ಡಿಜೆ, ಕೆಜಿ ಹಳ್ಳಿ, ಶಿವಮೊಗ್ಗ-ಹುಬ್ಬಳ್ಳಿ ಆರೋಪಿಗಳು ಅಮಾಯಕರಾ..? ಸರ್ಕಾರದ ವಿರುದ್ದ ಆರಗ ಜ್ಞಾನೇಂದ್ರ ಹೇಳಿದ್ದೇನು?
ಶಿವಮೊಗ್ಗ, ಜುಲೈ 26: ಡಿಜೆಹಳ್ಳಿ, ಕೆಜಿಹಳ್ಳಿ ಗಂಟೆಗಟ್ಟಲೆ ಹೊತ್ತಿ ಉರಿದಿತ್ತು. ಪೋಲೀಸ್ ಸ್ಟೇಷನ್, ಶಾಸಕರ ಮನೆಗಳು ಹೊತ್ತಿ ಉರಿದವು. ಘಟನೆಗೆ ಕಾರಣರಾದವರನ್ನ ಅಮಾಯಕರು ಎನ್ನುತ್ತಿದ್ದಾರೆ. ಇವರನ್ನು ಅಮಾಯಕರು ಎನ್ನುವುದಾದರೆ ನಿಜವಾದ ಅಮಾಯಕರನ್ನು ಏನೆನ್ನಬೇಕು.? ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ತನ್ವೀರ್ ಶೇಠ್ ಗೃಹ ಸಚಿವ ಜಿ.ಪರಮೇಶ್ವರ್ ಗೆ ಪತ್ರ ಬರೆದು, ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ, ಶಿವಮೊಗ್ಗ, ಹುಬ್ಬಳಿ ಗಲಾಟೆ ಪ್ರಕರಣಗಳಲ್ಲಿ ಭಾಗಿಯಾದ ಯುವಕರ ಪ್ರಕರಣಗಳನ್ನ ವಾಪಸ್ ಪಡೆಯಲು ಪರಿಶೀಲಿಸುವಂತೆ ಪತ್ರ ಬರೆದಿದ್ದಾರೆ. ಗೃಹ ಸಚಿವರೂ ಸಹ ಪ್ರತಿಕ್ರಿಯಿಸಿ, ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ಕೊಡಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಒಂದು ಸಮುದಾಯವನ್ನು ಓಲೈಕೆ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಬಂದು ಇಂಥವರಿಗೆ ಪ್ರೇರಣೆ ನೀಡುವ ಕೆಲಸ ಮಾಡುತ್ತಿದೆ. ಮೊನ್ನೆ ಐದು ಜನರನ್ನು ಬಂಧಿಸುವಾಗ ಓರ್ವ ಆರೋಪಿ ಕಾಂಗ್ರೆಸ್ ಸರ್ಕಾರ ಬಂದಿದೆ ಹುಷಾರ್ ಎಂದು ಪೊಲೀಸರಿಗೆ ಧಮಕಿ ಹಾಕಿದ್ದಾನೆ. ಈ ಬಗ್ಗೆ ನನಗೆ ಮಾಹಿತಿ ಬಂದಿದೆ. ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಹಿಂದೆ ಶಾರಿಕ್ ಗೂ ಭಯೋತ್ಪಾದಕನಲ್ಲ ಎಂದಿದ್ದರು ಡಿ.ಕೆ.ಶಿವಕುಮಾರ್ ಈಗ ಬಂಧಿತರಾಗಿರುವವರನ್ನು ಭಯೋತ್ಪಾದಕರು ಎಂದು ಈಗಲೇ ಹೇಳಲು ಆಗುವುದಿಲ್ಲ ಎನ್ನುತ್ತಾರೆ. ಗ್ರನೇಡ್, ವಾಕಿಟಾಕಿ ಇಟ್ಟುಕೊಂಡವರು ಇವರ ಅಣ್ಣತಮ್ಮಂದಿರಾ ಎಂದು ಆರಗ ಜ್ಞಾನೇಂದ್ರ ಪ್ರಶ್ನಿಸಿದ್ದಾರೆ. ಪೊಲೀಸರು ಸರ್ಕಾರದ ಒತ್ತಡಕ್ಕೆ ಮಣಿದು ಇಂಥವರಿಗೆ ಸಹಕಾರ ನೀಡಿ ತಲೆತಗ್ಗಿಸಬೇಕಾಗುತ್ತದೆ.
ಮಂಗಳೂರಿನಲ್ಲಿ ಮೂರು ಹಿಂದು ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿ ಗಡಿಪಾರು ಮಾಡಲಾಗುತ್ತಿದೆ. ಹಿಂದೂಗಳ ಮೇಲೆ ಮಾತ್ರ ಕೇಸ್ ಏಕೆ. ಇನೊಂದು ಕೋಮಿನವರ ಮೇಲೆಯೂ ಕೇಸು ದಾಖಲಿಸಬೇಕಿತ್ತು. ಕಾಂಗ್ರೆಸ್ಸಿಗರು ಈಗಾಗಲೇ ವರ್ಗಾವಣೆ ಅಂಗಡಿ ಓಪನ್ ಮಾಡಿಕೊಂಡಿದ್ದಾರೆ. ಅವರ ಪಕ್ಷದ ಶಾಸಕರೇ ಆರೋಪ ಮಾಡಲಾರಂಭಿಸಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ನಾವು ಕೆಡುವ ಬೇಕಿಲ್ಲ. ಈಗ ನಡೆಯುತ್ತಿರುವ ಘಟನೆಗಳನ್ನು ನೋಡಿದರೇ ಕಾಂಗ್ರೆಸ್ಸಿಗರೇ ಕಾಂಗ್ರೆಸನ್ನು ಕೆಡವಲಿದ್ದಾರೆ ಎಂದು ಆರಗ ಜ್ಞಾನೇಂದ್ರ ಕಿಡಿಕಾರಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications