ಮೂಡಿಗೆರೆ ಕಾಫಿ ತೋಟದಲ್ಲಿ ಧೂಳೆಬ್ಬಿಸಿದ ರೇಸ್ ಕಾರ್ಗಳು
ಚಿಕ್ಕಮಗಳೂರು, ನವೆಂಬರ್ 25 : ಪ್ರತಿಷ್ಠಿತ ಏಷ್ಯಾ ಪೆಸಿಫಿಕ್ ಮತ್ತು ಇಂಡಿಯನ್ ನ್ಯಾಷನಲ್ ರ್ಯಾಲಿಗೆ ಶುಕ್ರವಾರ (ನವೆಂಬರ್ 24) ಚಿಕ್ಕಮಗಳೂರಿನಲ್ಲಿ ಚಾಲನೆ ದೊರೆತಿದೆ. ಮೂರು ದಿನಗಳ ಕಾಲ ವಿವಿಧ ರೀತಿಯ ರೇಸ್ ಕಾರು ಅಬ್ಬರಕ್ಕೆ ಚಿಕ್ಕಮಗಳೂರು ಸಾಕ್ಷಿಯಾಗಲಿದೆ.
ಇಲ್ಲಿನ ಮೂಡಿಗೆರೆಯ ಚಂದ್ರಾಪುರ ಕಾಫಿ ಎಸ್ಟೇಟ್ ನಲ್ಲಿ ಕಾರುಗಳ ರೇಸ್ ನ ಮೊದಲ ಹಂತ ಮುಗಿದಿದೆ. ಕಾರುಗಳು ಮೂಡಿಗೆರೆ ಸಮೀಪದ ಚಟ್ನಹಳ್ಳಿ ಕಾಫಿ ತೋಟದಲ್ಲಿ ಸಂಚರಿಸಿ ಮೊದಲ ಹಂತ ಮುಗಿಸಿವೆ. ನಂತರ ಜಾಗರ ಮನೆ ಮುಖಾಂತರ ಕುಂಬರಗೋಡು, ಚಂದ್ರಾಪುರದಲ್ಲಿ 2ನೇ ಹಂತ ಮುಕ್ತಾಯಗೊಳ್ಳಲಿದೆ. ಭಾನುವಾರ ಬೆಳಿಗ್ಗೆ ಮೂಡಸಸಿ, ಜಾಗರಮನೆ, ಮತ್ತೆ ಮೂಡಸಸಿ, ಜಾಗರಮನೆಯನ್ನು ಸುತ್ತಿ ಕೊಂಡು ಎಬಿಸಿ ಆವರಣಕ್ಕೆ ಬಂದು ಸ್ಪರ್ಧೆ ಮುಕ್ತಾಯಗೊಳ್ಳಲಿದೆ. ಭಾನುವಾರ ಮಧ್ಯಾಹ್ನ ಎಬಿಸಿ ಆವರಣದಲ್ಲಿ ಪೋಡಿಯಂ ಅಂತ್ಯದ ನಂತರ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ.

ಈಗಾಗಲೇ ಮೊದಲ ಹಂತ ಮುಗಿಸಿರುವ ರೇಸರ್ ಗಳು ಶನಿವಾರ ಎರಡನೇ ಹಂತದ ರೇಸ್ ನಲ್ಲಿ ಪಾಲ್ಗೊಂಡಿದ್ದಾರೆ. ಸ್ಪರ್ಧೆಯಲ್ಲಿ ಎಪಿಆರ್ಸಿ ಮತ್ತು ಐಎನ್ಆರ್ಸಿ ಎಂಬ ಎರಡು ವಿಭಾಗಗಳಿದ್ದು, ಮೊದಲ ವಿಭಾಗದಿಂದ ಸ್ಪರ್ಧಿಸುವ ಸ್ಪರ್ಧಿಗಳು ಒಟ್ಟು 502 ಕಿ.ಮೀ ಕ್ರಮಿಸಬೇಕಿದ್ದು, ಇದರಲ್ಲಿ 207 ಕಿ.ಮೀ ವಿಶೇಷ ಹಂತ ಒಳಗೊಂಡಿರುತ್ತದೆ. ಎರಡನೇ ವಿಭಾಗದಲ್ಲಿ ಸ್ಪರ್ಧಿಸುವ ಸ್ಪರ್ಧಾಳುಗಳು 260 ಕಿ.ಮೀ ಕ್ರಮಿಸಬೇಕಾಗಿರುತ್ತದೆ.

ಏಷ್ಯಾ ಪೆಸಿಫಿಕ್ ರ್ಯಾಲಿಯ ಕಳೆದ ಬಾರಿಯ ಚಾಂಪಿಯನ್ ಗೌರವ್ ಗಿಲ್ ಅವರ ಮೇಲೆ ಎಲ್ಲರ ಕಣ್ಣೂ ನೆಟ್ಟಿದ್ದು ಈ ಬಾರಿಯೂ ಅವರೇ ಗೆಲ್ಲಬಹುದು ಎಂಬ ನಿರೀಕ್ಷೆ ಇದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications