ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪತ್ರಕರ್ತರು, ಹಿಂದೂ ಸಂಘಟನೆಯ ಮುಖಂಡರ ಹತ್ಯೆಗೆ ಸಂಚು ಸಾಬೀತು

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 15 : ಪತ್ರಕರ್ತರು, ರಾಜಕಾರಣಿಗಳು ಹಾಗೂ ಹಿಂದೂ ಸಂಘಟನೆಯ ಮುಖಂಡರ ಹತ್ಯೆ ಪ್ರಕರಣದಲ್ಲಿ 13 ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿದೆ. ರಾಷ್ಟ್ರೀಯ ತನಿಖಾ ದಳ 14 ಆರೋಪಿಗಳ ವಿರುದ್ಧ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು.

ಕರ್ನಾಟಕ, ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ ಹಿಂದೂ ಪರ ಸಂಘಟನೆಗಳ ಮುಖಂಡರ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ 14 ಆರೋಪಿಗಳನ್ನು ಬಂಧಿಸಲಾಗಿತ್ತು. ಇವರಲ್ಲಿ 13 ಜನರ ವಿರುದ್ಧದ ಆರೋಪ ಸಾಬೀತಾಗಿದೆ. ಪ್ರಕರಣದಲ್ಲಿನ ಒಬ್ಬ ಆರೋಪಿ ಝಾಕೀರ್ ತಲೆ ತಪ್ಪಿಸಿಕೊಂಡಿದ್ದಾನೆ.[ಭಟ್, ಸಿಂಹ, ಸಂಕೇಶ್ವರ್ ಹತ್ಯೆಗೆ ಉಗ್ರರ ಸಂಚು]

Assassination of Hindus plot- 13 Lashkar men convicted

ಮೊದಲು ಬೆಂಗಳೂರಿನ ಸಿಸಿಬಿ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದರು. ನಿಷೇಧಿತ ಲಷ್ಕರ್ ಐ ತೋಯ್ಬಾ ಸಂಘಟನೆಯ ಸದಸ್ಯರು ಹುಬ್ಬಳ್ಳಿ ಮತ್ತು ಬೆಂಗಳೂರಿನ ಹಿಂದೂ ಪರ ಸಂಘಟನೆಗಳ ಸದಸ್ಯರನ್ನು ಕೊಲ್ಲಲು ಸಂಚು ರೂಪಿಸಿದ್ದರು.['ಪ್ರತಾಪ್ ಮದುವೆ' ಪೌರೋಹಿತ್ಯ ವಹಿಸಿದ್ದ ಉಗ್ರರ ಪ್ರವರ]

ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ಮಹಾರಾಷ್ಟ್ರ ಮತ್ತು ತೆಲಂಗಾಣದ ಮುಖಂಡರನ್ನು ಹತ್ಯೆ ಮಾಡಲು ಸಂಚು ರೂಪಿಸಿರುವು ಬೆಳಕಿಗೆ ಬಂದಿತ್ತು. ಕನ್ನಡ ದಿನಪತ್ರಿಕೆಯೊಂದರ ಅಂಕರಣಕಾರನನ್ನು ಹತ್ಯೆ ಮಾಡಲು ಸಂಚು ರೂಪಿಸಿರುವುದು ಬೆಳಕಿಗೆ ಬಂದಿತ್ತು.

ಹಿಂದೂ ಸಂಘಟನೆಗಳ ಮುಖಂಡರನ್ನು ಹತ್ಯೆ ಮಾಡಲು ರಿಯಾದ್‌ನಲ್ಲಿ ಸಂಚು ರೂಪಿಸಲಾಗಿತ್ತು ಎಂದು ಎನ್‌ಐಎ ಹೇಳಿತ್ತು. ಬೆಂಗಳೂರು, ಹುಬ್ಬಳ್ಳಿ, ನಾಂದೇಡ್ ಮತ್ತು ಹೈದರಾಬಾದ್‌ನಲ್ಲಿನ ಹಿಂದೂ ಪರ ಸಂಘಟಬನೆಗಳ ಸದಸ್ಯರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎಂಬುದು ಆರೋಪವಾಗಿತ್ತು.

English summary
A special court today convicted 13 persons in connection with the assassination plot or the Lashkar-e-Tayiba conspiracy case. The National Investigation Agency had chargesheeted 14 persons in this case after it was found that they were involved in a plot that aimed at killing prominent Hindu leaders from Karnataka, Telangana and Maharashtra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X