ಅರ್ಕಾವತಿ ಹಗರಣ : ಎಚ್ಡಿಕೆಯಿಂದ 490 ಪುಟದ ಪುಸ್ತಕ ಬಿಡುಗಡೆ
ಬೆಂಗಳೂರು, ಫೆ.6 : ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣದ ವಿರುದ್ಧ ಜೆಡಿಎಸ್ ಹೋರಾಟ ಆರಂಭಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ 'ಅರ್ಕಾವತಿ ಕರ್ಮಕಾಂಡ' ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಎಚ್ಡಿ ಕುಮಾರಸ್ವಾಮಿ 490 ಪುಟಗಳ 'ಅರ್ಕಾವತಿ ಕರ್ಮಕಾಂಡ' ಪುಸ್ತಕ ಬಿಡುಗಡೆ ಮಾಡಿದ್ದಾರೆ. 2002-03ರಿಂದ 2014ರವರೆಗೆ ನಡೆದಿರುವ ಎಲ್ಲ ಘಟನಾವಳಿಗಳು, 66 ಪ್ರಮುಖ ದಾಖಲೆ ಇರುವ ಈ ಪುಸ್ತಕ ಇದಾಗಿದೆ. [ಅರ್ಕಾವತಿ ಬಡಾವಣೆ ಫೈಟ್ ಯಾರು, ಏನು ಹೇಳಿದರು?]

ಪುಸ್ತಕದ ಪ್ರತಿಯನ್ನು ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೂ ಕುಮಾರಸ್ವಾಮಿ ಸಲ್ಲಿಸಿದ್ದಾರೆ. ಪುಸ್ತಕ ಬಿಡುಗಡೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಕೆಲವರಿಗೆ ಸಿಬಿಐ ಮೇಲೆ ನಂಬಿಕೆಯಿಲ್ಲ. ಇನ್ನು ಕೆಲವರಿಗೆ ಆಯೋಗದ ಮೇಲೂ ನಂಬಿಕೆಯಿಲ್ಲ. ಆದ್ದರಿಂದ ನಾನು ಸಂಗ್ರಹಿಸಿದ ದಾಖಲೆಗಳನ್ನು ಸದನದ ಮುಂದಿಡುತ್ತೇನೆ ಎಂದರು. [ಸಚಿವ ಕೆಜೆ ಜಾರ್ಜ್ ಹೇಳಿದ ಹುಲಿ, ಇಲಿ ಕಥೆ!]
ಸರ್ಕಾರ ಸದನದಲ್ಲಿ ಹಗರಣದ ಬಗ್ಗೆ ದಾಖಲೆ ಇಟ್ಟು ಚರ್ಚೆ ಮಾಡಲಿ. ಅಂತಿಮ ತೀರ್ಮಾನವನ್ನು ಜನತಾ ನ್ಯಾಯಾಲಯ ಮುಂದೆ ಇಡೋಣ ಎಂದು ಹೇಳಿದರು. ಕೆಂಪಣ್ಣ ಆಯೋಗದ ವಿಚಾರದಲ್ಲಿ ಸರ್ಕಾರದ ನಡವಳಿಕೆ ನೋಡುತ್ತಿದ್ದರೆ ಕಾಟಾಚಾರಕ್ಕೆ ಆಯೋಗ ಮಾಡಿದಂತಿದೆ ಎಂದು ಕುಮಾರಸ್ವಾಮಿ ದೂರಿದರು.
ಕೆಲವೇ ದಿನಗಳ ಕಲಾಪ ಬಾಕಿ ಇದೆ. ಸಮಯ ಮುಂದೂಡಿ ಲಕ್ಷಾಂತರ ರೂ. ಖರ್ಚು ಮಾಡುವ ಬದಲು ಸದನದಲ್ಲೇ ಚರ್ಚೆ ಮಾಡೋಣ ಸಿಎಂ, ಸರ್ಕಾರಕ್ಕೆ ಧೈರ್ಯವಿದ್ದರೆ ಪುಸ್ತಕದಲ್ಲಿರುವ ದಾಖಲೆಗಳೊಂದಿಗೆ ಚರ್ಚಿಸಲಿ ಎಂದು ಸವಾಲು ಹಾಕಿದರು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications