂಲಸೌಕರ್ಯವನ್ನ ಹೆಚ್ಚಿಸಲು ಮತ್ತು ಈ ನಗರಗಳಲ್ಲಿ ಸುಸ್ಥಿರ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ಹಣವನ್ನು ಉತ್ಪಾದಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
ಏರೋಸ್ಪೇಸ್, ರಕ್ಷಣಾ ಮತ್ತು ಉದ್ಯೋಗ ನೀತಿ 2024 ಸೇರಿದಂತೆ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ಚರ್ಚೆಗಳು ನಡೆದಿವೆ ಎಂದು ಸಿಎಂ ಯೋಗಿ ಹಂಚಿಕೊಂಡರು.
ಆರಂಭದಲ್ಲಿ 2018ರಲ್ಲಿ ಪರಿಚಯಿಸಲಾದ ಈ ನೀತಿಯನ್ನ 5 ವರ್ಷಗಳ ಬಳಿಕ ವಿಕಸಿತ ಅಗತ್ಯಗಳಿಗೆ ಅನುಗುಣವಾಗಿ ಪರಿಷ್ಕರಿಸಲಾಗುತ್ತಿದೆ. ಮಿರ್ಜಾಪುರ ಮತ್ತು ಮೊರಾದಾಬಾದ್ನಲ್ಲಿ ಪ್ರಮುಖ 10,000 ಕೋಟಿ ರೂಪಾಯಿ ಹೂಡಿಕೆಯನ್ನ ಒತ್ತಿಹೇಳುತ್ತಾ ಅವರು ರಾಜ್ಯದಲ್ಲಿ ಎಫ್ಡಿಐ ಹೂಡಿಕೆಗಳ ಬಗ್ಗೆಯೂ ಮಾತನಾಡಿದರು.
-
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
CBSE 12ನೇ ತರಗತಿಯ ಜೀವಶಾಸ್ತ್ರ ಪ್ರಶ್ನೆಪತ್ರಿಕೆ ವಿಶ್ಲೇಷಣೆ: ತಜ್ಞರು ಮತ್ತು ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ಮಾಹಿತಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications