ಮಾತಿಗೆ ತಪ್ಪದ ಕುಮಾರಸ್ವಾಮಿ: ನಾಗಮಂಗಲದ ಯುವತಿಗೆ ಉದ್ಯೋಗ ಭಾಗ್ಯ
ಬೆಂಗಳೂರು, ಜ 27: ಈ ಹಿಂದೆಯೂ ಹಲವು ಬಾರಿ ಸಹಾಯಹಸ್ತ ಚಾಚಿಕೊಂಡು ತಮ್ಮ ಬಳಿ ಬರುವವರಿಗೆ ಆರ್ಥಿಕ, ಶೈಕ್ಷಣಿಕ ಸಹಾಯ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಹಿಳೆಯೊಬ್ಬರಿಗೆ ಎರಡು ದಿನದ ಹಿಂದೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ.
ನಾಗಮಂಗಲ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ, ಮಹಿಳೆಯೊಬ್ಬರು ತಮ್ಮ ಅಸಹಾಯಕತೆಯನ್ನು ಕುಮಾರಸ್ವಾಮಿ ಬಳಿ ತೋಡಿಕೊಂಡಿದ್ದರು. ಆಕೆಯ ಮಗಳನ್ನು ಬೆಂಗಳೂರಿನ ನಿವಾಸಕ್ಕೆ ಕಳುಹಿಸಿಕೊಡಿ, ಖಾಸಗಿ ಕಂಪೆನಿಯಲ್ಲಿ ಉದ್ಯೋಗ ಕೊಡಿಸುವ ಭರವಸೆಯನ್ನು ನೀಡಿದ್ದರು.
ಅದರಂತೇ, ಮಹಿಳೆಯ ಮಗಳು ಕುಮಾರಸ್ವಾಮಿಯವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ದೂರವಾಣಿಯಲ್ಲಿ ಖಾಸಗಿ ಕಂಪೆನಿಯ ವ್ಯಕ್ತಿಯೊಬ್ಬರ ಜೊತೆಗೆ ಮಾತನಾಡಿದ ಕುಮಾರಸ್ವಾಮಿ, ಈ ಹುಡುಗಿ ಬಿಕಾಂ ಓದಿದ್ದಾಳೆ, ಕಂಪ್ಯೂಟರ್ ಅನುಭವ ಕೂಡಾ ಇದೆ. ಇವತ್ತೇ ಕಳುಹಿಸಿಕೊಡುತ್ತೇನೆ, ಉದ್ಯೋಗ ಕೊಡಿ ಎಂದು ಮನವಿ ಮಾಡಿದ್ದಾರೆ.

15-20 ಸಾವಿರ ರೂಪಾಯಿ ಸಂಬಳ ಕೊಡುತ್ತಾರೆ, ಇವತ್ತೇ ಅಲ್ಲಿಗೆ ಹೋಗಿ, ಕೆಲಸಕ್ಕೆ ಸೇರಿಕೊಮ್ಮ ಎಂದು ಯುವತಿಗೆ ಕುಮಾರಸ್ವಾಮಿ ಸೂಚಿಸಿದ್ದಾರೆ. ಕಳೆದ ಜನವರಿ 24ರಂದು ನಾಗಮಂಗಲದ ಕಲ್ಲುದೇವನಹಳ್ಳಿ ಗ್ರಾಮದ ಮಹಿಳೆಯೊಬ್ಬರು ಕುಮಾರಸ್ವಾಮಿ ಅವರ ಕಾರನ್ನು ರಸ್ತೆಯಲ್ಲಿ ಕೈ ತೋರಿಸಿ ನಿಲ್ಲಿಸಿದ್ದರು.
ಆ ಮಹಿಳೆ, ಪತಿ ಸತ್ತುಹೋಗಿದ್ದಾರೆ. 3 ಹೆಣ್ಣುಮಕ್ಕಳು. ಒಬ್ಬಳಿಗೆ ಮದುವೆಯಾಗಿದೆ. ಮತ್ತಿಬ್ಬರ ಮದುವೆ ಮಾಡಬೇಕು ಎಂದು ಕುಮಾರಸ್ವಾಮಿಯವರಲ್ಲಿ ಮನವಿ ಮಾಡಿದ್ದರು. ಇಬ್ಬರು ಮಕ್ಕಳು ಉದ್ಯೋಗವನ್ನು ಅರಸಿಕೊಂಡು ಬೆಂಗಳೂರಿಗೆ ಹೋಗಿದ್ದಾರೆ. ನಾನು ಈಗ ಒಬ್ಬಂಟಿ. ಇಳಿವಯಸ್ಸಿನಲ್ಲೂ ದುಡಿದು ಬದುಕುತ್ತಿದ್ದೇನೆ. ಹೆಣ್ಣುಮಕ್ಕಳಿಗೆ ಕೆಲಸ ಕೊಡಿಸಿ ಎಂದು ಆ ಮಹಿಳೆಯ ಎಚ್ಡಿಕೆ ಮುಂದೆ ಕಣ್ಣೀರು ಹಾಕಿದ್ದರು.
ಬೆಂಗಳೂರಿನ ಜೆಪಿ ನಗರದ ನನ್ನ ನಿವಾಸಕ್ಕೆ ನಿಮ್ಮ ಮಗಳನ್ನು ಕಳುಹಿಸಿ. ಅವಳಿಗೆ ಖಾಸಗಿ ಸಂಸ್ಥೆಯಲ್ಲಿ ಒಂದು ಒಳ್ಳೆಯ ಉದ್ಯೋಗ ಕೊಡಿಸುತ್ತೇನೆ ಎಂದು ಆ ಮಹಿಳೆಗೆ ಕುಮಾರಸ್ವಾಮಿ ಸಾಂತ್ವನ ಹೇಳಿದ್ದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ











Click it and Unblock the Notifications