370 ವಿಧಿ ರದ್ದು: ಮೋದಿ ವಿರುದ್ದ ಸಿದ್ದರಾಮಯ್ಯ ಒಂದರ ಮೇಲೊಂದು ಟ್ವೀಟ್ ಪ್ರಹಾರ
Recommended Video
ಬೆಂಗಳೂರು, ಆ 6: 370ವಿಧಿ ರದ್ದತಿ ಮತ್ತು ಜಮ್ಮು, ಕಾಶ್ಮೀರ ರಾಜ್ಯ ವಿಭಜನೆಯ ಬಗ್ಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿ ವಿರುದ್ದ ಟ್ವೀಟ್ ಗಳ ಪ್ರವಾಹವನ್ನೇ ಹರಿಸಿದ್ದಾರೆ.
ಈ ಬಗ್ಗೆ ಸಿದ್ದರಾಮಯ್ಯ ಮಾಡಿರುವ ಟ್ವೀಟ್ ಹೀಗಿದೆ, ' ಪ್ರಣಾಳಿಕೆಯಲ್ಲಿನ ಆಶ್ವಾಸನೆಯಂತೆ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಪಡಿಸಿದ್ದೀರಿ ಎನ್ನುತ್ತೀರಲ್ಲಾ @narendramodi ಅವರೇ, ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು, ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿಟ್ಟು, ಸೈನಿಕರ ಕಾವಲು ಹಾಕಿ ಇದನ್ನು ಮಾಡ್ತೀರಿ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೀರಾ?
ಆರ್ಟಿಕಲ್ 370 ರದ್ದು: ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನ 'ಏಕಾಂಗಿ'
ಇನ್ನೊಂದು ಟ್ವೀಟ್ ನಲ್ಲಿ, ' ಕೇಂದ್ರದಲ್ಲಿ @BJP4India ಅಧಿಕಾರಕ್ಕೆ ಬಂದ ನಂತರವೇ ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಭದ್ರತಾ ಸಿಬ್ಬಂದಿ ಮತ್ತು ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗಿದ್ದಾರೆ ಎನ್ನುತ್ತಿವೆ ದಾಖಲೆಗಳು.ಇದಕ್ಕೆ ಕಾರಣ ಸಂವಿಧಾನದ 370ನೇ ವಿಧಿಯೇ? ಇಲ್ಲವೇ ಪರಿಸ್ಥಿತಿಯನ್ನು ನಿಯಂತ್ರಣ ಮಾಡಲಿಕ್ಕಾಗದ ನಿಮ್ಮ ಅಸಾಮರ್ಥ್ಯವೇ?
ಮತ್ತೊಂದು ಟ್ವೀಟ್, ' ಪಾಕಿಸ್ತಾನದ ವಿರುದ್ಧ ಯುದ್ಧ ಗೆದ್ದಾಗ, ಸ್ವರ್ಣಮಂದಿರದಲ್ಲಿದ್ದ ಉಗ್ರಗಾಮಿಗಳನ್ನು ಖಾಲಿ ಮಾಡಿಸಿದಾಗ.. ಶ್ರೀಮತಿ ಇಂದಿರಾಗಾಂಧಿಯವರು ರಾಜಕೀಯವಾಗಿ ಬಳಸಿಕೊಳ್ಳಲಿಲ್ಲ,ಅದು ತಮ್ಮ ಕರ್ತವ್ಯ ಎಂದು ತಿಳಿದಿದ್ದರು. @narendramodi ಅವರೇ ನೀವ್ಯಾಕೆ ಪ್ರತಿ ಕೆಲಸವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ತಿದ್ದೀರಿ?'.
ನಾಲ್ಕನೇ ಟ್ವೀಟ್, ' ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾಯಿತಲ್ಲಾ, ಈಗಲಾದರೂ ದೇಶದ ಕುಸಿಯುತ್ತಿರುವ ಆರ್ಥಿಕ ಸ್ಥಿತಿಯ ಬಗ್ಗೆ, ಕರ್ನಾಟಕದಲ್ಲಿ ಅತೀವೃಷ್ಟಿ ಮತ್ತು ಅನಾವೃಷ್ಟಿಯಿಂದ ನರಳುತ್ತಿರುವ ಜನರ ಬಗ್ಗೆ ಸ್ವಲ್ಪ ಗಮನಹರಿಸುತ್ತೀರಾ, @PMOIndia ಅವರೇ? @INCKarnataka'.
ಕಾಶ್ಮೀರಿಗಳ ಬೆಂಬಲಕ್ಕೆ ಯಾವ ಹಂತಕ್ಕೆ ಹೋಗಲು ಸಹ ಸಿದ್ಧ: ಪಾಕ್ ಸೇನೆ
ಸಿದ್ದರಾಮಯ್ಯನವರ ಟ್ವೀಟಿಗೆ ನೂರಾರು ಕಾಮೆಂಟುಗಳು ಬಂದಿದ್ದು, ಅದರಲ್ಲಿ ಒಂದು ಹೀಗಿದೆ, ' ನೀವು ಪ್ರಣಾಳಿಕೆಯಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಮಾಡಿಸುತ್ತೇನೆಂದು ಪ್ರಣಾಳಿಕೆಯಲ್ಲಿ ಹೇಳಿದ್ರಾ? ಲಿಂಗಾಯತರನ್ನು ಪ್ರತ್ಯೇಕ ಮಾಡುತ್ತೇನೆಂದು ಹೇಳಿದ್ರಾ ? ಎಲ್ಲವನ್ನೂ ಪ್ರಣಾಳಿಕೆಯಲ್ಲಿ ಹೇಳಿಯೇ ಮಾಡುವುದಿಲ್ಲ ತಾನೆ ಆಗಲೇ ಇದೆರಡನ್ನು ಪ್ರಣಾಳಿಕೆಯಲ್ಲಿ ಹೇಳಿದ್ದರೆ ಈ ಟರ್ಮ್ ನಲ್ಲಿ ಏನಾಯಿತೋ ಅದು ಆಗಲೇ ಆಗಿರುತ್ತಿತ್ತು ತಿಳಿಯಿತೇ?'.