ಬಿಜೆಪಿ ಆಡಳಿತದಲ್ಲಿ ಬೆಂಗಳೂರಿನ ಕಥೆ ಗೋವಿಂದ ಗೋವಿಂದ ಎಂದಿದ್ದೇಕೆ ಡಿಕೆಶಿ?
ಬೆಂಗಳೂರು, ಸೆಪ್ಟೆಂಬರ್ 03: ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ, ಶಾಸಕರಾಗಿ ಇರುವುದಕ್ಕೆ ಅರ್ಹರಲ್ಲ. ಅದೇ ರೀತಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವುದಕ್ಕೆ ಅರ್ಹವಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಷ್ಟ ಹೇಳಿಕೊಂಡ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಲಿಂಬಾವಳಿ ಅವರು ಶಾಸಕರಾಗಿ ಮುಂದುವರಿಯಲು ಅರ್ಹರಲ್ಲ ಎಂದರು.
ಬೆಂಗಳೂರು ಹೊರವಲಯದ ಜನರು ತಮ್ಮ ಕ್ಷೇತ್ರದಲ್ಲಿ ಮಳೆಯಿಂದ ಆಗಿರುವ ಅನಾಹುತ, ನಷ್ಟದ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ಯಾವುದೇ ಪಕ್ಷದವರಾಗಲಿ ಜನ ಆ ಕ್ಷೇತ್ರದ ಶಾಸಕರ ಬಳಿ ಹೋಗಿ ತಮಗಾಗಿರುವ ಅನ್ಯಾಯವನ್ನು ಕೇಳುತ್ತಾರೆ. ಮಹಿಳೆಯರು ಸಮಸ್ಯೆ ಹೇಳಿಕೊಳ್ಳಲು ಬಂದಾಗ ಅದನ್ನು ಕೇಳದಿರುವುದು ಸಮಂಜಸವಲ್ಲ ಎಂದು ಹೇಳಿದರು.

ರಾಮನಗರ ಭೇಟಿ ಬಗ್ಗೆ ಉಲ್ಲೇಖಿಸಿದ ಡಿಕೆಶಿ:
ಮಳೆಯಿಂದಾಗಿ ರಾಮನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಾಗ ಜನರು ಅವರ ಸಮಸ್ಯೆ, ದುಃಖವನ್ನು ಹೇಳಿಕೊಂಡರು. ಜನರ ಕಷ್ಟ ಕೇಳುವ ತಾಳ್ಮೆ ಇಲ್ಲವಾದರೆ ಅರವಿಂದ ಲಿಂಬಾವಳಿ ಶಾಸಕರಾಗಿರಲು ಅರ್ಹರಲ್ಲ ಎಂದು ಹೇಳಿದರು.
ಉದ್ಯೋಗ ಸೃಷ್ಟಿ ಮೂಲಕ ಸರ್ಕಾರಕ್ಕೆ ನೆರವು ನೀಡುತ್ತಿರುವ ಕಂಪನಿಗಳು ಕೂಡ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈ ಬಗ್ಗೆ ಹೊರವಲಯ ರಿಂಗ್ ರೋಡ್ ಕಂಪನಿಗಳ ಸಂಘದವರು ಸರ್ಕಾರಕ್ಕೆ ಪತ್ರ ಬರೆದು ತಮಗಾದ ತೊಂದರೆ, ನಷ್ಟದ ಬಗ್ಗೆ ಹೇಳಿಕೊಂಡಿದ್ದಾರೆ. ಇದೇ ರೀತಿ ರಾಜ್ಯದ ಬಹುತೇಕ ಭಾಗಗಳಲ್ಲಿ ಆಗಿದೆ. ರಾಮನಗರದ ಉಸ್ತುವಾರಿ ಸಚಿವರು ಜಿಲ್ಲೆ ಕ್ಲೀನ್ ಮಾಡುವುದಾಗಿ ಹೇಳಿದ್ದು, ಅವರು ದಯವಿಟ್ಟು ಕ್ಲೀನ್ ಮಾಡಲಿ ಎಂದರು ತಿಳಿಸಿದ್ದಾರೆ.
ಬೆಂಗಳೂರಿನ ಕಥೆ ಗೋವಿಂದ ಗೋವಿಂದ:
ಬೆಂಗಳೂರಿನ ಬ್ರ್ಯಾಂಡ್ ಹಾಳಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಬೆಂಗಳೂರಿಗೆ ತಂದುಕೊಟ್ಟಿದ್ದ ಘನತೆಯನ್ನು ಈ ಸರ್ಕಾರ ಹಾಳುಮಾಡಿದೆ. ಬೆಂಗಳೂರು ಸ್ಥಿತಿ ಗೋವಿಂದಾ ಗೋವಿಂದಾ ಗೋವಿಂದ ಎನ್ನುವಂತಾಗಿದೆ ಎಂದು ಹೇಳಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications