ಬಿಎಸ್ವೈ, ಎಚ್ಡಿಕೆ ಇಬ್ಬರಿಗೂ ದೇವರು ಬಲಗಡೆಯಿಂದ ಹೂವು ಕೊಟ್ಟಾಗ!
ಬೆಂಗಳೂರು, ಜುಲೈ 22: ಬಿಜೆಪಿಯವರಿಗೆ ವಿಶ್ವಾಸಮತ ಅದ್ಯಾವಾಗ ಮತಕ್ಕೆ ಹೋಗುತ್ತೆ ಎನ್ನುವ ಅವಸರವಾದರೆ, ಮೈತ್ರಿ ಪಕ್ಷದವರಿಗೆ ಇವತ್ತಿನ ಸದನದ ಸಮಯವನ್ನು ಹೇಗೆ ಮುಗಿಸುವುದು ಎನ್ನುವ ಚಿಂತೆ.
ಅದಕ್ಕಾಗಿಯೇ, ಸಚಿವ ಕೃಷ್ಣ ಭೈರೇಗೌಡರಿಂದ ಸುದೀರ್ಘ ಭಾಷಣದ ನಂತರ ಈಗ, ಅರಕಲಗೂಡು ಜೆಡಿಎಸ್ ಶಾಸಕ ಎ ಟಿ ರಾಮಸ್ವಾಮಿಯವರ ಸರದಿ. ತಮ್ಮ ಭಾಷಣದಲ್ಲಿ ವ್ಯಂಗ್ಯವಾಗಿ ದೇವರು ಹೂವು ಕೊಟ್ಟಿದ್ದನ್ನು ರಾಮಸ್ವಾಮಿ ಪ್ರಸ್ತಾವಿಸಿದರು.
ಮಾನ್ಯ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಲೆಂದು ಬಿಜೆಪಿಯವರು ದೇವಸ್ಥಾನಕ್ಕೆ ಹೋಗುತ್ತಾರೆ. ಅತ್ತ, ಕುಮಾರಸ್ವಾಮಿಯವರು ಸಿಎಂ ಆಗಿ ಮುಂದುವರಿಯಬೇಕೆಂದು ಜೆಡಿಎಸ್ಸಿನವರೂ ದೇವಾಲಯಕ್ಕೆ ಹೋಗುತ್ತಾರೆ. ಇಬ್ಬರಿಗೂ, ಅಸ್ತು ಅಂದು, ದೇವರು ಬಲಗಡೆಯಿಂದ ಹೂವು ಕೊಡುತ್ತಾನೆ.

ಇದೇ ನೋಡಿ, ಜನರನ್ನು ಮರಳು ಮಾಡುವ ಕಲೆ. ಅಲ್ಲ ಸ್ವಾಮೀ.. ಬಲಗಡೆಯಲ್ಲಿ ಹೂವು ಜಾಸ್ತಿಯಿಟ್ಟರೆ, ಅದು ಭಾರಕ್ಕೆ ಕೆಳಗೆ ಬೀಳದೇ ಇರುತ್ತಾ? ನಾನು ಆಸ್ತಿಕನೂ ಅಲ್ಲ, ನಾಸ್ತಿಕನೂ ಅಲ್ಲ. ಏನ್ ಸ್ವಾಮಿ ಬೊಮ್ಮಾಯಿ ಸಾಹೇಬ್ರೇ ಏನು ಹೇಳುತ್ತೀರಿ, ನಿಮ್ಮಲ್ಲಿ ಕೂಡಾ ಜೆಡಿಎಸ್ ರಕ್ತವಿದೆ ಎಂದು ಎ ಟಿ ರಾಮಸ್ವಾಮಿ ಹೇಳಿದರು.
ಅಷ್ಟರಲ್ಲಿ ಮಧ್ಯಪ್ರವೇಶಿಸಿದ ಸ್ಪೀಕರ್ ರಮೇಶ್ ಕುಮಾರ್, ನಾನೂ ದೇವಸ್ಥಾನಕ್ಕೆ ಹೋಗಿದ್ದೆ. ಆದರೆ, ನನಗೆ ದೇವರು ಸೆಂಟ್ರಲ್ ನಲ್ಲಿ ಹೂವು ಕೊಟ್ಟ ಎಂದಾಗ ಸದನ ನಗೆಗಡಲಲ್ಲಿ ತೇಲಿತು. ಮುಂದುವರಿಯುತ್ತಾ, ಇಬ್ಬರಿಗೂ ದೇವರು ಬಲಗಡೆಯಿಂದ ಹೂವು ಕೊಟ್ಟಿದ್ದಾನೆ, ದೇವರನ್ನೇ ಸಿಎಂ ಮಾಡಿಬಿಡೋಣ ಎಂದು ಸ್ಪೀಕರ್ ಹೇಳಿದರು.
ಸುಪ್ರೀಂಕೋರ್ಟ್ ಆದೇಶದಂತೆ ಅತೃಪ್ತ ಶಾಸಕರು ಬೆಂಗಳೂರಿಗೆ ಸ್ಪೀಕರ್ ಅವರನ್ನು ಭೇಟಿ ಮಾಡಲು ಬಂದಾಗ, ವಿಮಾನ ನಿಲ್ದಾಣದಿಂದ ಝೀರೋ ಟ್ರಾಫಿಕ್ ನಲ್ಲಿ ಅವರನ್ನು ಕರೆತರುವ ಅವಶ್ಯಕತೆ ಏನಿತ್ತು ಎಂದು ಶಾಸಕ ಎ ಟಿ ರಾಮಸ್ವಾಮಿ, ಗೃಹಸಚಿವ ಎಂ ಬಿ ಪಾಟೀಲರನ್ನು ಪ್ರಶ್ನಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications