ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜೀನಾಮೆ ನೀಡಿದ ಅತೃಪ್ತರು ರಾಜ್ಯಪಾಲರಿಗೆ ನೀಡಿದ ಸ್ಪೋಟಕ ಮಾಹಿತಿ

ರಾಜೀನಾಮೆ ನೀಡಿದ ಅತೃಪ್ತರು ರಾಜ್ಯಪಾಲರಿಗೆ ನೀಡಿದ ಸ್ಪೋಟಕ ಮಾಹಿತಿ

|
Google Oneindia Kannada News

ಬೆಂಗಳೂರು, ಜುಲೈ 6: ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡಿದ ಅತೃಪ್ತ ಶಾಸಕರು, ಇನ್ನೆಷ್ಟು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆಂದು ತಿಳಿದು ಬಂದಿದೆ.

ಅತೃಪ್ತರು ನೀಡಿದ್ದಾರೆ ಎನ್ನಲಾದ ಮಾಹಿತಿಯಂತೆ ಶಾಸಕರು ರಾಜೀನಾಮೆ ನೀಡಿದ್ದೇ ಆದಲ್ಲಿ, ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಪತನಗೊಳ್ಳುವುದು ನಿಶ್ಚಿತ.

ಮುನಿರತ್ನ ರಾಜೀನಾಮೆ ಪತ್ರ ಹರಿದು ಹಾಕಿದ ಡಿಕೆಶಿಮುನಿರತ್ನ ರಾಜೀನಾಮೆ ಪತ್ರ ಹರಿದು ಹಾಕಿದ ಡಿಕೆಶಿ

ಎಚ್ ವಿಶ್ವನಾಥ್ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಶಾಸಕರು, ಯಾವ ಕಾರಣಕ್ಕಾಗಿ ರಾಜೀನಾಮೆ ನೀಡುತ್ತಿದ್ದೇವೆ ಎನ್ನುವುದರ ಬಗ್ಗೆಯೂ ರಾಜ್ಯಪಾಲರಿಗೆ ಮಾಹಿತಿ ನೀಡಿದ್ದಾರೆ.

As per report, Total 22 MLAs resiging of both JDS and Congress party

ಈಗ ನಾವು ಹದಿನಾಲ್ಕು ಜನ ಶಾಸಕರಿದ್ದೇವೆ, ಇನ್ನೂ ಎಂಟು ಶಾಸಕರು ರಾಜೀನಾಮೆ ಸದ್ಯದಲ್ಲೇ ನೀಡಲಿದ್ದಾರೆ. ಒಟ್ಟು ರಾಜೀನಾಮೆ ನೀಡುವ ಶಾಸಕರ ಸಂಖ್ಯೆ 22 ಎನ್ನುವ ಸ್ಪೋಟಕ ಮಾಹಿತಿಯನ್ನು ಅತೃಪ್ತ ಶಾಸಕರು ನೀಡಿದ್ದಾರೆ ಎನ್ನಲಾಗುತ್ತಿದೆ.

ಅತೃಪ್ತ ಶಾಸಕರು ರಾಜ್ಯಪಾಲರಿಗೆ ರಾಜೀನಾಮೆ ನೀಡಲು ಹೋದಾಗ, ಬೆಂಗಳೂರು ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಕೂಡಾ ಅವರ ಜೊತೆಗಿದ್ದಿದ್ದು ವಿಶೇಷ.

ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರ ರಾಜೀನಾಮೆಯನ್ನು ಡಿ ಕೆ ಶಿವಕುಮಾರ್ ಹರಿದು ಹಾಕಿದ ಹಿನ್ನಲೆಯಲ್ಲಿ ಅತೃಪ್ತರಿಗೆ ಸೂಕ್ತ ಭದ್ರತೆ ನೀಡುವಂತೆ, ರಾಜ್ಯಪಾಲರು ಆದೇಶ ನೀಡಿದ್ದರಿಂದ, ಅಲೋಕ್ ಕುಮಾರ್ ಶಾಸಕರ ಜೊತೆಗಿದ್ದರು.

ಸಮ್ಮಿಶ್ರ ಸರಕಾರಕ್ಕೆ ಖೆಡ್ಡಾ ತೋಡಿದ ಎಚ್ ವಿಶ್ವನಾಥ್ಸಮ್ಮಿಶ್ರ ಸರಕಾರಕ್ಕೆ ಖೆಡ್ಡಾ ತೋಡಿದ ಎಚ್ ವಿಶ್ವನಾಥ್

ಮುನಿರತ್ನ ಅವರ ರಾಜೀನಾಮೆ ಪತ್ರವನ್ನು ಹರಿದು ಹಾಕಿದ್ದೇನೆ. ನನ್ನ ಮತ್ತು ಮುನಿರತ್ನ ಒಡನಾಟ ಮೂವತ್ತು ವರ್ಷದ್ದು, ನಮ್ಮಿಬ್ಬರ ನಡುವೆ ಭಾವನಾತ್ಮಕ ಸಂಬಂಧವಿದೆ ಎಂದು ಪತ್ರ ಹರಿದು ಹಾಕಿದ್ದನ್ನು ಡಿಕೆಶಿ ಸಮರ್ಥಿಸಿಕೊಂಡಿದ್ದರು.

English summary
As per report, Total 22 MLAs resigning of both JDS and Congress party. While meeting with the governor Vajubhai Vala, this information dissident MLAs given to him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X