ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಚುನಾವಣೆ : ಮಂಗಳವಾರ ಮಹತ್ವದ ಸಭೆ

|
Google Oneindia Kannada News

ಬೆಂಗಳೂರು, ಜನವರಿ 08 : ಕೇಂದ್ರ ಚುನಾವಣಾ ಆಯೋಗದ ಉಪ ನಿರ್ದೇಶಕರು ಮಂಗಳವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ.

ವಿಧಾನಸಭೆ ಚುನಾವಣೆ ಸಿದ್ಧತೆ ಕುರಿತು ಚರ್ಚೆ ನಡೆಸಲು ಉಪ ನಿರ್ದೇಶಕರು ಆಗಮಿಸಲಿದ್ದಾರೆ. ಮಂಗಳವಾರದ ವಿವಿಧ ಸಭೆಗಳನ್ನು ಅವರು ನಡೆಸಲಿದ್ದು, ನಂತರ ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ನೀಡಲಿದ್ದಾರೆ.

ಇವಿಎಂ: ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯಸರ್ಕಾರ ಪತ್ರಇವಿಎಂ: ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯಸರ್ಕಾರ ಪತ್ರ

ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಜೊತೆ ಉಪ ನಿರ್ದೇಶಕರು ಸಭೆ ನಡೆಸಲಿದ್ದಾರೆ. ಬಳಿಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ರಾಜ್ಯ ಪೊಲೀಸ್ ಆಯುಕ್ತರಾದ ನೀಲಮಣಿ ರಾಜು ಅವರ ಜೊತೆ ಸಭೆ ನಡೆಸಲಿದ್ದಾರೆ.

Assembly elections 2018 : Election commission meeting on January 9

ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಂಗಳವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಜಿಲ್ಲಾಧಿಕಾರಿಗಳ ಜೊತೆ ಪ್ರತ್ಯೇಕ ಸಭೆ ನಡೆಸಲಿದ್ದಾರೆಯೇ? ಎಂಬುದು ಇನ್ನೂ ಅಂತಿಮವಾಗಿಲ್ಲ.

ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅವಧಿ ವಿಸ್ತರಣೆಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅವಧಿ ವಿಸ್ತರಣೆ

ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳಿನಲ್ಲಿ ನಡೆಯುವ ಸಾಧ್ಯತೆ ಇದೆ. ಮಂಗಳವಾರದ ಸಭೆಯ ಬಳಿಕ ದೆಹಲಿಯಲ್ಲಿ ಅಧಿಕಾರಿಗಳು ಮತ್ತೊಮ್ಮೆ ಸಭೆ ನಡೆಸಿ, ಚುನಾವಣಾ ಸಿದ್ಧತೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.

English summary
Deputy Election Commissioner of Election commission of India will visit Karnataka on January 9, 2018. Ahead of the assembly elections in state he will chair various meetings.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X