ಇ-ಆಫೀಸ್ ವ್ಯವಸ್ಥೆ ಜಾರಿ ಮಾಡದ ಕುಲಪತಿಗಳಿಗೆ ಡಿಸಿಎಂ ಖಡಕ್ ಕ್ಲಾಸ್!
ಬೆಂಗಳೂರು, ಡಿ. 21: ಉನ್ನತ ಶಿಕ್ಷಣವನ್ನು ಮತ್ತಷ್ಟು ಉತ್ತಮಗೊಳಿಸುವ ಹಾಗೂ ವಿಶ್ವವಿದ್ಯಾಲಯಗಳ ಆಡಳಿತಕ್ಕೆ ವೇಗ ಕೊಟ್ಟು ಪಾರದರ್ಶಕಗೊಳಿಸುವ ಇ-ಆಫೀಸ್ ವ್ಯವಸ್ಥೆಯನ್ನು ಇನ್ನೂ ಜಾರಿ ಮಾಡದ ವಿವಿಗಳ ಕುಲಪತಿಗಳ ಕಾರ್ಯವೈಖರಿ ಬಗ್ಗೆ ಉನ್ನತ ಶಿಕ್ಷಣ ಖಾತೆ ಸಚಿವ, ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ತೀವ್ರ ಅಸಮಾಧಾನ ವ್ಯಕ್ತಡಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸರಕಾರಿ ಸ್ವಾಮ್ಯದ 22 ವಿವಿಗಳ ಕುಲಪತಿಗಳ ಜತೆ ವರ್ಚುಯಲ್ ಸಂವಾದ ನಡೆಸಿದ ಡಿಸಿಎಂ, ವಿವಿಗಳ ಆಡಳಿತದಲ್ಲಿ ಪಾರದರ್ಶಕತೆ ತರುವುದರ ಜತೆಗೆ ಜನರಿಗೆ ಉತ್ತರದಾಯಿತ್ವವಾಗಿರಲು ಇ-ಆಫೀಸ್ ವ್ಯವಸ್ಥೆಯನ್ನು ರೂಪಿಸಲಾಗಿದೆ. ಕೆಲ ವಿವಿಗಳು ಮಾತ್ರ ಈ ವ್ಯವಸ್ಥೆಯನ್ನು ಸ್ವಲ್ಪಮಟ್ಟಿಗೆ ಮಾತ್ರ ಜಾರಿ ಮಾಡಿದ್ದು, ಇನ್ನು ಕೆಲ ವಿವಿಗಳು ಇನ್ನೂ ಜಾರಿ ಮಾಡಿಲ್ಲ. ಇದು ಖಂಡಿತಾ ಸರಿಯಲ್ಲ ಎಂದರು.

ಇ-ಆಫೀಸ್ ಜಾರಿಯಾಗಬೇಕು
ಜನವರಿ 1ರಿಂದ ಎಲ್ಲ ವಿವಿಗಳಲ್ಲೂ ಇ-ಆಫೀಸ್ ಜಾರಿಯಾಗಲೇಬೇಕು. ಈಗಾಗಲೇ ನನ್ನ ಕಚೇರಿ, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಸೇರಿದಂತೆ ಉನ್ನತ ಶಿಕ್ಷಣ ವ್ಯಾಪ್ತಿಯಲ್ಲಿವ ಎಲ್ಲ ಕಚೇರಿಗಳಲ್ಲೂ ಈ ವ್ಯವಸ್ಥೆ ಜಾರಿಗೆ ಬಂದಿದೆ. ಹೀಗಾಗಿ ಹೊಸ ವರ್ಷದ ಮೊದಲ ದಿನದಿಂದಲೇ ಸರಕಾರ ಮತ್ತು ವಿಶ್ವವಿದ್ಯಾಲಯಗಳ ನಡುವಿನ ಎಲ್ಲ ವ್ಯಹಹಾರವು ಆನ್ಲೈನ್ ಮೂಲಕವೇ ನಡೆಯಲಿದೆ. ಪತ್ರ ವ್ಯವಹಾರ ಅಥವಾ ಕಡತ ರವಾನೆಗೆ ಅವಕಾಶವೇ ಇರುವುದಿಲ್ಲ ಎಂದು ಡಾ. ಅಶ್ವಥ್ ನಾರಾಯಣ ಸ್ಪಷ್ಟವಾಗಿ ಹೇಳಿದರು.

ನಾನೇ ಬರುತ್ತೇನೆ
ಇ-ಆಫೀಸ್ ಅನ್ನು ಎಲ್ಲ ವಿಶ್ವವಿದ್ಯಾಲಯಗಳು ಇನ್ನೂ ಮಾಡುತ್ತಿಲ್ಲ. ಈ ಬಗ್ಗೆ ನಿರ್ಲಕ್ಷ್ಯ ತಾಳಿದರೆ ಸಹಿಸುವ ಪ್ರಶ್ನೆಯೇ ಇಲ್ಲ. ಜನವರಿ ಒಂದರಿಂದಲೇ ಇದೆಲ್ಲ ಸಾಧ್ಯವಾಗಬೇಕು. ಒಂದು ವೇಳೆ ತಪ್ಪಿದರೆ ನಾನೇ ಖುದ್ದು ವಿಶ್ವವಿದ್ಯಾಲಯಗಳು ಬಂದು ಮಾಡಿಸಬೇಕಾಗುತ್ತದೆ ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರು ಎಚ್ಚರಿಕೆ ನೀಡಿದರು.

ಮೂರು ದಿನ ಗಡುವು
ಇ-ಆಡಳಿತ ಇಲಾಖೆ ಮತ್ತು ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಅತ್ಯಂತ ವೈಜ್ಞಾನಿಕವಾಗಿ ರೂಪಿಸಿರುವ ಏಕೀಕೃತ ವಿಶ್ವವಿದ್ಯಾಲಯ ಹಾಗೂ ಕಾಲೇಜು ನಿರ್ವಹಣಾ ವ್ಯವಸ್ಥೆಯನ್ನು ಎಲ್ಲ ವಿವಿಗಳಲ್ಲೂ ಕಡ್ಡಾಯವಾಗಿ ಜಾರಿಯಾಗಲೇಬೇಕು. ಇದರ ಬಗ್ಗೆ ಅಧ್ಯಯನ ಮಾಡಲು ವಿವಿಧ ಕುಲಪತಿಗಳ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿಗಳು ಆಯಾ ಮಾಡ್ಯೂಲ್ಸ್ʼಗೆ ಸಂಬಂಧಿಸಿದಂತೆ ಮೂರು ದಿನಗಳಲ್ಲಿ ವರದಿಗಳನ್ನು ತಪ್ಪದೇ ನೀಡಬೇಕು ಎಂದು ಡಿಸಿಎಂ ಅವರು ಸಂಬಂಧಿತ ಕುಲಪತಿಗಳಿಗೆ ಗಡುವು ವಿಧಿಸಿದರು.

ಕ್ರಾಂತಿಕಾರಕ ಬದಲಾವಣೆ
ಈ ವ್ಯವಸ್ಥೆಯಿಂದ ವಿವಿಗಳ ಆಡಳಿತದಲ್ಲಿ ಕ್ರಾಂತಿಕಾರಕ ಬದಲಾವಣೆ ಆಗುತ್ತದೆ. ಈ ನಿಟ್ಟಿನಲ್ಲಿ ಹೊಸ ಕೋರ್ಸುಗಳಿಗೆ ಅನುಮತಿ ನೀಡುವುದು, ಹೊಸ ಕಾಲೇಜುಗಳಿಗೆ ಮಂಜೂರಾತಿ ಸೇರಿದಂತೆ ಎಲ್ಲ ಆಡಳಿತಾತ್ಮಕ ಕೆಲಸಗಳೆಲ್ಲವೂ ಈ ಮೂಲಕವೇ ನಡೆಯಬೇಕು ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ್ ಅವರು ತಾಕೀತು ಮಾಡಿದರು. ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್ ಭಾಗಿಯಾಗಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications