'ಕುಮಾರಸ್ವಾಮಿ ಪುಸ್ತಕ ಅವರದ್ದೇ ಕರ್ಮಕಾಂಡ'
ಬೆಂಗಳೂರು, ಫೆ.7 : ಅರ್ಕಾವತಿ ಬಡಾವಣೆ ಡಿನೋಟಿಫೈ ಪ್ರಕರಣದ ಕುರಿತು ಮತ್ತೊಂದು ಸುತ್ತಿನ ವಾಕ್ಸಮರ ಆರಂಭವಾಗಿದೆ. 'ಕುಮಾರಸ್ವಾಮಿ ಅವರು ಹಗರಣದ ಕುರಿತು ಬರೆದಿರುವ ಪುಸ್ತಕ ಅವರದ್ದೇ ಕರ್ಮಕಾಂಡ' ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಶನಿವಾರ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 'ನನ್ನ ಅವಧಿಯಲ್ಲಿ ಒಂದೇ ಒಂದು ಗುಂಟೆ ಜಮೀನನ್ನು ಕಾನೂನು ಬಾಹಿರವಾಗಿ ಡಿನೋಟಿಫೈ ಮಾಡಿಲ್ಲ, ಎಚ್.ಡಿ.ಕುಮಾರಸ್ವಾಮಿ ಬಿಡುಗಡೆ ಮಾಡಿರುವ 490 ಪುಟಗಳ ದಾಖಲೆ ಪುಸ್ತಕದಲ್ಲಿ ಹೊಸದೇನೂ ಇಲ್ಲ' ಎಂದು ಹೇಳಿದರು.

'ಕುಮಾರಸ್ವಾಮಿ ಅವರಿಗೆ ರಾಜಕೀಯವಾಗಿ ಪ್ರಚಾರ ಬೇಕಾಗಿದೆ. ಆದ್ದರಿಂದ ಪುಸ್ತಕನ್ನು ಬಿಡುಗಡೆ ಮಾಡಿದ್ದಾರೆ. 2006 ರಿಂದ 2013ರ ವರೆಗೆ ನಡೆದ ಎಲ್ಲಾ ಅಕ್ರಮಗಳನ್ನು ಕುಮಾರಸ್ವಾಮಿ ನನ್ನ ತಲೆಗೆ ಕಟ್ಟಲು ಪ್ರಯತ್ನ ನಡೆಸುತ್ತಿದ್ದಾರೆ' ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. [ಅರ್ಕಾವತಿ ಕರ್ಮಕಾಂಡ : ಕುಮಾರಸ್ವಾಮಿ ಪುಸ್ತಕದಲ್ಲೇನಿದೆ?]
'ಕುಮಾರಸ್ವಾಮಿ ಅವರು ತಾವು ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ನಡೆದಿರುವ ಕರ್ಮಕಾಂಡವನ್ನೇ ರಾಜ್ಯದ ಜನರ ಮುಂದಿಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು. ಕುಮಾರಸ್ವಾಮಿ, ಯಡಿಯೂರಪ್ಪ, ಸದಾನಂದಗೌಡ ಹಾಗೂ ಜಗದೀಶ್ ಶೆಟ್ಟರ್ ಕಾಲದಲ್ಲಿ ನಡೆದಿರುವ ಸಭೆಯ ನಡಾವಳಿಗಳನ್ನು ದಾಖಲೆ ಎಂದು ಕುಮಾರಸ್ವಾಮಿ' ಹೇಳುತ್ತಿದ್ದಾರೆ ಎಂದರು. [ಅರ್ಕಾವತಿ ಬಡಾವಣೆ ವಿವಾದ ಏಕೆ? ಏನು?]
'ಅರ್ಕಾವತಿ ಬಡಾವಣೆಯಲ್ಲಿ ಕಾನೂನು ಬಾಹಿರವಾಗಿ ಬೇರೆಯವರಿಗೆ ನೆರವಾಗುವಂತೆ ಒಂದಿಚೂ ಭೂಮಿಯನ್ನು ಡಿನೋಟಿಫೈ ಮಾಡಿಲ್ಲ. ನ್ಯಾಯಮೂರ್ತಿ ಕೆಂಪಣ್ಣ ಅವರ ಆಯೋಗದ ತನಿಖೆ ನಂತರ ಸತ್ಯಾಂಶ ಹೊರಬರಲಿದೆ. ಕುಮಾರಸ್ವಾಮಿ ಅವರು ಆಯೋಗಕ್ಕೆ ದಾಖಲೆಗಳನ್ನು ಸಲ್ಲಿಕೆ ಮಾಡಲಿ' ಎಂದು ಸಿಎಂ ಸಲಹೆ ನೀಡಿದರು.
ಶುಕ್ರವಾರ 'ಅರ್ಕಾವತಿ ಕರ್ಮಕಾಂಡ-ಸತ್ಯ ಮಿಥ್ಯಗಳ ಇಣುಕು ನೋಟ' ಎಂಬ 490 ಪುಟಗಳ ಪುಸ್ತಕವನ್ನು ಜೆಡಿಎಸ್ ಶಾಸಕಾಂಗ ನಾಯಕ ಎಚ್.ಡಿ.ಕುಮಾರಸ್ವಾಮಿ ಬಿಡುಗಡೆ ಮಾಡಿದ್ದರು ಮತ್ತು ಒಂದಿಚೂ ಡಿನೋಟಿಫೈ ಮಾಡಿಲ್ಲ ಎಂದು ಹೇಳುವ ಮುಖ್ಯಮಂತ್ರಿಗಳು ಸದನದ ಮುಂದೆ ಎಲ್ಲಾ ದಾಖಲೆಗಳನ್ನು ಮಂಡಿಸಲಿ ಎಂದು ಸವಾಲು ಹಾಕಿದ್ದರು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications