'ಇನ್ವೆಸ್ಟ್ ಕರ್ನಾಟಕ-2016' ಕ್ಕೆ ಯಾರ್ಯಾರು ಬರ್ತಿದ್ದಾರೆ?
ಬೆಂಗಳೂರು, ಜನವರಿ, 13: ಫೆಬ್ರವರಿ 3ರಿಂದ 5ರವರೆಗೆ ಬೆಂಗಳೂರು ಅರಮನೆ ಮೈದಾನದಲ್ಲಿ ಹೂಡಿಕೆದಾರರ ಸಮಾವೇಶ ನಡೆಯಲಿದ್ದು ರಾಜ್ಯದಲ್ಲಿ ಬಂಡವಾಳ ಹೂಡಲು ಅನೇಕ ಕಂಪನಿಗಳು ಮುಂದೆ ಬಂದಿವೆ ಎಂದು ಕೈಗಾರಿಕಾ ಸಚಿವ ಆರ್ ವಿ ದೇಶಪಾಂಡೆ ಮಾಹಿತಿ ನೀಡಿದರು.
'ಇನ್ವೆಸ್ಟ್ ಕರ್ನಾಟಕ-2016' ಸಮಾವೇಶವನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಉದ್ಘಾಟಿಸುವರು. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಹ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.[ಬಂಡವಾಳ ಹೂಡಿಕೆ ಸಮಾವೇಶ ಯಾಕಾಗಿ?]
ಬೆಂಗಳೂರಿನ ಖನಿಜ ಭವನದಲ್ಲಿ ನಡೆದ ಸಮಾವೇಶದ ಪೂರ್ವಭಾವಿ ಸಭೆಯ ನಂತರ ದೇಶಪಾಂಡೆ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಜಾಗತಿಕ ಬಂಡವಾಳ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಹಲವಾರು ಕಂಪನಿಗಳು ಮುಂದೆ ಬಂದಿದವೆ ಎಂದು ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

ರಾಜ್ಯದಲ್ಲಿ ಬಂಡವಾಳ ಹೂಡಲು ಜಪಾನ್, ಇಟಲಿ, ಸ್ವೀಡನ್, ದಕ್ಷಿಣ ಕೊರಿಯಾ ,ಯುನೈಟೆಡ್ ಕಿಂಗ್ಡಮ್,ಫ್ರಾನ್ಸ್,ಮತ್ತು ಜರ್ಮನಿ ಉದ್ಯಮಿಗಳು ಮುಂದೆ ಬಂದಿದ್ದಾರೆ. ಹೂಡಿಕೆ ಕುರಿತಂತೆ ಸುಮಾರು 145 ಪ್ರಸ್ತಾವನೆಗಳು ಬಂದಿದ್ದು, ಈ ಪೈಕಿ 45 ಮೂಲಸೌಕರ್ಯಕ್ಕೆ ಸಂಬಂಧಿಸಿದ್ದಾಗಿದ್ದು, ಬೆಂಗಳೂರಿನಲ್ಲೇ ಹೂಡಿಕೆಯಾಗಲಿದೆ ಎಂದು ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.
ಜನವರಿ 20ರಂದು ಮತ್ತೊಂದು ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಯಾವ ಕಂಪನಿ ಮತ್ತು ಹೂಡಿಕೆದಾರರಿಗೆ ಸಬಂಧಿಸಿದ ವಿವರಗಳು ಅಂತಿಮವಾಗುತ್ತದೆ. ಏರೋಸ್ಪೇಸ್, ಆಹಾರ ಸಂಸ್ಕರಣೆ, ಆಟೋಮೊಬೈಲ್, ಕೃಷಿ ಸಂಬಂಧಿ ಕೈಗಾರಿಕೆಗಳು, ಔಷಧ ಮತ್ತು ರಸಗೊಬ್ಬರ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.[ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ VS ಅರುಣ್ ಜೇಟ್ಲಿ]
ಜನವರಿ 20ರ ಸಭೆಯಲ್ಲಿ ಅಜೀಂ ಪ್ರೇಮ್ಜಿ, ರತನ್ ಟಾಟಾ, ಸಜ್ಜನ್ ಜಿಂದಾಲ್ ಪಾಲ್ಗೊಳ್ಳಲಿದ್ದಾರೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ಇದೆ ವೇಳೆ ತಿಳಿಸಿದರು.[ಹೊಸ ವರ್ಷಕ್ಕೆ ಎಲ್ಲಿ ಹೂಡಿಕೆ ಮಾಡೋದು ಬೆಸ್ಟ್]
ಉದ್ಯಮಿಗಳಿಗೆ 500 ಎಕರೆ ಭೂಮಿ
ಏರೋಸ್ಪೇಸ್, ಆಹಾರ ಸಂಸ್ಕರಣೆ, ಆಟೋಮೊಬೈಲ್, ಕೃಷಿ ಸಂಬಂಧಿ ಕೈಗಾರಿಕೆಗಳು, ಔಷಧ ಮತ್ತು ರಸಗೊಬ್ಬರ ಕ್ಷೇತ್ರಗಳಿಗೆ ರಾಜ್ಯದಲ್ಲಿ ರಸಗೊಬ್ಬರ ಪಾರ್ಕ್ ನಿರ್ಮಾಣಕ್ಕೆ 500 ಎಕರೆ ಭೂಮಿ ನೀಡಲು ಸರ್ಕಾರ ಒಪ್ಪಿದೆ. ಅದೇ ರೀತಿ ಔಷಧ ಪಾರ್ಕ್ ಸ್ಥಾಪನೆಗೆ ಯಾದಗಿರಿ ಮತ್ತು ಮಂಗಳೂರಿನಲ್ಲಿ ಭೂಮಿ ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಅನಂತಕುಮಾರ್ ತಿಳಿಸಿದರು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications