Get Updates
Get notified of breaking news, exclusive insights, and must-see stories!

ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 15: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿಗೆ ಹಲವು ಸಾಲ ಸೌಲಭ್ಯಕ್ಕಾಗಿ ಆರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ಮತ್ತು ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಿದೆ.

ಸಾಲ ಸೌಲಭ್ಯ ಪಡೆಯಲು ಕರ್ನಾಟಕ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. "ನಮೂನೆ -ಜಿ" ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿದ್ದು, ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರ ಮೊಬೈಲ್ ಸಂಖ್ಯೆಯ ಆಧಾರ್ ಸಂಖ್ಯೆಗೆ ಜೋಡಣೆಯಾಗಿರಬೇಕು. ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿರಬೇಕು.

Arya Vysya Community Development Corporation Invites applications for loan facility

ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯ ಮಾರ್ಗಸೂಚಿ

* ಈ ಯೋಜನೆಯಲ್ಲಿ ನಿಗಮವು ಸ್ವಯಂ ಉದ್ಯೋಗ ಕೈಗೊಳ್ಳಲು ರೂ.1,00,000/-ಗಳ ಆರ್ಥಿಕ ನೆರವು ಒದಗಿಸಲಾಗುವುದು ಹಾಗೂ ಈ ಮೊತ್ತದಲ್ಲಿ ರೂ.20,000/-ಗಳ ಸಹಾಯಧನ, ಬಾಕಿ ಉಳಿಕೆ ಮೊತ್ತವಾದ ರೂ.80,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.

* ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ.3,00,000/-ಗಳ ಮಿತಿ ಒಳಗಿರಬೇಕು.

*ಅರ್ಜಿದಾರರು 18 ವರ್ಷ ಮೇಲ್ಪಟ್ಟು 55 ವರ್ಷದೊಳಗಿನವರಾಗಿರಬೇಕು.

*ಮಹಿಳೆಯರಿಗೆ 33%, ವಿಶೇಷಚೇತನರಿಗೆ 5% ಮತ್ತು ತೃತೀಯಲಿಂಗಿಗಳಿಗೆ 5% ಮೀಸಲಾತಿ ಇರುತ್ತದೆ.

*ಒಂದು ಕುಟುಂಬದಲ್ಲಿ ಒಂದು ಅಭ್ಯರ್ಥಿಯನ್ನು ಮಾತ್ರ ಆಯ್ಕೆ ಮಾಡಲಾಗುವುದು.

Arya Vysya Community Development Corporation Invites applications for loan facility

*ಈ ಯೋಜನೆ ಅಡಿಯಲ್ಲಿ ಪಡೆದ ಸಾಲವನ್ನು 3 ವರ್ಷಗಳ ಅವಧಿಯಲ್ಲಿ 34 ಮಾಸಿಕ ಕಂತುಗಳಲ್ಲಿ ಅಸಲು ಮತ್ತು ಬಡ್ಡಿ ಸೇರಿಸಿ ಮರುಪಾವತಿಸಬೇಕು 2 ತಿಂಗಳ ವಿರಾಮ ಅವಧಿ ಇರುತ್ತದೆ. ಕಡ್ಡಾಯವಾಗಿ ಎಲ್ಲಾ ಮರುಪಾವತಿಯನ್ನು Online ಮುಖಾಂತರ ಪಾವತಿಸಬೇಕು.

* 2019-20 ಮತ್ತು 2020-21ನೇ ಸಾಲಿನ ಫಲಾನುಭವಿಗಳು ಪಡೆದ ಸಾಲವನ್ನು ಅವಧಿಯೊಳಗೆ ಸಂಪೂರ್ಣವಾಗಿ ಮರುಪಾವತಿಸಿದ್ದಲ್ಲಿ, ಪುನಃ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಅರಿವು ಶೈಕ್ಷಣಿಕ ಸಾಲ ಯೋಜ -ಸಿ.ಇ.ಟಿ (CET) ಹಾಗೂ ಎನ್.ಇ.ಇ.ಟಿ (NEET) ಕೌನ್ಸಿಲಿಂಗ್ ಮುಗಿದ ನಂತರ ಅರ್ಜಿಗಳನ್ನು ಆಹ್ವಾನಿಸಲಾಗುವುದು.

ಆಸಕ್ತರು ವೆಬ್ ಸೈಟ್ http://www.kacdc.karnataka.gov.in ನಲ್ಲಿ ಆಗಸ್ಟ್ 31ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ (ನಿ), ಜಿಲ್ಲಾ ವ್ಯವಸ್ಥಾಪಕರು ಕಚೇರಿ, ಬೆಂಗಳೂರು ಉತ್ತರ ಜಿಲ್ಲೆ, ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್, ಗಂಗಾನಗರ, ಬೆಂಗಳೂರು-560 032 ಅಥವಾ ದೂರವಾಣಿ ಸಂಖ್ಯೆ 9448451111, 080-23539601 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ (ನಿ) ದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡದ ಅವಶ್ಯಕತೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ 100 ರಿಂದ 150 ಸಂಖ್ಯಾಬಲವುಳ್ಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ತೆರೆಯಲು ವಿದ್ಯಾರ್ಥಿನಿಲಯಕ್ಕೆ ಕಟ್ಟಡದ ಅವಶ್ಯಕತೆ ಇದೆ. ಎಲ್ಲಾ ಮೂಲಭೂತ ಸೌಕರ್ಯ ಒಳಗೊಂಡಿರುವ ಹಾಗೂ ವಿದ್ಯಾರ್ಥಿನಿಲಯ ನಡೆಸಲು ಯೋಗ್ಯವಿರುವ ಕಟ್ಟಡಗಳನ್ನು ಹೊಂದಿರುವ ಕಟ್ಟಡದ ಮಾಲೀಕರು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ದಕ್ಷಿಣ ತಾಲ್ಲೂಕು, ಜಿಲ್ಲಾ ಪಂಚಾಯತ್ ಕಚೇರಿ ಆವರಣ, ಬನಶಂಕರಿ, ಕನಕಪುರ ಮುಖ್ಯರಸ್ತೆ, ಬೆಂಗಳೂರು ಇಲ್ಲಿ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9900833882 / 9880738902 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+