I.N.D.I.A ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಗೆ ತಡೆ: ಪ್ರಣಾಳಿಕೆಯಲ್ಲಿ ಡಿಎಂಕೆ ಘೋಷಣೆ-ಬಿಜೆಪಿ ವಾಗ್ದಾಳಿ
ಬೆಂಗಳೂರು ಮಾರ್ಚ್ 21: ಕರ್ನಾಟಕದ ದೌರ್ಬಲ್ಯವನ್ನು ಮನಗಂಡ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರಕಾರವು ನಿನ್ನೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇಂಡಿ ಒಕ್ಕೂಟ ಗೆದ್ದು ಬಂದರೆ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಿಡುವುದಿಲ್ಲ ಎಂದು ತಮಿಳುನಾಡು ಸರಕಾರದ ಮುಖ್ಯಸ್ಥ ಸ್ಟಾಲಿನ್ ಹೇಳಿಕೆ ಕೊಟ್ಟಿದ್ದಾರೆ ಎಂದು ಬಿಜೆಪಿ ನಾಯಕ ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಳೆದ ಆಗಸ್ಟ್ 5 ರಿಂದ ಕರ್ನಾಟಕ ಸರಕಾರದ ವೈಫಲ್ಯಗಳನ್ನು ಮನಗಂಡು ಈ ರೀತಿ ಚುನಾವಣಾ ಪ್ರಣಾಳಿಕೆ ಹೊರಡಿಸಿದೆ. ಇದು ರಾಜ್ಯ ಸರಕಾರಕ್ಕೆ ಗೊತ್ತಿದೆಯೇ ಇಲ್ಲವೋ ಗೊತ್ತಿಲ್ಲ ಎಂದು ಅಶ್ವತ್ಥನಾರಾಯಣ ಅವರು ಟೀಕಿಸಿದರು.

ಕಾವೇರಿ ಐತೀರ್ಪು ಬಂದ ಬಳಿಕ ಬೆಂಗಳೂರಿನ ಕುಡಿಯುವ ನೀರು ಸಂಬಂಧ ಮತ್ತು 400 ಮೆ.ವಾ. ವಿದ್ಯುತ್ ಉತ್ಪಾದನೆಗೆ ಅವಕಾಶ ಇದೆ ಎಂದು ಗೊತ್ತಾಗಿದೆ. ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶದ ಮೇರೆಗೆ ನಮ್ಮ ಸರಕಾರ ಇದ್ದಾಗ ಒಂದು ಸಾಧ್ಯತಾ ವರದಿ (ಫೀಸಿಬಿಲಿಟಿ ರಿಪೋರ್ಟ್) ಸಲ್ಲಿಸಲು ಸೂಚಿಸಲಾಗಿತ್ತು. ಮಾನ್ಯ ಬಸವರಾಜ ಬೊಮ್ಮಾಯಿಯವರು 4-8-2018ರಲ್ಲಿ ಕೇಂದ್ರ ಜಲ ಆಯೋಗ ತಿಳಿಸಿದ ಬಳಿಕ ಸಾಧ್ಯತಾ ವರದಿ ನೀಡಿದ್ದರು. 2019ರಲ್ಲಿ ಮತ್ತೊಮ್ಮೆ 9 ಸಾವಿರ ಕೋಟಿ ವೆಚ್ಚದ ಪೂರ್ಣ ಪ್ರಮಾಣದ ಸವಿವರ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿತ್ತು ಎಂದು ಹೇಳಿದರು.
ಬಿಜೆಪಿ ಸರಕಾರ ಇದ್ದಾಗ ಮೇಕೆದಾಟು ಯೋಜನೆ ಕುರಿತ ಬೆಳವಣಿಗೆ ಇದು. ಇದಾದ ಬಳಿಕ 1 ಸಾವಿರ ಕೋಟಿ ಹಣವನ್ನೂ ಬಸವರಾಜ ಬೊಮ್ಮಾಯಿಯವರು ಬಿಡುಗಡೆ ಮಾಡಿದ್ದರು. ಕೋವಿಡ್ ಸಂಕಷ್ಟ ಕಾಲದಲ್ಲಿ ಡಿ.ಕೆ.ಶಿವಕುಮಾರ್ ಅವರು ಮೇಕೆದಾಟು ಸಂಬಂಧ 'ನನ್ನ ನೀರು ನನ್ನ ಹಕ್ಕು' ಎಂಬ ಪಾದಯಾತ್ರೆಯನ್ನು ನಡೆಸಿದ್ದರು. ಕನ್ನಡದ ಅಸ್ಮಿತೆ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ನಿನ್ನೆಯ ಸ್ಟಾಲಿನ್ ಅವರ ಹೇಳಿಕೆ ಬಗ್ಗೆ ಕಾಂಗ್ರೆಸ್ ನಿಲುವೇನು ಎಂದು ತಿಳಿಸಿಲ್ಲ. ಕರ್ನಾಟಕದ ರೈತರ, ಕುಡಿಯುವ ನೀರಿನ ಪ್ರಶ್ನೆ ಇದು. ಮುಖ್ಯಮಂತ್ರಿಗಳ ನಿಲುವೇನು ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಸರಕಾರವು ತಮಿಳುನಾಡು ಸರಕಾರ, ಸ್ಟಾಲಿನ್ ಹೇಳಿಕೆ ಕುರಿತು ತುಟಿ ಬಿಚ್ಚುತ್ತಿಲ್ಲ ಎಂದ ಅಶ್ವತ್ಥನಾರಾಯಣ ಅವರು ಸಿಎಂ, ಡಿಸಿಎಂ ನಿಲುವೇನು? ಅಥವಾ ನೀವೇನಾದರೂ ಈ ಪ್ರಣಾಳಿಕೆ ಬರೆದುಕೊಟ್ಟಿದ್ದೀರಾ? ಎಂದು ವ್ಯಂಗ್ಯವಾಗಿ ಪ್ರಶ್ನೆಯನ್ನು ಮುಂದಿಟ್ಟರು. ರೈತರು ಮತ್ತು ಕರ್ನಾಟಕಕ್ಕೆ ದ್ರೋಹಿಗಳಾಗಿ ಸಿದ್ದರಾಮಯ್ಯನವರ ಮತ್ತು ಡಿ.ಕೆ.ಶಿವಕುಮಾರರ ನಡವಳಿಕೆಯನ್ನು ಗಮನಿಸಿದಾಗ ಇದು ಸ್ಟಾಲಿನ್ ಅವರಿಗೆ ಬಾಳೆಹಣ್ಣಿನ ಸಿಪ್ಪೆ ಸುಲಿದು ಅವರ ಬಾಯಿಗೆ ಇಟ್ಟಂತೆ ಆಗಿದೆ. ಕರ್ನಾಟಕಕ್ಕೆ ಮಾಡಿದ ದ್ರೋಹ ಇದು. ಮೇಕೆದಾಟು ಕುರಿತು ನಿಲುವನ್ನು ಸ್ಪಷ್ಟಪಡಿಸಿ ಎಂದು ಆಗ್ರಹಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರವು ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಅವರು ಆರೋಪಿಸಿದರು. ಯಾವುದೇ ಒಂದು ರಾಜ್ಯ ಸರಕಾರಕ್ಕೆ 4 ವರ್ಷಗಳ ಆಡಳಿತದ ಬಳಿಕ ಆಡಳಿತ ವಿರೋಧಿ ಅಲೆ ಸಹಜವಾಗಿ ಆರಂಭವಾಗುತ್ತದೆ. ಆದರೆ, ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಕೇವಲ 100 ದಿನಗಳು ತುಂಬುವ ಮೊದಲೇ ಆಡಳಿತ ವಿರೋಧಿ ಅಲೆ ಪ್ರಾರಂಭವಾಗಿತ್ತು ಎಂದು ತಿಳಿಸಿದರು.
ಅಭಿವೃದ್ಧಿಗೆ ಸರಿಯಾಗಿ ಹಣ ಬಿಡುಗಡೆ ಮಾಡುತ್ತಿಲ್ಲ. ರಾಜ್ಯದಲ್ಲಿ ಬರಗಾಲದ ಸ್ಥಿತಿ ಇದೆ. ಬರಗಾಲ ಸಂಬಂಧಿ ಕಾಮಗಾರಿಗಳು ನಡೆಯುತ್ತಿಲ್ಲ. ಎಲ್ಲ ಅಭಿವೃದ್ಧಿ ಚಟುವಟಿಕೆಗಳೂ ಸ್ಥಗಿತವಾಗಿದೆ ಎಂದು ಕಾಂಗ್ರೆಸ್ಸಿನ ಬಸವರಾಜ ರಾಯರೆಡ್ಡಿ ಮತ್ತಿತರರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು ಎಂದು ವಿವರಿಸಿದರು. ಬರಗಾಲದ ಕ್ರಿಯಾಯೋಜನೆ ರೂಪಿಸದೆ 10.50 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದಾರೆ. ಈ ಹಣದಲ್ಲಿ ಬರಗಾಲದ ಕಾಮಗಾರಿ ಪ್ರಾರಂಭಿಸಬೇಕೇ? ಕುಡಿಯುವ ನೀರಿನ ಯೋಜನೆ ಕೈಗೊಳ್ಳಬೇಕೇ? ಜಾನುವಾರುಗಳಿಗೆ ಮೇವಿನ ಕಿಟ್ ಕೊಡಬೇಕೇ? ಎಂಬ ಕ್ರಿಯಾಯೋಜನೆ ಮಾಡಿರಲಿಲ್ಲ ಎಂದು ಆಕ್ಷೇಪಿಸಿದರು.
ಸಿದ್ದರಾಮಯ್ಯನವರು ಕೇಂದ್ರಕ್ಕೆ 17 ಸಾವಿರ ಕೋಟಿಗೆ ಕೋರಿಕೆ ಸಲ್ಲಿಸಿದ್ದಾಗಿ ಹೇಳುತ್ತ ಕಾಲಹರಣ ಮಾಡಿದ್ದಾರೆ; ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್ಡಿಆರ್ಎಫ್) ಹಣ ಬಿಡುಗಡೆಗೆ ಕಾಯುತ್ತ ಕುಳಿತರೇ ಹೊರತು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ (ಎಸ್ಡಿಆರ್ಎಫ್) ಹಣ ಬಿಡುಗಡೆ ಮಾಡಲೇ ಇಲ್ಲ ಎಂದು ಟೀಕಿಸಿದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ದೊಡ್ಡ ಪ್ರಮಾಣದಲ್ಲಿ ನೆರೆ ಹಾವಳಿ ಆಗಿತ್ತು. ಅವರು ಕ್ಯಾಬಿನೆಟ್ ಕೂಡ ರಚಿಸಿರಲಿಲ್ಲ. ಒಬ್ಬರೇ ಇದ್ದರೂ ಹಾನಿಯನ್ನು ವೀಕ್ಷಿಸಿ ಮನೆ ಹಾನಿ ಆದವರಿಗೆ ಹಣವನ್ನು ಬಿಡುಗಡೆ ಮಾಡಿದ್ದರು ಎಂದು ನೆನಪಿಸಿದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications