ಆನೇಕಲ್ ಚುನಾವಣಾ ಕಣದಲ್ಲಿ ಜೆಎನ್ ಯು ಪದವೀಧರ, ಬಿಎಂಎಸ್ ಕಾಲೇಜು ಉಪನ್ಯಾಸಕ
ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ಅಲುಮ್ನಿ, ಕಳೆದ 20 ವರ್ಷಗಳಿಂದ ಬಹುಜನ ವಿದ್ಯಾರ್ಥಿ ಹೋರಾಟದಲ್ಲಿ ಸಕ್ರಿಯರಾಗಿರುವ ಡಾ. ಶ್ರೀನಿವಾಸ್ ಗುಂಡಪ್ಪ(38) ಅವರು ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿದಿದ್ದಾರೆ.
ಬೆಂಗಳೂರಿನ ಆನೇಕಲ್ (ಎಸ್ ಟಿ) ಮೀಸಲು ಕ್ಷೇತ್ರದಿಂದ 15ನೇ ವಿಧಾನಸಭೆಗೆ ಪ್ರವೇಶ ಬಯಸಿ ಕಣದಲ್ಲಿದ್ದಾರೆ. ಮಾನವ ಹಕ್ಕುಗಳು ವಿಷಯ ಕುರಿತಂತೆ ದೆಹಲಿಯ ಪ್ರತಿಷ್ಠಿತ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದದಿಂದ ಡಾಕ್ಟರೇಟ್ ಹಾಗೂ ಪೊಲಿಟಿಕಲ್ ಸೈನ್ಸ್ ನಲ್ಲಿ ಮಾಸ್ಟರ್ ಪದವಿ ಪಡೆದುಕೊಂಡಿದ್ದಾರೆ.

ಇದಲ್ಲದೆ, ಚೀನಾ ಮತ್ತು ಭಾರತದಲ್ಲಿನ ಮಾನವ ಹಕ್ಕುಗಳ ತುಲನೆ ಅಧ್ಯಯನ ಮಾಡಿ ಯುರೋಪಿಯನ್ ಸ್ಟಡೀಸ್ ಸೆಂಟರ್ ನಿಂದ ಡಾಕ್ಟರೇಟ್ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಕಾಲೇಜಿನಲ್ಲಿ ಉಪನ್ಯಾಸಕ, ಬಿಎಸ್ಪಿ ಅಭ್ಯರ್ಥಿ
ಮಾಸ್ಟರ್ ಪಡೆದ ಬಳಿಕ ಎಂಎಸ್ ರಾಮಯ್ಯ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದರು. ಸದ್ಯ ಬಿಎಂಎಸ್ ಕಾನೂನು ಕಾಲೇಜಿನಲ್ಲಿ ಪಾಠ ಮಾಡುತ್ತಿದ್ದಾರೆ.
ಬಿಎಸ್ ಪಿಯ ಮುಖ್ಯಸ್ಥೆ ಮಾಯಾವತಿ ಅವರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಚುನಾವಣಾ ಚಟುವಟಿಕೆ ನೋಡಿಕೊಳ್ಳಲು ನಿಯುಕ್ತರಾಗಿದ್ದ ಶ್ರೀನಿವಾಸ್ ಅವರಿಗೆ ಕೊನೆ ಕ್ಷಣದವರೆಗೂ ತಾನು ಕೂಡ ಸ್ಪರ್ಧಿಯಾಗಿ ಕಣಕ್ಕಿಳಿಯಬೇಕಾಗಬಹುದು ಎಂಬ ನಿರೀಕ್ಷೆ ಕೂಡಾ ಇರಲಿಲ್ಲ.
ಬಿಎಸ್ ಪಿ-ಜೆಡಿಎಸ್ ಮೈತ್ರಿಕೂಟ ಅಭ್ಯರ್ಥಿ ವೈ ಕೃಷ್ಣಮೂರ್ತಿ ಪರ ಪ್ರಚಾರ ನಡೆಸುತ್ತಿದ್ದರು. ಈಗ ಚುನಾವಣಾ ಕಣದಲ್ಲಿ ಸ್ಪರ್ಧಿಯಾಗಿದ್ದಾರೆ. ಆನೇಕಲ್ ನಲ್ಲಿ ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಬಿ ಶಿವಣ್ಣ, ಬಿಜೆಪಿಯ ಅಭ್ಯರ್ಥಿ, ಮಾಜಿ ಶಾಸಕ ಎ ನಾರಾಯಣ ಸ್ವಾಮಿ ವಿರುದ್ಧ ಸೆಣೆಸುತ್ತಿದ್ದಾರೆ. ಬೂತ್ ಮಟ್ಟದಿಂದ ಕಾರ್ಯಕರ್ತರ ಜತೆ ಬೆರೆತು, ಸಂಘಟನೆ ಮಾಡುತ್ತಿದ್ದಾರೆ. ಬಯಸದೇ ಬಂದ ಭಾಗ್ಯದಿಂದ ಕಣಕ್ಕಿಳಿದಿದ್ದು, ಬದಲಾವಣೆ ತರುವ ಸಂಕಲ್ಪ ಹೊಂದಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications