Karnataka Assembly Elections: ಮಾರ್ಚ್ 9ರಂದು ಸರ್ವಪಕ್ಷಗಳ ಸಭೆ ಕರೆದ ಚುನಾವಣಾ ಆಯೋಗ
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023: ಮಾರ್ಚ್ 9ರಂದು ರಾಜ್ಯದ ರಾಜಕೀಯ ಪಕ್ಷಗಳೊಂದಿಗೆ ಚುನಾವಣಾ ಆಯೋಗ ಮಹತ್ವದ ಸಭೆಯನ್ನು ನಡೆಸಲಿದೆ.
ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರಬಲ ಪಕ್ಷಗಳು ಭರದ ಸಿದ್ಧತೆಯನ್ನು ನಡೆಸಿವೆ. ಚುನಾವಣೆಗೆ ದಿನಾಂಕ ನಿಗಧಿ ಇನ್ನೂ ಕೂಡ ಆಗಿಲ್ಲ. ಚುನಾವಣಾ ಆಯೋಗ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದರ ನಡುವೆ ಮಾರ್ಚ್ 9ರಂದು ರಾಜ್ಯದ ರಾಜಕೀಯ ಪಕ್ಷಗಳೊಂದಿಗೆ ಮಹತ್ವದ ಸಭೆಯನ್ನು ನಡೆಸಲಿದೆ.
ಈ ಬಗ್ಗೆ ಚುನಾವಣಾ ಆಯೋಗ ಸೂಚನೆಯನ್ನು ನೀಡಿದೆ. ದಿನಾಂಕ 09-03-2023ರಂದು ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಸಿದ್ಧತೆಯನ್ನು ಪರಿಶೀಲಿಸಲು, ಕರ್ನಾಟಕಕ್ಕೆ ಭೇಟಿ ನೀಡುತ್ತಿದೆ ಎಂದು ತಿಳಿಸಿದೆ. ಈ ವೇಳೆ ವಿಕಾಸ ಸೌಧದ ಕೊಠಡಿ ಸಂಖ್ಯೆ 422ರಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಲು ಆಯೋಗ ನಿರ್ಧರಿಸಿದೆ.

ಇದರೊಂದಿಗೆ ಆಯೋಗ ಸಭೆ ನಡೆಸುವ ಸಮಯವನ್ನು ನಿಗಧಿ ಮಾಡಿದೆ. ಪ್ರತೀ ಪಕ್ಷಕ್ಕೂ ಪ್ರತ್ಯೇಕ ಸಮಯವನ್ನು ನಿಗಧಿ ಪಡಿಸಲಾಗಿದೆ. ಮಾರ್ಚ್ 9ರಂದು ಮಧ್ಯಾಹ್ನ 2.30 ರಿಂದ 2.40ರವರೆಗೆ ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್ ಜೊತೆಗೆ ಚುನಾವಣಾ ಆಯೋಗ ಸಭೆ ನಡೆಸಲಿದೆ. ಬಳಿಕ 40 ರಿಂದ 2.50ರವರೆಗೆ ಬಹುಜನ ಸಮಾಜ ಪಾರ್ಟಿ ಜೊತೆಗೆ, 2.50 ರಿಂದ 3 ಗಂಟೆಯವರೆಗೆ ಬಿಜೆಪಿ ಪಕ್ಷದೊಂದಿಗೆ, 3ರಿಂದ 3.10ರವರೆಗೆ ಸಿಪಿಎಂ, 3.10 ರಿಂದ 3.20 ಸಿಪಿಎಂ ಮ್ಯಾಕ್ಸಿಸ್, 3.20ರಿಂದ 3.30ರವರೆಗೆ ಕಾಂಗ್ರೆಸ್ ಪಕ್ಷದೊಂದಿಗೆ, 3.30ರಿಂದ 3.40ರವರೆಗೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ, 3.40 ರಿಂದ 3.50ರವರೆಗೆ ನ್ಯಾಷನಲ್ ಪೀಪಲ್ಸ್ ಪಾರ್ಟಿ ಹಾಗೂ 3.50 ರಿಂದ 4 ಗಂಟೆಯವರೆಗೆ ಜೆಡಿಎಸ್ ಪಕ್ಷದ ಮುಖಂಡರೊಂದಿಗೆ ಸಭೆಯನ್ನು ಚುನಾವಣಾ ಆಯೋಗದ ಅಧಿಕಾರಿಗಳು ನಡೆಸಲಿದ್ದಾರೆ.

ಇನ್ನೂ ಈ ಸಭೆಯ ಬಳಿಕ, ಚುನಾವಣೆಗೆ ದಿನಾಂಕ ಕೂಡ ನಿಗಧಿಯಾಗುವ ಲಕ್ಷಣಗಳು ಇವೆ. ಇದೇ ತಿಂಗಳಿನಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ 2023ರ ದಿನಾಂಕವನ್ನು ಘೋಷಿಸೋ ಸಾಧ್ಯತೆ ಇದೆ. ಆ ಬಗ್ಗೆ ಯಾವಾಗ ಎಂಬುದನ್ನು ಚುನಾವಣಾ ಆಯೋಗದ ಘೋಷಣೆಯ ಬಳಿಕ ಖಚಿತಗೊಳ್ಳಲಿದೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications