ನಾನು ತಪ್ಪು ಮಾಡಿಲ್ಲ, ಸಂಧಾನಕ್ಕೆ ನಾನು ಒಪ್ಪಲ್ಲ: ಅರ್ಜುನ್ ಸರ್ಜಾ
ಬೆಂಗಳೂರು, ಅಕ್ಟೋಬರ್ 25: ನಾನು ತಪ್ಪು ಮಾಡಿಲ್ಲ ಹಾಗಾಗಿ ಸಂಧಾನಕ್ಕೆ ನಾನು ಒಪ್ಪುವುದಿಲ್ಲ. ಸಂಧಾನಕ್ಕೆ ಒಪ್ಪಿದರೆ ನಾನು ತಪ್ಪು ಮಾಡಿದಂತಾಗುತ್ತದೆ ಎಂದು ಹಿರಿಯ ನಟ ಅರ್ಜುನ್ ಸರ್ಜಾ ಹೇಳಿದರು.
ನಟಿ ಶ್ರುತಿ ಹರಿಹರನ್ ಅವರು ಅರ್ಜುನ್ ಸರ್ಜಾ ಅವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿ ವಿವಾದ ಎದ್ದಿರುವ ಕಾರಣ ಇಂದು ಕನ್ನಡ ಫಿಲ್ಮ್ ಚೇಂಬರ್ನಲ್ಲಿ ಇಬ್ಬರಿಗೂ ಅಂಬರೀಶ್ ಹಾಗೂ ಇತರ ಸಿನಿ ಮುಖ್ಯಸ್ಥರ ಮಧ್ಯಸ್ಥಿಕೆಯಲ್ಲಿ ಸಂಧಾನ ಸಭೆ ಏರ್ಪಡಿಸಲಾಗಿತ್ತು.
ಅಂಬರೀಶ್ , ಚಿನ್ನೇಗೌಡ, ಮುನಿರತ್ನ ಮುಂತಾದವರು ಕರೆದಿದ್ದ ಕಾರಣಕ್ಕೆ ನಾನು ಬಂದಿದ್ದೇನೆ ಅಷ್ಟೆ ಹೊರತು ಸಂಧಾನದ ಉದ್ದೇಶ ನನಗಿಲ್ಲ. ನ್ಯಾಯಾಲಯದಲ್ಲೇ ನನಗೆ ನ್ಯಾಯ ದೊರೆಯಲಿದೆ ಎಂದು ಅರ್ಜುನ್ ವಿಶ್ವಾಸ ವ್ಯಕ್ತಪಡಿಸಿದರು.

ಈ ಪ್ರಕರಣದಿಂದ ನನಗೆ ಮಾತ್ರವಲ್ಲ, ನನ್ನ ಕುಟುಂಬಕ್ಕೆ, ಸ್ನೇಹಿತರಿಗೆ, ಹಿತೈಶಿಗಳಿಗೆ, ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರದಲ್ಲಿನ ನನ್ನ ಅಭಿಮಾನಿಗಳ ಮನಸ್ಸಿಗೆ ನೋವಾಗಿದೆ ಹಾಗಾಗಿ ನಾನು ಕಾನೂನು ಹೋರಾಟ ಮಾಡಿಯೇ ತೀರುತ್ತೇನೆ ಎಂದು ಸರ್ಜಾ ಹೇಳಿದರು.
ಈ ಪ್ರಕರಣ ಕನ್ನಡ ಸಿನಿರಂಗದಲ್ಲಿ ಉದಾಹರಣೆಯಾಗಿ ನಿಲ್ಲಬೇಕು. ಹೀಗೆ ಸುಖಾ ಸುಮ್ಮನೆ ಸುಳ್ಳು ಆರೋಪ ಮಾಡುವವರಿಗೆ ಸೋಲಾಗುತ್ತದೆ ಎಂಬುದು ಎಲ್ಲರಿಗೂ ಗೊತ್ತಾಗಬೇಕು ಹಾಗಾಗಿ ನಾನು ಕಾನೂನು ಹೋರಾಟ ಮಾಡಿಯೇ ಸಿದ್ಧ ಎಂದು ಅವರು ಪುನರ್ಉಚ್ಚರಿಸಿದರು.
ಮಿಟೂ ಅಭಿಯಾನ ಉತ್ತಮವಾದುದೆ ಆದರೆ ಅದರ ದುರುಪಯೋಗ ಮಾಡಿಕೊಳ್ಳುವುದು ಸರಿಯಲ್ಲ. ಮಿಟೂ ಅಭಿಯಾನಕ್ಕೆ ಬೆಂಬಲ ಬೇಕು ಎಂದಿದ್ದರೆ ನಾನೂ ಕೊಡುತ್ತಿದ್ದೆ ಆದರೆ ನನ್ನನ್ನೇ ಸಂತ್ರಸ್ಥನನ್ನಾಗಿಸಲು ಯತ್ನಿಸಿರುವುದು ನನಗೆ ಆತಂಕ ಉಂಟುಮಾಡಿದೆ ಎಂದು ಅರ್ಜುನ್ ಸರ್ಜಾ ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications