ದಿಗ್ವಿಜಯ ಸುದ್ದಿವಾಹಿನಿ ಅಧಿಕೃತವಾಗಿ ಅರ್ನಬ್ ಗೋಸ್ವಾಮಿಯ ರಿಪಬ್ಲಿಕ್ ತೆಕ್ಕೆಗೆ
ಬೆಂಗಳೂರು, ಸೆಪ್ಟೆಂಬರ್01: ವಿಆರ್ಎಲ್ ಸಮೂಹದ 'ದಿಗ್ವಿಜಯ' ಸುದ್ದಿವಾಹಿನಿ ಅಧಿಕೃತವಾಗಿ ರಿಪಬ್ಲಿಕ್ ತೆಕ್ಕೆಗೆ ಸೇರಿದೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಅರ್ನಬ್ ಗೋಸ್ವಾಮಿ ಶುಕ್ರವಾರ ಸಂಜೆ ಸುದ್ದಿಗೋಷ್ಠಿ ನಡೆಸುವ ಮೂಲಕ ಬಹಿರಂಗ ಪಡಿಸಲಿದ್ದಾರೆ. ವಿಜಯ್ ಸಂಕೇಶ್ವರ್ ಮಾಲೀಕತ್ವದ ವಿಆರ್ಎಲ್ ಸಂಸ್ಥೆ 2017ರಲ್ಲಿ ದಿಗ್ವಿಜಯ ಟಿವಿ ಚಾನೆಲ್ ಅನ್ನು ಆರಂಭಿಸಿತ್ತು. ಆದರೀಗ ಈ ಸಂಸ್ಥೆಯನ್ನು ರಾಷ್ಟ್ರಮಟ್ಟದಲ್ಲಿ ಸತತ ಐದು ವರ್ಷಗಳಿಂದ ನಂಬರ್ 1 ಸ್ಥಾನದಲ್ಲಿರುವ ರಿಪಬ್ಲಿಕ್ ಚಾನಲ್ನೊಂದಿಗೆ ವಿಲೀನಗೊಳಿಸಲಾಗಿದೆ.

ಮುಂದಿನ ಕೆಲ ತಿಂಗಳ ಕಾಲ 'ದಿಗ್ವಿಜಯ' ಎನ್ನುವ ಹೆಸರಿನಲ್ಲಿಯೇ ಸುದ್ದಿವಾಹಿನಿ ಮುಂದುವರಿಯಲಿದ್ದು,ಆದಾದ ಬಳಿಕ 'ರಿಪಬ್ಲಿಕ್ ಕನ್ನಡ'ಎನ್ನುವ ಹೆಸರಿನಲ್ಲಿ ಕಾರ್ಯಚರಣೆ ನಡೆಸುವುದು ಎಂದು ತಿಳಿದು ಬಂದಿದೆ.
'ಇಂಡಿಯಾ ವಾಂಟ್ಸ್ ಟು ನೋ' ಎನ್ನುವ ಕಾರ್ಯಕ್ರಮದ ಮೂಲಕ ದೇಶಾದ್ಯಂತ ಭಾರಿ ಜನಪ್ರಿಯತೆಗಳಿಸಿರುವ ಅರ್ನಬ್ ಗೋಸ್ವಾಮಿ, 2017ರಲ್ಲಿ ತಮ್ಮದೇ ರಿಪಬ್ಲಿಕ್ ಟಿವಿಯನ್ನು ಆರಂಭಿಸಿದ್ದಾರೆ. ಆರ೦ಭಗೊಂಡ ಮೊದಲ ವಾರದಿಂದಲೇ ಟಿಆರ್ಪಿಯಲ್ಲಿ ಮೊದಲ ಸ್ಥಾನವನ್ನು ರಿಪಬ್ಲಿಕ್ ಚಾನೆಲ್ ಕಾಯ್ದುಕೊಂಡಿದೆ. ಈಗಾಗಲೇ ರಿಪಬ್ಲಿಕ್ ಭಾರತ್, ರಿಪಬ್ಲಿಕ್ ವರ್ಲ್, ಚಾನೆಲ್ ಮೂಲಕ ಇಂಗ್ಲಿಷ್, ಹಿಂದಿ ಹಾಗೂ ಬಂಗಾಳಿ ಭಾಷೆಯಲ್ಲಿ ವಾಹಿನಿಗಳು ಕಾರ್ಯನಿರ್ವಹಿಸುತ್ತಿವೆ. ಇದೀಗ ಕನ್ನಡದಲ್ಲಿಯೂ ಅರ್ನಬ್ ಗೋಸ್ವಾಮಿ ಸುದ್ದಿ ವಾಹಿನಿಯನ್ನ ಆರಂಭಿಸಲಿದ್ದಾರೆ.

ಇನ್ನೂ ದಿಗ್ವಿಜಯ ಸುದ್ದಿವಾಹಿನಿಯ ಕುರಿತು ಈಗಾಗಲೇ ಕಳೆದ ವಾರವೇ ಮಾಲೀಕತ್ವ ಹಸ್ತಾಂತರ ಪ್ರಕ್ರಿಯೆ ಮುಗಿದಿದೆ. ಇದೀಗ ಶುಕ್ರವಾರ ಸಂಜೆ ಅರ್ನಬ್ ಗೋಸ್ವಾಮಿ ಅವರು ದಿಗ್ವಿಜಯ ವಾಹಿನಿಯ ಸ್ಟುಡಿಯೋದಿಂದಲೇ ರಿಪಬ್ಲಿಕ್ ಟಿವಿಯ ರಾತ್ರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಸುದ್ದಿ ವಾಹಿನಿಯ ಮಾಲೀಕತ್ವವನ್ನು ಸಂಕೇಶ್ವರ್ ಅವರು ಅರ್ನಬ್ ಗೋಸ್ವಾಮಿ ಅವರಿಗೆ ಹಸ್ತಾಂತರಿಸಿದ್ದಾರೆ. ಆದರೆ ಕೆಲ ತಾಂತ್ರಿಕ ಸಮಸ್ಯೆಯಿಂದಾಗಿ ಕೂಡಲೇ ಸಂಸ್ಥೆಯ ಹೆಸರನ್ನು ಬದಲಾವಣೆ ಮಾಡಲು ಹಲವು ದಿನಗಳು ಬೇಕಾಗಬಹುದು ಎಂದು ಹೇಳಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications