ಎಫ್ಐಆರ್ ರದ್ದು ಕೋರಿ ಕೋರ್ಟ್ ಮೊರೆ ಹೋದ ಅರ್ಜುನ್ ಸರ್ಜಾ
ಬೆಂಗಳೂರು, ಅಕ್ಟೋಬರ್ 30: ತಮ್ಮ ವಿರುದ್ಧ ನಟಿ ಶ್ರುತಿ ಹರಿಹರನ್ ದಾಖಲಿಸಿರುವ ಲೈಂಗಿಕ ಕಿರುಕುಳದ ಆರೋಪಕ್ಕೆ ಹೇರಲಾರಿಗಿರುವ ಎಫ್ಐಆರ್ ಅನ್ನು ರದ್ದು ಮಾಡಬೇಕು ಎಂದು ನಟ ಅರ್ಜುನ್ ಸರ್ಜಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ನಟಿ ಶೃತಿ ಹರಿಹರನ್ ಅವರು ಮೊದಲಿಗೆ ಸಾಮಾಜಿಕ ಜಾಲತಾಣದಲ್ಲಿ #ಮಿಟೂ ಅಭಿಯಾನದಡಿ ಆರೋಪ ಮಾಡಿದ್ದರು. ಆ ನಂತರ ಠಾಣೆಯಲ್ಲಿ ದೂರು ಸಹ ನೀಡಿದ್ದರು. ಅದರಂತೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಹೈಕೋರ್ಟ್ ಮೊರೆ ಹೋಗಿರುವ ಅರ್ಜುನ್ ಸರ್ಜಾ, ಶ್ರುತಿ ಅವರು ತಮ್ಮ ವಿರುದ್ಧ ಫೇಸ್ಬುಕ್ನಲ್ಲಿ ಬರೆದುಕೊಂಡಿರುವುದಕ್ಕೂ, ಠಾಣೆಯಲ್ಲಿ ನೀಡಿದ ದೂರಿಗೂ ಬಹಳ ಅಂತರವಿದೆ ಅಲ್ಲದೆ ದೂರು ಸುಳ್ಳುಗಳಿಂದ ತುಂಬಿದೆ ಹಾಗಾಗಿ ಎಫ್ಐಆರ್ ಅನ್ನು ರದ್ದು ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಶ್ರುತಿ ಮಾಡಿರುವ ಆರೋಪಗಳೇನು?
ಪೊಲೀಸರಿಗೆ ಶ್ರುತಿ ಹರಿಹರನ್ ನೀಡಿರುವ ದೂರಿನಲ್ಲಿ ಹಲವು ಆರೋಪಗಳನ್ನು ಸರ್ಜಾ ಮೇಲೆ ಮಾಡಿದ್ದಾರೆ. ದೇವನಹಳ್ಳಿ ಸಿಗ್ನಲ್ ಬಳಿ ತಮ್ಮನ್ನು ಏಕಾಂತ ಸ್ಥಳಕ್ಕೆ ಕರೆದರು ಎಂದು ಹಾಗೂ ಯುಬಿಸಿಟಿಯಲ್ಲಿ ತಮ್ಮನ್ನು ವಿನಾ ಕಾರಣ ತಬ್ಬಿಕೊಂಡು ಕೆಟ್ಟದಾಗಿ ವರ್ತಿಸಿದರೆಂದು ಹಾಗೂ ತಮಗೆ ಬೆದರಿಕೆ ಹಾಕಿದರೆಂದು ಶ್ರುತಿ ನೀಡಿರುವ ದೂರಿನಲ್ಲಿ ಹೇಳಿದ್ದಾರೆ.

ಮಹಜರ್ ಮಾಡಲಾಗಿದೆ
ಶ್ರುತಿ ಅವರು ನೀಡಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶ್ರುತಿ ಅವರು ದೂರಿನಲ್ಲಿ ಹೇಳಿದ ಸ್ಥಳಗಳಿಗೆ ಅವರನ್ನು ಕರೆದುಕೊಂಡು ಹೋಗಿ ಮಹಜರ್ ಮಾಡಿದ್ದಾರೆ. ಅಲ್ಲದೆ ಶ್ರುತಿ ಅವರು ಉಲ್ಲೇಖಿಸಿರುವ ಸಾಕ್ಷಿಗಳಲ್ಲಿ ಕೆಲವರನ್ನು ಕರೆದು ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ.

ಮಾನನಷ್ಟ ಮೊಕದ್ದಮೆ
ಶ್ರುತಿ ಅವರ ಮೇಲೆ ಅರ್ಜುನ್ ಸರ್ಜಾ ಅವರು ಸಹ ಐದು ಕೋಟಿಯ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಶ್ರುತಿ ಅವರು ಸಮಯ ಕೇಳಿದ ಕಾರಣ ವಿಚಾರಣೆ ಮುಂದಕ್ಕೆ ಹೋಗಿದೆ.

ಶ್ರುತಿಗೆ ಬೆದರಿಕೆ ಕರೆಗಳು
ಅರ್ಜುನ್ ಸರ್ಕಾ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಶ್ರುತಿ ಅವರಿಗೆ ಹಲವು ಬೆದರಿಕೆ ಕರೆಗಳು ಬಂದಿವೆಯಂತೆ. ಅಲ್ಲದೆ ಅವರ ಚಾರಿತ್ರ್ಯ ಹಾನಿ ಮಾಡುವ ಕಾರ್ಯವೂ ಸಾಮಾಜಿಕ ಜಾಲತಾಣದಲ್ಲಿ ನಡೆದಿವೆಯಂತೆ ಹೀಗೆಂದು ಅವರ ವಕೀಲರು ಹೇಳಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications